Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ


Team Udayavani, Oct 17, 2024, 10:40 AM IST

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

ಬೆಂಗಳೂರು: ಕಳೆದೆರಡು ದಿನಗಳಿಂದ ರಾಜಧಾನಿ ವ್ಯಾಪ್ತಿಯಲ್ಲಿ ಸುರಿದ ಮಳೆ ಬಿಬಿಎಂಪಿ ಗುಂಡಿ ಮುಚ್ಚಿದ ಕಳಪೆ ಕಾಮಗಾರಿಯನ್ನು ಬೆತ್ತಲು ಮಾಡಿದೆ. ಪ್ರತಿ ವಾರ್ಡ್‌ಗೆ ಗುಂಡಿ ಮುಚ್ಚಲು ಪಾಲಿಕೆ 15 ಲಕ್ಷ ರೂ. ನೀಡಿದ್ದು, ಕಳೆದ ಕೆಲವು ವಾರಗಳ ಹಿಂದಷ್ಟೇ ಮುಚ್ಚಿದ್ದ ರಸ್ತೆಗಳು ಜೆಲ್ಲಿ ಕಲ್ಲು ಸಮೇತ ಬಾಯ್ತೆರೆದು ಕೊಂಡಿದ್ದು, ಬಿಬಿಎಂಪಿ ಕಳಪೆ ಕಾಮಗಾರಿಯನ್ನು ಅನಾವರಣ ಮಾಡಿದೆ.

ಜಯನಗರದ ರಾಘವೇಂದ್ರ ಸ್ವಾಮಿ ದೇವಸ್ಥಾನದ ಮುಂದೆ ಯಂತೂ ದೊಡ್ಡ ಗಾತ್ರದ ರಸ್ತೆ ಗುಂಡಿ ಗಳು ಬಿದ್ದಿ ದ್ದು ವಾಹನ ಸವಾರರು ಓಡಾಡುವುದೇ ದುಸ್ತರವಾಗಿದೆ. ಜತೆಗೆ ರಾಗಿಗುಡ್ಡದ ಸಿಗ್ನಲ್‌ ಸಮೀಪ ಕೂಡ ಜೆಲ್ಲಿ ಕಲ್ಲುಗಳ ಎದ್ದು ಆಳ ಗುಂಡಿಗಳು ಬಿದ್ದಿದ್ದು, ಸಾರ್ವಜನಿಕರು ಪಾಲಿಕೆ ಕಾರ್ಯ ವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ರ್ಯಾಂಡ್‌ ಬೆಂಗಳೂರು ಹೆಸರಿನಲ್ಲಿ ಕಳಪೆ ರಸ್ತೆ ನಿರ್ಮಿಸಲಾಗಿದೆ. ರಸ್ತೆ ಗುಂಡಿ ಮುಚ್ಚುವ ಯೋಜನೆ ಹಣ ಮಾಡುವ ಸ್ಕೀಮ್‌ ಆಗಿದೆ ಎಂದು ಸಿಟ್ಟು ಹೊರ ಹಾಕಿದರು. ಶಾಂತಿನಗರ, ಕೆ.ಆರ್‌.ಮಾರುಕಟ್ಟೆ, ಶಿವಾಜಿನಗರ, ಸಂಪಂಗಿರಾಮನಗರ, ಡಬಲ್‌ ರೋಡ್‌, ರಿಚ್ಮಂಡ್‌ ಟೌನ್‌, ಗರುಡ ಮಹಲ್‌, ಕೋರಮಂಗಲ, ಬಿಟಿಎಂ ಲೇಔಟ್‌. ಬನ್ನೇರುಘಟ್ಟ ರಸ್ತೆ, ವಸಂತ ನಗರ, ಹಲಸೂರು, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ್‌ ಸಿಟಿ ಪ್ರದೇಶ, ವಿಜಯನಗರ, ಜೆಪಿನಗರ, ಬನಶಂಕರಿ, ಮೈಸೂರು ರಸ್ತೆ. ರಾಜಾಜಿನಗರ, ಯಶವಂತಪುರ, ಪೀಣ್ಯಾ ಕೈಗಾರಿಕಾ ಪ್ರದೇಶ, ಎಚ್‌.ಎ. ಎಲ್‌ ಸೇರಿದಂತೆ ಪಾಲಿಕೆಯ ಎಂಟೂ ವಲಯಗಳಲ್ಲಿ ದೊಡ್ಡ ಗಾತ್ರದ ಗುಂಡಿ ಬಿದ್ದಿದ್ದು ವಾಹನ ಸವಾರರು ಓಡಾಟ ನಡೆಸಲು ಭಯ ಪಡುತ್ತಿದ್ದಾರೆ. ಶಾಂತಿನಗರದ ಪ್ರಮುಖ ರಸ್ತೆಯಲ್ಲಿ ಮಾರು ದ್ದದಷ್ಟು ರಸ್ತೆ ಬಾಯ್ತೆರೆದಿದೆ.

ಮಳೆಯಿಂದ ಇಡೀ ರಸ್ತೆ ಅದ್ವಾನವಾಗಿದೆ. ಬೆಂಗಳೂರಿನಲ್ಲಿ ಸುರಿಯು ತ್ತಿರುವ ಮಳೆಗೆ ಬಿಬಿಎಂಪಿಯ ನಿಜವಾದ ಬಣ್ಣ ಬಯಲಾಗಿದೆ. “ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅದೇನು ರಸ್ತೆ ಪರಿಶೀಲನ ಮಾಡಿದರೋ ಗೊತ್ತಿಲ್ಲ’ ಎಂದು ಬೈಕ್‌ ಸವಾರರು ಸಿಟ್ಟು ಹೊರಹಾಕಿದರು.

ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಇದೀಗ ಮಳೆಯಿಂದಾಗಿ ಮತ್ತಷ್ಟು ರಸ್ತೆ ಹಾಳಾಗಿದೆ. ಬಸ್‌ ಚಾಲಕರು ಸಂಚರಿಸಲು ಹೈರಾಣ ಪಡುತ್ತಿದ್ದಾರೆ. ಧನ್ವಂತರಿ ರಸ್ತೆ ಹಾಗೂ ಗುಬ್ಬಿ ತೋಟದಪ್ಪ ರಸ್ತೆ ಮೂಲಕ ಬಿಎಂಟಿಸಿ ಬಸ್‌ ನಿಲ್ದಾಣದ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿಂದಲೇ ತುಂಬಿಕೊಂಡಿದೆ. ಇದೇ ರಸ್ತೆ ಮೂಲಕವೇ ಬಿಎಂಟಿಸಿ ಬಸ್‌ಗಳೆಲ್ಲಾ ಬಸ್‌ ನಿಲ್ದಾಣವನ್ನು ಪ್ರವೇಶಿಸಬೇಕು. ಗುಂಡಿಗಳನ್ನು ತಪ್ಪಿಸಲು ಬಿಎಂಟಿಸಿ ಬಸ್‌ ಚಾಲಕರು ಹರಸಾಹಸಪಡುತ್ತಾರೆ.

ಟಾಪ್ ನ್ಯೂಸ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Bellary; B Nagendra dance at Valmiki Jayanti event

Bellary; ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ನಾಗೇಂದ್ರ ಭರ್ಜರಿ ಡ್ಯಾನ್ಸ್

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

6(1)

Kinnigoli: ಮೂರು ಕಾವೇರಿ ಜಂಕ್ಷನ್‌ನಲ್ಲೇ ಬೃಹತ್‌ ಟ್ಯಾಂಕ್‌!

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.