Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

ಕುಳಾಯಿ ದಕ್ಕೆ ಕಾಮಗಾರಿ: ನಾಗರಿಕರಿಂದ ಟ್ರಕ್‌ಗೆ ದಿಗ್ಬಂಧನದ ಎಚ್ಚರಿಕೆ

Team Udayavani, Oct 17, 2024, 4:17 PM IST

11

ಕುಳಾಯಿ: ಕುಳಾಯಿ ಬಳಿ ಮೀನುಗಾರಿಕೆ ದಕ್ಕೆ ನಿರ್ಮಾಣವಾಗುತ್ತಿದ್ದು, ನೂರಾರು ಟ್ರಕ್‌ಗಳ ಓಡಾಟದಿಂದ ಸ್ಥಳೀಯ ರಸ್ತೆಯ ಡಾಮರು ಎದ್ದು ಹೋಗಿ ರಸ್ತೆಯ ನಡುವೆ ಆಳವಾದ ಹೊಂಡಗಳು ಉಂಟಾದರೆ, ಭಾರೀ ಧೂಳಿನಿಂದ ಸ್ಥಳೀಯ ಗ್ರಾಮ ಸ್ಥರಿಗೆ ಸಮಸ್ಯೆಯಾಗುತ್ತಿದೆ.

ಈ ಬಾರಿ ಮಳೆಗಾಲದ ಸಂದರ್ಭ ದಕ್ಕೆಯ ಬ್ರೇಕ್‌ ವಾಟರ್‌ ಕಾಮಗಾರಿ ಯಲ್ಲಿ ಲೋಪವುಂಟಾಗಿ ಮೀನು ಗಾರಿಕೆ ಸಚಿವರು ಕಾಮಗಾರಿ ಸ್ಥಗಿತಕ್ಕೆ ಸೂಚನೆ ನೀಡಿದ್ದರು. ಇದೀಗ ಮತ್ತೆ ಕಾಮಗಾರಿ ಆರಂಭವಾಗಿದ್ದು ನಿತ್ಯ ಓಡಾಟ ನಡೆ ಸುವ ಗ್ರಾಮಸ್ಥರಿಗೆ ಬೃಹತ್‌ ಟ್ರಕ್‌ಗಳ ಓಡಾಟದಿಂದ ಜೀವ ಭಯ ಆವರಿಸಿದೆ.

ಇಲ್ಲಿನ ರಸ್ತೆ ಅಗಲ ಕಿರಿದಾಗಿ ರುವುದರಿಂದ ಶಾಲೆಗೆ ಹೋಗುವ ಆಟೋರಿಕ್ಷಾ ಬರುವುದಕ್ಕೂ ಹಿಂದೆ ಮುಂದೆ ನೋಡುವಂತಾಗಿದೆ. ಪಾದಚರಿ ಗಳಿಗೂ ನಡೆದಾಡಲೂ ಸಾಧ್ಯವಿಲ್ಲದಂತಾಗಿದೆ.

ಪರ್ಯಾಯ ರಸ್ತೆ ಅಗತ್ಯ
ಸರ್ವ ಋತು ಬಂದರು ಇದಾಗಿರು ವುದರಿಂದ ಭವಿಷ್ಯದಲ್ಲಿ ಸಾವಿರಾರು ಲಾರಿ, ಟೆಂಪೋ, ಗೂಡ್ಸ್‌ ವಾಹನ ಬರಲಿರುವುದರಿಂದ ಪರ್ಯಾಯ ರಸ್ತೆಯ ಅಗತ್ಯವಿದೆ. ಹೆದ್ದಾರಿಯಿಂದ ನೇರ ಸಂಪರ್ಕ ಕಲ್ಪಿಸುವ ದ್ವಿಪಥ ರಸ್ತೆ ಮಾಡುವ ಕುರಿತಂತೆ ಇದುವರೆಗೂ ಯಾವುದೇ ಪ್ರಗತಿ ಕಂಡಿಲ್ಲ.

ಹೀಗಾಗಿ ಸ್ಥಳೀಯ ಚಿತ್ರಾಪುರ ಕುಳಾಯಿ ಮೀನುಗಾರಿಕೆ ರಸ್ತಯನ್ನೇ ಬಳಕೆ ಮಾಡಿ ಕೊಳ್ಳಲಾಗುತ್ತಿದ್ದು, ಇದು ಘನಭಾರದ ವಾಹನ ಓಡಾಟದ ಸಾಮರ್ಥ್ಯ ಹೊಂದಿಲ್ಲ. ಇದರಿಂದ ಡಾಮರು ಎದ್ದು ಹೋಗಿ ಹೊಂಡಗಳು ಸೃಷ್ಟಿಯಾಗಿವೆ.

ಗ್ರಾಮಸ್ಥರಿಂದ ಪ್ರತಿಭಟನೆ ಎಚ್ಚರಿಕೆ
ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ದಕ್ಕೆಯ ಬ್ರೇಕ್‌ ವಾಟರ್‌ಗೆ ಕಲ್ಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಬೃಹತ್‌ ಲಾರಿಗಳ ಓಡಾಟದಿಂದ ನಮ್ಮ ಗ್ರಾಮದ ರಸ್ತೆಗಳು ಹಾನಿಗೊಂಡಿವೆ. ಶಾಲಾ ಮಕ್ಕಳ, ಜನರ ಓಡಾಟಕ್ಕೆ ಅಡಚಣೆಯಾಗುತ್ತಿದೆ. ರಸ್ತೆಯನ್ನು ದುರಸ್ತಿ ಮಾಡುತ್ತಿಲ್ಲ. ಗ್ರಾಮಸ್ಥರು ಸೇರಿ ರಸ್ತೆ ಬಂದ್‌ ಮಾಡಿ ಪ್ರತಿಭಟಿಸುತ್ತೇವೆ. ಇದಕ್ಕೆ ಅವಕಾಶ ನೀಡದಂತೆ ಸೂಕ್ತ ಕ್ರಮ ಜರಗಿಸಬೇಕು.
-ಮಾಧವ ಎಲ್‌. ಸುವರ್ಣ, ಅಧ್ಯಕ್ಷರು ಪಣಂಬೂರು ಮೊಗವೀರ ಮಹಾಸಭಾ

ಟಾಪ್ ನ್ಯೂಸ್

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

complaint

Kundapura: ಪತಿಯಿಂದ ಹಲ್ಲೆ, ಬೆದರಿಕೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.