Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

ಎಕ್ಸ್‌ನಲ್ಲಿ ನಟಿ ಕಂಗನಾ ರಣಾವತ್‌ ಪೋಸ್ಟ್ ಮಾಡಿ ಹೇಳಿದ್ದೇನು?

Team Udayavani, Oct 17, 2024, 8:28 PM IST

Emergency

ಹೊಸದಿಲ್ಲಿ: ಚಿತ್ರದ ಆರಂಭದಿಂದಲೂ ಹಲವು ವಿವಾದಗಳಿಂದಲೇ ಸುದ್ದಿಯಾಗಿದ್ದ ಬಾಲಿವುಡ್ ನಟಿ, ಹಾಲಿ ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೇಂದ್ರಿಯ ಚಲನಚಿತ್ರ ಪ್ರಮಾಣೀಕೃತ ಮಂಡಳಿ  ಸೆನ್ಸಾರ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್‌ಸಿ)ನಿಂದ  ಪ್ರದರ್ಶನಕ್ಕೆ ಗುರುವಾರ ಕೊನೆಗೂ ಅನುಮತಿ ದೊರೆತಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ನಟಿ ಕಂಗನಾ ಪೋಸ್ಟ್ ಮಾಡಿ “ನಮ್ಮ ಚಿತ್ರ ಎಮರ್ಜೆನ್ಸಿಗೆ ಸೆನ್ಸಾರ್ ಪ್ರಮಾಣಪತ್ರ ಸ್ವೀಕರಿಸಿದ್ದೇವೆ ಎಂದು ತಿಳಿಸಲು ಸಂತಸವೆನಿಸಿದೆ. ಶೀಘ್ರದಲ್ಲೇ ಚಿತ್ರ ಬಿಡುಗಡೆಯ ದಿನಾಂಕ ಪ್ರಕಟಿಸುತ್ತವೆ. ತಾಳ್ಮೆಯಿಂದ ಕಾದಿದ್ದಕ್ಕೆ, ಬೆಂಬಲಿಸಿದ್ದಕ್ಕೆ ಧನ್ಯವಾದಗಳು” ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಅಕ್ಟೋಬರ್‌ ತಿಂಗಳಾಂತ್ಯ ಅಥವಾ ನವೆಂಬರ್‌ ಎರಡನೇ ವಾರದಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.

ಪ್ರಮಾಣ ಪತ್ರ ಮಂಡಳಿಯು ಚಿತ್ರಕ್ಕೆ ಸುಮಾರು 13 ದೃಶ್ಯಗಳಿಗೆ ಕತ್ತರಿ ಹಾಗೂ ಬದಲಾವಣೆಗೆ ಸೂಚಿಸಿ ಯು/ಎ ಪ್ರಮಾಣಪತ್ರ ನೀಡಿತ್ತು. ಪರಿಷ್ಕರಣೆ ಸಮಿತಿಯು ಸೂಚಿಸಿದ  ಬದಲಾವಣೆಗಳ ಅನುಸರಿಸಿ ಚಿತ್ರ ಬಿಡುಗಡೆಗೆ ಪ್ರಮಾಣಪತ್ರ ಪಡೆಯಲು ನಿರ್ಮಾಪಕರಿಗೆ ತಿಳಿಸಿದೆ.  ಕೆಲವು ಹಿಂಸಾತ್ಮಕ ದೃಶ್ಯಗಳ ತೆಗೆದು ಹಾಕಲು ಸೂಚಿಸಿತ್ತು. ಸಂಭಾಷಣೆಯಲ್ಲಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯ ‘ಸಂತʼ ಎಂದು ಉಲ್ಲೇಖಿಸಲಾಗಿದೆ. ಈ ಚಿತ್ರವು ಸಿಖ್ ಸಮುದಾಯವನ್ನು ಕೆಟ್ಟದಾಗಿ ತೋರಿಸಿದೆ ಎಂದು ಆರೋಪಿಸಿ ಹಲವಾರು ಸಿಖ್ ಗುಂಪುಗಳು ಅನೇಕ ದೂರುಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.


