Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

ಇನ್ನೊಂದು ದ್ವಿಪಥ ನಿರ್ಮಾಣದ ಎರಡನೇ ಹಂತದ ಕೆಲಸಕ್ಕೆ ವೇಗ; ಕಾರ್ಮಿಕರ ಸಂಖ್ಯೆ ಹೆಚ್ಚಳ; ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ ರಸ್ತೆಯ ಹೊಂಡಗುಂಡಿ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ

Team Udayavani, Oct 17, 2024, 4:27 PM IST

13(1)

ಚುರುಕುಗೊಂಡ ಓವರ್‌ಪಾಸ್‌ ಕಾಮಗಾರಿ

ಉಡುಪಿ: ಸಂತೆಕಟ್ಟೆಯ ವೆಹಿಕ್ಯುಲಾರ್‌ ಓವರ್‌ ಪಾಸ್‌ನಲ್ಲಿ ಸಂಚಾರ ಅಧ್ವಾನಗಳ ನಡುವೆಯೂ ಎರಡನೇ ಹಂತದ ಕಾಮಗಾರಿ ಚುರುಕಿನಿಂದ ಸಾಗುತ್ತಿದೆ. ಮೊದಲನೇ ಹಂತದಲ್ಲಿ ದ್ವಿಪಥ ರಸ್ತೆ ನಿರ್ಮಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಈ ರಸ್ತೆ ಹೊಂಡಾಗುಂಡಿಯಿಂದ ಕೂಡಿ ಸಂಚಾರವೇ ದುಸ್ತರವಾಗಿದೆ. ಇಲ್ಲಿ ಅಲ್ಲಲ್ಲಿ ಬೆಳಗ್ಗೆ ವೆಟ್‌ಮಿಕ್ಸ್‌ ಅಳವಡಿಸಿದ್ದರೂ ನಿರಂತರ ವಾಹನ ಸಂಚಾರದಿಂದ ಸಂಜೆ ವೇಳೆ ಪುನಃ ಗುಂಡಿಯಾಗಿರುತ್ತದೆ. ಈ ಮಧ್ಯೆ ಮಳೆಯೂ ಅಡ್ಡಿ ಮಾಡುತ್ತಿದೆ. ಇದೆಲ್ಲದರ ನಡುವೆ ಇನ್ನೊಂದು ದ್ವಿಪಥ ರಸ್ತೆ ನಿರ್ಮಿಸುವ ಎರಡನೇ ಹಂತದ ಕಾಮಗಾರಿ ವೇಗವಾಗಿ ಸಾಗುತ್ತಿದೆ.

ಓವರ್‌ಪಾಸ್‌ ಕಾಮಗಾರಿಯ 2ನೇ ಹಂತ ಮಳೆ ಯಿಂದಾಗಿ ವಿಳಂಬವಾಗಿತ್ತು. ಅಲ್ಲದೆ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಸಂಚಾರ ದುಸ್ತರವಾಗಿತ್ತು. ಈ ಬಗ್ಗೆ ‘ಉದಯವಾಣಿ’ ಸರಣಿ ವರದಿ ಪ್ರಕರಿಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿತ್ತು. ಜಿಲ್ಲಾಧಿಕಾರಿ ಸಹಿತವಾಗಿ ಸಂಸದರು ಮೇಲಿಂದ ಮೇಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಎರಡು ಮೂರು ಸುತ್ತಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಗುತ್ತಿಗೆ ಪಡೆದ ಸಂಸ್ಥೆಯ ಅಧಿಕಾರಿಗಳ ಸಭೆ ನಡೆಸಿ ಕಾಮಗಾರಿ ಶೀಘ್ರ ಮುಗಿಸಲು ಸೂಚನೆ ನೀಡಿದ್ದರು.

ರಸ್ತೆಯಲ್ಲಿ ಬೃಹದಾಕಾರದ ಗುಂಡಿ.

ಅದರಂತೆ ಗುತ್ತಿಗೆ ಪಡೆದ ಸಂಸ್ಥೆಯು ಕಾಮಗಾರಿಗೆ ವೇಗ ನೀಡಿದೆ. ಈ ವರ್ಷ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ 2025ರ ಆರಂಭದಲ್ಲಿ ರಸ್ತೆ ಸಂಪೂರ್ಣ ಸಂಚಾರ ಮುಕ್ತಗೊಳಿಸಲು ಬೇಕಾದಂತೆ ಕಾಮಗಾರಿ ನಡೆಯುತ್ತಿದೆ.

ದ್ವಿತೀಯ ಹಂತಕ್ಕೆ ವೇಗ ಹೇಗೆ?

  • 8-10 ಕಾರ್ಮಿಕರು ಮಾತ್ರ ಮಾಡುತ್ತಿದ್ದ ಕಾಮಗಾರಿಗೆ ಈಗ 25- 30 ಕಾರ್ಮಿಕರ ನಿಯೋಜನೆ
  • ಮೊದಲು ಒಂದೇ ಜೆಸಿಬಿ ಇದ್ದರೆ ಈಗ 3-4 ಜೆಸಿಬಿ, ಆಧುನಿಕ ಯಂತ್ರಗಳ ಬಳಕೆಯಾಗುತ್ತಿದೆ.
  • ಎರಡನೇ ಹಂತದ ಕಾಮಗಾರಿ ಅನುಕೂಲವಾಗುವಂತೆ ಮೇಲ್ಭಾಗದ ಮಣ್ಣು, ಡಾಮರು ರಸ್ತೆ ಕೆಡವು ಕಾರ್ಯ ವೇಗವಾಗಿ ಸಾಗುತ್ತಿದೆ.
  • ಓವರ್‌ಪಾಸ್‌ಗೆ ಬೇಕಾದ ತಡೆಗೋಡೆಯನ್ನು ವೇಗದಲ್ಲಿ ಕಟ್ಟಲಾಗುತ್ತಿದೆ. ಬ್ರಹ್ಮಾವರದಿಂದ ಉಡುಪಿಗೆ ಬರುವಾಗ ಸಂತೆಕಟ್ಟೆ ಹೊಳೆಯಿಂದ ಸ್ವಲ್ಪ ಮುಂದೆ ಬಲಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಚುರುಕಾಗಿ ಸಾಗುತ್ತಿದೆ.
  • ಈಗಾಗಲೇ ಸುಮಾರು 100 ಮೀಟರ್‌ನಷ್ಟು ತಡೆಗೋಡೆಯು ಪೂರ್ಣಗೊಂಡಿದೆ. ರೋಬೋಸಾಫ್ಟ್ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುವಾಗಲು ಸುಮಾರು 25 ಮೀಟರ್‌ ಹೆಚ್ಚು ತಡೆಗೋಡೆ ನಿರ್ಮಾಣವಾಗಿದೆ.
  • ಇಲ್ಲಿ ಬಂಡೆ ಒಡೆಯುವ ಕಾರ್ಯವೂ ಚುರುಕಾಗಿ ನಡೆಯುತ್ತಿದೆ.

ಟಾಪ್ ನ್ಯೂಸ್

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

courts

Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

complaint

Kundapura: ಪತಿಯಿಂದ ಹಲ್ಲೆ, ಬೆದರಿಕೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.