Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌


Team Udayavani, Oct 17, 2024, 12:18 PM IST

8

ಹೈದರಾಬಾದ್:‌ ವಿಶ್ವದಾದ್ಯಂತ ಕಮಾಲ್‌ ಮಾಡಿದ ಪ್ರಭಾಸ್ (Prabhas) ʼಕಲ್ಕಿ 2898 ಎಡಿʼ (Kalki 2898 AD)‌ ಥಿಯೇಟರ್‌ ಬಳಿಕ  ಓಟಿಟಿಯಲ್ಲೂ ಸದ್ದು ಮಾಡಿದೆ. ಸಿನಿಮಾದ ಎರಡನೇ ಭಾಗಕ್ಕೆ ಪ್ರೇಕ್ಷಕರು ಕಾಯುತ್ತಿದ್ದಾರೆ.

ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ 1200 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿ ʼಕಲ್ಕಿʼ ಹತ್ತಾರು ದಾಖಲೆಗಳನ್ನು ಬ್ರೇಕ್‌ ಮಾಡಿದೆ. ಸಿನಿಮಾದ ಯಶಸ್ಸು ವರ್ಲ್ಡ್‌ ವೈಡ್‌ ನಲ್ಲಿ ಸದ್ದು ಮಾಡಿದೆ.

ಪೌರಾಣಿಕ ಕಥೆಯಲ್ಲಿ ಆ್ಯಕ್ಷನ್ ಅಂಶಗಳನ್ನು ಸೇರಿಸಿ ಸಿನಿಮಾವನ್ನು ಮಾಡಲಾಗಿದೆ. ಅಭಿನಯ, ಚಿತ್ರಕಥೆ ಹಾಗೂ ವಿಎಫ್ ಎಕ್ಸ್‌ ವಿಚಾರದಲ್ಲಿ ʼಕಲ್ಕಿʼ ಪ್ರೇಕ್ಷಕರನ್ನು ರಂಜಿಸಿದೆ.

ಓಟಿಟಿಯಲ್ಲೂ ಭರ್ಜರಿ ಪ್ರದರ್ಶನ ಕಂಡ ಬಳಿಕ ಇದೀಗ, ʼಕಲ್ಕಿ 2898 ಎಡಿʼ ಆಸ್ಕರ್‌ಗೆ (Oscars 2025) ಶಾರ್ಟ್‌ ಲಿಸ್ಟ್‌ ಆಗಿದೆ ಎನ್ನುವ ಪೋಸ್ಟ್‌ ವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಅತ್ಯುತ್ತಮ ವಿಷುವಲ್ ಎಫೆಕ್ಟ್ಸ್ ವಿಭಾಗದಲ್ಲಿ ʼಕಲ್ಕಿ 2898 ಎಡಿʼ2025ರ ಆಸ್ಕರ್ ಗೆ ನಾಮಿನೇಟ್‌ ಆಗಿದೆ ಎಂದು ʼಎಕ್ಸ್‌ʼ ಪೋಸ್ಟ್‌ವೊಂದರಲ್ಲಿ ಹೇಳಲಾಗಿದೆ. ಈ ಪೋಸ್ಟ್‌ ಎಲ್ಲೆಡೆ ಹರಿದಾಡಿದ್ದು, ಕೆಲ ಪ್ರೇಕ್ಷಕರು ಇದನ್ನೇ ಸತ್ಯವೆಂದು ನಂಬಿದ್ದಾರೆ.

‘ಕಲ್ಕಿ 2898 AD’ ಅತ್ಯುತ್ತಮ ವಿಷುವಲ್ ಎಫೆಕ್ಟ್ಸ್ ವಿಭಾಗದ 26 ಸಂಭಾವ್ಯ ನಾಮಿನೇಷನ್‌ ಪಟ್ಟಿಯಲ್ಲೂ ಇಲ್ಲ. ಈ ವಿಭಾಗದ ಶಾರ್ಟ್‌ ಲಿಸ್ಟ್ ನಲ್ಲಿ 20 ಸಿನಿಮಾಗಳಿರುತ್ತವೆ. ಅದರಲ್ಲಿ ಐದನ್ನು ಮಾತ್ರ ಅಂತಿಮ ನಾಮನಿರ್ದೇಶನಕ್ಕೆ ಕಳುಹಿಸಲಾಗುತ್ತದೆ. ಶಾರ್ಟ್‌ ಲಿಸ್ಟ್ ನ್ನು ಡಿಸೆಂಬರ್ 17 ರಂದು ಪ್ರಕಟಿಸಲಾಗುತ್ತದೆ ಎಂದು ʼದಿ ಹಾಲಿವುಡ್‌ ರಿಪೋರ್ಟರ್‌ʼ ವರದಿ ತಿಳಿಸಿದೆ.

ಅಂದಹಾಗೆ 97ನೇ ಅಕಾಡೆಮಿ ಪ್ರಶಸ್ತಿಗೆ ಭಾರತದಿಂದ ಅಧಿಕೃತ ಪ್ರವೇಶಕ್ಕಾಗಿ ‘ಕಲ್ಕಿ 2898 AD’ ಸಿನಿಮಾವನ್ನು ಸಲ್ಲಿಸಲಾಗಿತ್ತು. ಆದರೆ ಅಂತಿಮವಾಗಿ ಕಿರಣ್ ರಾವ್ ಅವರ ‘ಲಾಪತಾ ಲೇಡೀಸ್’ ಸಿನಿಮಾ ಅಧಿಕೃತವಾಗಿ ಆಸ್ಕರ್‌ ಪ್ರಶಸ್ತಿ ರೇಸ್‌ಗೆ ಎಂಟ್ರಿ ಆಗಿದೆ.

ನಾಗ್‌ ಅಶ್ವಿನ್‌ ನಿರ್ದೇಶನದ ʼಕಲ್ಕಿʼ ಸಿನಿಮಾದಲ್ಲಿ ಪ್ರಭಾಸ್‌, ಅಮಿತಾಭ್‌, ಕಮಲ್‌ ಹಾಸನ್‌, ದೀಪಿಕಾ ಪಡುಕೋಣೆ ಮುಂತಾದವರು ನಟಿಸಿದ್ದಾರೆ.

ಸದ್ಯ ಪ್ರಭಾಸ್‌ ಅವರ ʼರಾಜಾ ಸಾಬ್‌ʼ, ʼಸ್ಪಿರಿಟ್‌ʼ ಹಾಗೂ ʼಸಲಾರ್‌ -2ʼ ಸಿನಿಮಾಗಳು ಬರಲಿದ್ದು, ಈ ಸಿನಿಮಾಗಳು ಮುಂದಿನ ವರ್ಷವೇ ತೆರೆಕಾಣುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Delhi Capitals Management Change

Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್‌ ಬಗ್ಗೆಯೂ ಹೊಸ ನಿರ್ಧಾರ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

6

Actress Oviya: ಬಿಗ್‌ಬಾಸ್‌ ಮಾಜಿ ಸ್ಪರ್ಧಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

240 Km ಅಂತರದಲ್ಲಿ ಸೇನಾ ದಂಪತಿ ಆತ್ಮಹತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ಮಾಡುವಂತೆ ಪತ್ರ

240Km ಅಂತರದಲ್ಲಿ ಸೇನಾ ದಂಪತಿ ಆತ್ಮಹ*ತ್ಯೆ… ಜೊತೆಯಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪತ್ರ

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Kerala:ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಮುಖ್ಯ ಅರ್ಚಕರಾಗಿ ಅರುಣ್‌ ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.