Cabinet approves: ರೈತಗೆ ಬಂಪರ್; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ
6 ಬೆಳೆಗೆ ಬೆಂಬಲ ಬೆಲೆ ಹೆಚ್ಚಿಸಲು ಸಂಪುಟ ನಿರ್ಧಾರ
Team Udayavani, Oct 17, 2024, 6:45 AM IST
ಹೊಸದಿಲ್ಲಿ: 2025-26ನೇ ಸಾಲಿಗೆ ಅನ್ವಯವಾಗುವಂತೆ ಹಿಂಗಾರು ಬೆಳೆಗಳಿಗೆ ಹೊಸ ಬೆಂಬಲ ಬೆಲೆಯನ್ನು ಘೋಷಣೆ ಮಾಡಲಾಗಿದ್ದು, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹಿಂಗಾರು ಸಮಯದಲ್ಲಿ ರೈತರ ಆದಾಯವನ್ನು ಹೆಚ್ಚಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಗೋಧಿಯ ಬೆಂಬಲ ಬೆಲೆಯನ್ನು ಕ್ವಿಂಟಾಲ್ಗೆ 150 ರೂ. ಹೆಚ್ಚಳ ಮಾಡಲಾಗಿದ್ದು, ಬೆಲೆ 2,425 ರೂ.ಗೆ ಏರಿಕೆ ಯಾಗಿದೆ. ಸಾಸಿವೆ ಬೆಲೆಯನ್ನು ಕ್ವಿಂಟಾಲ್ಗೆ 300 ರೂ. ಏರಿಸಿದ್ದು, 5,650 ರೂ.ನಿಂದ 5,950 ರೂ.ಗೆಏರಿದೆ. ಕಡಲೆ ಕಾಳಿನ ಬೆಂಬಲ ಬೆಲೆಯನ್ನು 210 ರೂ. ಹೆಚ್ಚಿಸಲಾಗಿದೆ.
ಪಿಎಂ ಅನ್ನದಾತ ಯೋಜನೆಗೆ 35,000 ಕೋಟಿ ರೂ.
ರೈತರಿಗೆ ಲಾಭ ಒದಗಿಸುವ ಜತೆಗೆ ಮಾರುಕಟ್ಟೆ ದರವನ್ನು ನಿಯಂತ್ರಿಸುವ ಪ್ರಧಾನಮಂತ್ರಿ ಅನ್ನದಾತ ಅಯಾ ಸಂರಕ್ಷಣ ಅಭಿಯಾನ ಯೋಜನೆಗೆ 35,000 ಕೋಟಿ ರೂ. ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸುಗ್ಗಿಯ ಸಮಯದಲ್ಲಿ ರೈತರು ಬೆಲೆ ಕುಸಿತದಿಂದ ಕಂಗಾಲಾಗುವುದನ್ನು ಈ ಯೋಜನೆ ತಪ್ಪಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ
India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!
Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು
Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ
Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.