ಎಮರ್ಜೆನ್ಸಿ’ ಚಿತ್ರದ ಟ್ರೇಲರ್ ವಿವಾದ
ತುರ್ತು ಪರಿಸ್ಥಿತಿಯ ಟ್ರೇಲರ್ ಬಿಡುಗಡೆಯಾದಾಗ ‘ಎಮರ್ಜೆನ್ಸಿ’ ಚಿತ್ರದ ವಿವಾದವು ಆರಂಭವಾಗಿ ಇದು ಖಲಿಸ್ತಾನ್ ನಾಯಕ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಪ್ರತ್ಯೇಕ ಸಿಖ್ ರಾಜ್ಯಕ್ಕಾಗಿ ಇಂದಿರಾ ಗಾಂಧಿಪಕ್ಷ ಬೆಂಬಲಿಸುವ ಭರವಸೆ ತೋರಿಸುತ್ತದೆ. ಇದರಿಂದ ಕುಪಿತಗೊಂಡ ದೆಹಲಿಯ ಶಿರೋಮಣಿ ಅಕಾಲಿದಳವು ಸಿಖ್ಖರ ಖಳನಾಯಕರಂತೆ ಚಿತ್ರಿಸಲಾಗಿದೆ ಎಂಬ ಕಾರಣದಿಂದ ಸಿನಿಮಾ ನಿಷೇಧಕ್ಕೆ ಸಿಬಿಎಫ್‌ಸಿಗೆ ಲೀಗಲ್ ನೋಟಿಸ್ ಕಳುಹಿಸಿತ್ತು.

ದಿವಂಗತ ರಾಜಕಾರಣಿ ಪಾತ್ರದಲ್ಲಿ ಕಂಗನಾ ನಟಿಸುವ ಜೊತೆಗೆ ಅವರೇ ಚಿತ್ರ ನಿರ್ಮಿಸಿ, ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರದಲ್ಲಿ ಶ್ರೇಯಸ್ ತಲ್ಪಾಡೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಾತ್ರ ನಿರ್ವಹಿಸುತ್ತಿದ್ದಾರೆ. ಜೈಪ್ರಕಾಶ್ ನಾರಾಯಣ್ ಪಾತ್ರದಲ್ಲಿ ಅನುಪಮ್ ಖೇರ್ ಕಾಣಿಸಿಕೊಂಡಿದ್ದಾರೆ. ಮಹಿಮಾ ಚೌಧರಿ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

ಇಂದಿರಾ ಗಾಂಧಿ  ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯ ದಿನಗಳ ಪ್ರಮುಖ ವಿಷಯವಾಗಿಟ್ಟುಕೊಂಡು ‘ಎಮರ್ಜೆನ್ಸಿʼ ಸಿನಿಮಾ ಮಾಡಲಾಗಿದೆ. ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ ಕಂಗನಾ ರಣಾವತ್​ ವೇಷಭೂಷಣ ಗಮನ ಸೆಳೆದಿದೆ. ಸಿನಿಮಾ ಬಿಡುಗಡೆ ಆದ ಬಳಿಕವೂ ವಿವಾದ ಹೆಚ್ಚಾಗುವ ಸಾಧ್ಯತೆ ಇದೆ. ಹಲವು ಕರಣಗಳಿಂದಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಸೃಷ್ಟಿಸಿದೆ.

ಟಾಪ್ ನ್ಯೂಸ್

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

Valmiki Jayanti: ಕಾರ್ಯಕ್ರಮ ವೇದಿಕೆಯಲ್ಲಿ ಅತ್ತ ಶಾಸಕ ನಾಗೇಂದ್ರ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

HMT, KIOCL: ಚರ್ಚೆಗೆ ಬನ್ನಿ: ಸಚಿವ ಎಚ್‌.ಡಿ. ಕುಮಾರಸ್ವಾಮಿ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

robbers

Kota; ಪಾರಂಪಳ್ಳಿ ದೇವಸ್ಥಾನದ ಆಸುಪಾಸಿನಲ್ಲಿ ಕಳ್ಳನ ಓಡಾಟದ ಸುದ್ದಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

BY Election: ಶಿಗ್ಗಾವಿ ಕ್ಷೇತ್ರ ಗೆಲುವಿಗೆ ಪ್ರಯತ್ನ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.