Flight: ಹುಬ್ಬಳ್ಳಿ-ಅಹ್ಮದಾಬಾದ್ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ
Team Udayavani, Oct 17, 2024, 7:04 PM IST
ಹುಬ್ಬಳ್ಳಿ:ಹುಬ್ಬಳ್ಳಿಯಿಂದ ಅಹ್ಮದಾಬಾದ್ಗೆ ವಿಮಾನಯಾನ ಸೌಲಭ್ಯ ಆರಂಭ ಹಾಗೂ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸದಿರುವ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ಜತೆ ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚರ್ಚಿಸಿದ್ದಾರೆ.
ಹುಬ್ಬಳ್ಳಿಯ ಉದ್ಯಮಿಗಳು, ವ್ಯಾಪಾರಸ್ಥರು ಇನ್ನಿತರರು ಅಹ್ಮದಾಬಾದ್ ಹಾಗೂ ಚೆನ್ನೈನೊಂದಿಗೆ ಹೆಚ್ಚಿನ ಸಂಪರ್ಕ ಹೊಂದಿದ್ದಾರೆ.
ಅಹ್ಮದಾಬಾದ್ಗೆ ಹುಬ್ಬಳ್ಳಿಯಿಂದ ವಿಮಾನಯಾನ ಆರಂಭಿಸಿದರೆ ಉದ್ಯಮ-ವ್ಯಾಪಾರ ದೃಷ್ಟಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ಹುಬ್ಬಳ್ಳಿ-ಚೆನ್ನೈ ನಡುವಿನ ವಿಮಾನಯಾನ ಸ್ಥಗಿತಗೊಳಿಸಲಾಗುತ್ತಿದೆ ಎನ್ನಲಾಗಿದ್ದು, ಇದನ್ನು ಸ್ಥಗಿತಗೊಳಿಸದೆ ಮುಂದುವರಿಸಬೇಕು. ಹುಬ್ಬಳ್ಳಿ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಸಾಕಷ್ಟು ಬೆಳವಣಿಗೆ ಹೊಂದುತ್ತಿದೆ. ಈ ಹಿನ್ನೆಲೆಯಲ್ಲಿ ತ್ವರಿತ ಸಂಚಾರಕ್ಕೆ ವಿಮಾನಯಾನ ಪ್ರಮುಖವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ನಾಗರಿಕ ವಿಮಾನಯಾನ ಸಚಿವರಾದ ಶ್ರೀ @RamMNK ಅವರನ್ನು ಭೇಟಿ ಮಾಡಿ ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸಂಪರ್ಕವನ್ನು ಕಲ್ಪಿಸಲು ಮತ್ತು ಹುಬ್ಬಳ್ಳಿಯಿಂದ ಚೆನ್ನೈಗೆ ಸಂಪರ್ಕಿಸುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತಿದ್ದು, ವಿಮಾನ ಸಂಪರ್ಕವನ್ನು ಮುಂದುವರಿಸಲು ಮನವಿಯನ್ನು ಸಲ್ಲಿಸಿದೆನು. ಈ ಸಂದರ್ಭದಲ್ಲಿ ಶಾಸಕರಾದ… pic.twitter.com/4qTBuSIzMs
— Pralhad Joshi (@JoshiPralhad) October 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು
Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ ಹೋರಾಟ: ಪಂಚಮಸಾಲಿ ಶ್ರೀ
Hubli: ರಾಜಕೀಯ ನಾಯಕರ ನಡುವೆ ಭಯೋತ್ಪಾದಕ ಪದ ಬಳಕೆ ಸರಿಯಲ್ಲ: ಶೆಟ್ಟರ್
MUST WATCH
ಹೊಸ ಸೇರ್ಪಡೆ
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Gold Price; ಚಿನ್ನ ದರ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ
BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.