Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

ಪಂಪ್‌ವೆಲ್‌ ಸರ್ವಿಸ್‌ ರಸ್ತೆ ಅವ್ಯವಸ್ಥೆ

Team Udayavani, Oct 17, 2024, 2:50 PM IST

7

ಮಹಾನಗರ: ಮಂಗಳೂರು ನಗರ ಸಂಪರ್ಕಿಸುವ ಪಂಪ್‌ವೆಲ್‌ ಸರ್ವಿಸ್‌ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರು ಪರ ದಾಡುವಂತಾಗಿದೆ. ಎಕ್ಕೂರು ಭಾಗದಿಂದ ಆಗಮಿಸುವ ವೇಳೆ ಹೆದ್ದಾರಿಯ ಫ್ಲೈ ಓವರ್‌ನ ಆರಂಭಿಕ ಪ್ರದೇಶದಿಂದ ಪಂಪ್‌ವೆಲ್‌ ಜಂಕ್ಷನ್‌ ತನಕ ಎರಡು ಭಾಗಗಳಲ್ಲಿನ ಸರ್ವಿಸ್‌ ರಸ್ತೆ ಹದಗೆಟ್ಟಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ಅವ್ಯವಸ್ಥೆಯಿಂದ ಸವಾರರು ನಿತ್ಯ ಸಂಕಟ ಅನುಭವಿಸುತ್ತಿದ್ದಾರೆ. ಅಲ್ಲಲ್ಲಿ ಇರುವ ಹೊಂಡಗುಂಡಿಗಳು ಸುಗಮ ಸಂಚಾರಕ್ಕೆ ಬ್ರೇಕ್‌ ಹಾಕುತ್ತಿವೆ. ಹೊಂಡಗುಂಡಿಗಳನ್ನು ತಪ್ಪಿಸಿಕೊಂಡು ಸಂಚರಿಸುವುದೇ ಸಾಹಸ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಇರುವ ಸರ್ವಿಸ್‌ ರಸ್ತೆ ಇದೀಗ ಅಪಾಯಕಾರಿಯಾಗಿ ಪರಿಣಮಿಸಿದೆ.

ನಿತ್ಯ ಟ್ರಾಫಿಕ್‌ ಜಾಮ್‌ ಬಿಸಿ
ಕೇರಳ, ತಲಪಾಡಿ, ಉಳ್ಳಾಲ, ಮುಡಿಪು ಇತ್ಯಾದಿ ಭಾಗಗಳಿಂದ ಮಂಗಳೂರು ನಗರಕ್ಕೆ ಆಗಮಿಸುವ ವಾಹನಗಳು ಪಂಪ್‌ವೆಲ್‌ ಸರ್ವಿಸ್‌ ರಸ್ತೆಯನ್ನು ಅವಲಂಬಿಸಿವೆ. ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳು ಈ ರಸ್ತೆಯಲ್ಲಿ ಓಡಾಡುವ ಕಾರಣದಿಂದಾಗಿ ನಿತ್ಯ ಟ್ರಾಫಿಕ್‌ ಬಿಸಿ ಸವಾರರಿಗೆ ತಪ್ಪಿದ್ದಲ್ಲ. ಬೆಳಗ್ಗಿನ ಸಮಯದಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ. ದ್ವಿಚಕ್ರ ಹಾಗೂ ಇತರ ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡುವುದು ನಿತ್ಯ ಕಂಡುಬರುತ್ತಿದೆ. ಈ ಹಿಂದೆ ಕೆಲವು ಆ್ಯಂಬುಲೆನ್ಸ್‌ಗಳು ಟ್ರಾಫಿಕ್‌ನಲ್ಲಿ ಸಿಲುಕಿ ಪರದಾಡಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಮಳೆಗಾಲದಲ್ಲಿ ಸಂಚಾರ ದುಸ್ಥರ!
ಬಹುತೇಕ ಮಳೆಗಾಲದಲ್ಲಿ ರಸ್ತೆಗಳ ನೈಜ ಬಣ್ಣ ಬಯಲಾಗುತ್ತದೆ. ಪಂಪ್‌ವೆಲ್‌ ಸರ್ವಿಸ್‌ ರಸ್ತೆಯಲ್ಲೂ ಪ್ರತೀ ವರ್ಷ ಹೊಂಡ ಗುಂಡಿಗಳ ದರ್ಶನವಾಗುತ್ತಿದ್ದು, ಶಾಶ್ವತ ಪರಿಹಾರ ಮರಿಚಿಕೆಯಾಗಿದೆ. ಕೆಲವೊಂದು ಭಾಗಗಳಲ್ಲಿ ತೇಪೆ ಕಾರ್ಯ ನಡೆಸಲಾಗಿದೆ. ಆದರೆ ಮಳೆಗೆ ಅವೆಲ್ಲವೂ ಮಾಯವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಾತ್ರಿ ಸಂಚಾರ ಅಪಾಯಕಾರಿ
ಪಂಪ್‌ವೆಲ್‌ ಸರ್ವಿಸ್‌ ರಸ್ತೆಯಲ್ಲಿ ಅಲ್ಲಲ್ಲಿ ನಿರ್ಮಾಣವಾಗಿರುವ ಹೊಂಡಗುಂಡಿಗಳಿಂದಾಗಿ ರಾತ್ರಿ ಸಂಚಾರ ಅಪಾಯಕಾರಿ. ಹೊಂಡ ಗುಂಡಿಗಳು ಗೋಚರಕ್ಕೆ ಬರದೆ ಸವಾರರಿಗೆ ಸಮಸ್ಯೆಯಾಗುತ್ತಿದೆ. ಈ ರಸ್ತೆಯಲ್ಲಿರುವ ಅಂಡರ್‌ಪಾಸ್‌ನ ಎರಡೂ ಬದಿಗಳಲ್ಲೂ ಹೊಂಡಗುಂಡಿಗಳು ನಿರ್ಮಾಣವಾಗಿವೆ. ಅಂಡರ್‌ ಪಾಸ್‌ನಿಂದ ಬರುವ ವಾಹನಗಳು ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಏಕಾಏಕಿ ವಾಹನಗಳು ಮುನ್ನುಗ್ಗುವುದು ಅಪಾಯಕಾರಿಯಾಗಿದೆ.

ಟಾಪ್ ನ್ಯೂಸ್

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.