Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ
Team Udayavani, Oct 17, 2024, 9:02 AM IST
ನವದೆಹಲಿ: ಕಣ್ಣಿಗೆ ಕಪ್ಪು ಪಟ್ಟಿ ಧರಿಸಿಲ್ಲದ ಮತ್ತು ಕೈಯಲ್ಲಿ ಖಡ್ಗದ ಬದಲಾಗಿ ಸಂವಿಧಾನದ ಪ್ರತಿ ಹಿಡಿದಿರುವ ನೂತನ ನ್ಯಾಯ ದೇವತೆಯ ಪ್ರತಿಮೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಅನಾವರಣಗೊಳಿಸಲಾಗಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ಆದೇಶದಂತೆ ಈ ವಿಗ್ರಹಯನ್ನು ನ್ಯಾಯಮೂರ್ತಿಗಳ ಗ್ರಂಥಾಲಯದಲ್ಲಿ ಸ್ಥಾಪಿಸಲಾಗಿದ್ದು, ಇದು ವಸಾಹತು ಶಾಹಿ ಪರಂಪರೆಯನ್ನು ಕಳಚಿಕೊಳ್ಳುವ ಭಾಗವಾಗಿದೆ ಎನ್ನಲಾಗಿದೆ. ಕಣ್ಣು ಪಟ್ಟಿ ಇಲ್ಲದೇ ಕಣ್ಣುಗಳನ್ನು ತೆರೆದಿರುವ ಮತ್ತು ಖಡ್ಗಗಳನ್ನು ಹಿಡಿಯದ ನ್ಯಾಯದೇವತೆಯ ಪ್ರತಿಮೆಯ ಮೂಲಕ ದೇಶದಲ್ಲಿ ಕಾನೂನು ಕುರುಡಾ ಗಿಲ್ಲ ಮತ್ತು ನ್ಯಾಯದೇವತೆಯು ಶಿಕ್ಷೆಯ ಸಂಕೇತವಲ್ಲ ಎಂಬ ಸಂದೇಶವನ್ನು ಸಾರಲಾಗುತ್ತಿದೆ.
ಈವರೆಗೆ ಕಪ್ಪುಪಟ್ಟಿಯು ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬು ದನ್ನು ಪ್ರತಿನಿಧಿಸುತ್ತಿತ್ತು. ಕೋರ್ಟ್ ಯಾವತ್ತೂ ತನ್ನ ಮುಂದೆ ಬರುವವರ ಸಂಪತ್ತು, ಅಧಿಕಾರ ನೋಡುವುದಿಲ್ಲ ಎಂಬ ಸಂದೇಶ ಸಾರುತ್ತಿತ್ತು. ನ್ಯಾಯದೇವತೆಯ ಕೈಯ್ಯಲ್ಲಿದ್ದ ಖಡ್ಗವು ಅನ್ಯಾಯವನ್ನು ಶಿಕ್ಷಿಸುವ ಅಧಿಕಾರವನ್ನು ತೋರಿಸುತ್ತಿತ್ತು. ಈಗ ನ್ಯಾಯ ಕುರುಡಲ್ಲ ಎಂಬ ಸಂದೇಶದೊಂದಿಗೆ ನ್ಯಾಯದೇವತೆಯ ಕಣ್ಣುಗಳನ್ನು ತೆರೆಯಲಾಗಿದೆ.
ಇದನ್ನೂ ಓದಿ: Heavy Rain: ತಮಿಳುನಾಡಿನ ತಿರುವಳ್ಳೂರಲ್ಲಿ ಒಂದೇ ದಿನ 30 ಸೆಂ.ಮೀ.ಮಳೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab: ಶಿವಸೇನಾ ಮುಖಂಡನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ…
Supreme Court ಮುಂದಿನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು
Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ
India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!
Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು
MUST WATCH
ಹೊಸ ಸೇರ್ಪಡೆ
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!
Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್
Oscars 2025: ಆಸ್ಕರ್ ರೇಸ್ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್ ವೈರಲ್
Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.