Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ
Team Udayavani, Oct 17, 2024, 10:49 AM IST
ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನಗರದ ರಸ್ತೆಗಳು ಕೆರೆಯಂತಾಗಿದ್ದು, ರಸ್ತೆ ಕಾಣದೆ ಚರಂಡಿಗೆ ಬಿದ್ದು ಬಾಲಕನೊಬ್ಬ ಕೊಚ್ಚಿ ಹೋದ ಘಟನೆ ನಗರದ ಎಸ್.ಪಿ. ಕಚೇರಿ ಮುಂಭಾಗದಲ್ಲಿ ನಡೆದಿದೆ.
ನೀವೆದನ್ ಬಸವರಾಜ ಗುಡಗೇರಿ (12) ಚರಂಡಿಯಲ್ಲಿಕೊಚ್ಚಿ ಹೋದ ಬಾಲಕ. ರಾತ್ರಿ ಸುರಿದ ಮಳೆಯಿಂದಾಗಿ ನಗರದ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರೆಯುತ್ತಿದ್ದು, ರಸ್ತೆ ಯಾವುದು ಚರಂಡಿ ಯಾವುದು ಎಂಬದು ಗೊತ್ತಾಗಂತಾಗಿದೆ. ಬೆಳಗ್ಗೆ ಬಾಲಕ ರಸ್ತೆಯಲ್ಲಿ ಸಂಚರಿಸುವ ನೀರು ಹರಿಯುತ್ತಿದ್ದರಿಂದ ಚರಂಡಿ ಇರುವುದು ಗೊತ್ತಾಗದೆ ಚರಂಡಿ ಮೇಲೆ ಕಾಲಿಟ್ಟಾಗ ನೀರಿನಲ್ಲಿ ಕೊಚ್ಚಿಹೊಗಿದ್ದಾನೆ ಎನ್ನಲಾಗುತ್ತಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಅಂಶುಕುಮಾರ, ನಗರಸಭೆ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ಬಾಲಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಅನಾಥಶ್ರಮಕ್ಕೆ ನುಗ್ಗಿದ ನೀರು
ಹಾವೇರಿಯ ನಾಗೇಂದ್ರನಮಟ್ಟಿಯಲ್ಲಿರುವ ಶಕ್ತಿ ಅನಾಥಶ್ರಮಕ್ಕೆ ನೀರು ನುಗ್ಗಿ ಜಲಾವೃತಗೊಂಡಿದೆ. ಆಶ್ರಮದಲ್ಲಿರುವ 17 ಜನ ವೃದ್ಧರು ನೀರಿನಲ್ಲಿ ನೆನೆಯುವಂತಾಗಿದೆ. ಬಳಿಕ ಸ್ಥಳಕ್ಕಾಗಮಿಸಿದ ಅಧಿಕಾರಿಗಳು ನಗರಸಭೆ ಸಮೀಪವಿರುವ ನಿರಾಶ್ರಿತರ ಕೇಂದ್ರಕ್ಕೆ ಸ್ಥಳಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು
Ullala: ಇನ್ಸ್ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ
Mangaluru: ನಿತ್ಯ ಟ್ರಾಫಿಕ್ ಜಾಮ್ ಗೋಳು; ವಾಹನ ಸವಾರರ ಪರದಾಟ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Kinnigoli: ಮೂರು ಕಾವೇರಿ ಜಂಕ್ಷನ್ನಲ್ಲೇ ಬೃಹತ್ ಟ್ಯಾಂಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.