Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
ಶೂನ್ಯಕ್ಕೆ ಔಟಾದ ಕೊಹ್ಲಿ ...ನಾನಿದನ್ನು ಮೊದಲೇ ಹೇಳಿದ್ದೆ, ಮತ್ತೆ ಹೇಳುತ್ತೇನೆ ಎಂದ ಭಾರತದ ಮಾಜಿ ಕ್ರಿಕೆಟಿಗ
Team Udayavani, Oct 17, 2024, 9:13 PM IST
ಬೆಂಗಳೂರು: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ನಲ್ಲಿ ವಿರಾಟ್ ಕೊಹ್ಲಿ(Virat Kohli) 9 ಎಸೆತಗಳಲ್ಲಿ ಶೂನ್ಯಕ್ಕೆ ಔಟಾದ ಕುರಿತು, ಕ್ರಿಕೆಟ್ ವಿಶ್ಲೇಷಕ ಮತ್ತು ಮಾಜಿ ಭಾರತದ ಕ್ರಿಕೆಟಿಗ ಸಂಜಯ್ ಮಂಜ್ರೇಕರ್(Sanjay Manjrekar) ಪ್ರತಿಕ್ರಿಯೆ ನೀಡಿ ಸುದ್ದಿಯಾಗಿದ್ದಾರೆ.
ಕೊಹ್ಲಿ ಅವರ ಆಟ ಮೌಲ್ಯಮಾಪನ ಮಾಡುವಲ್ಲಿ ಹಿಂದುಳಿಯದ ಸಂಜಯ್ ಮಂಜ್ರೇಕರ್, ಭಾರತದ ಅನುಭವಿ ಸ್ಟಾರ್ ಬ್ಯಾಟರ್ ಕೊಹ್ಲಿ ಆಟದ ತಂತ್ರದಲ್ಲಿನ ದೋಷವನ್ನು ಎತ್ತಿ ತೋರಿಸಿದ್ದಾರೆ.
“ನಾನಿದನ್ನು ಮೊದಲೇ ಹೇಳಿದ್ದೆ, ಮತ್ತೆ ಹೇಳುತ್ತೇನೆ. ವಿರಾಟ್ ಪ್ರತಿ ಬಾಲ್ಗೆ ಫ್ರಂಟ್ ಫೂಟ್ನಲ್ಲಿ ಇರಲು ಬಯಸುವ ಮೂಲಕ ತಮ್ಮ ಸಮಸ್ಯೆಗಳನ್ನು ಸಂಕೀರ್ಣಗೊಳಿಸಿದ್ದಾರೆ. ಲೆಂತ್ ವಿಚಾರವಲ್ಲ. ಇಂದು ಗುರುವಾರ(ಅ17) ಅವರು ಔಟಾದ ಚೆಂಡನ್ನು ಹಿಂಬದಿಯಿಂದ ಆರಾಮವಾಗಿ ನಿಭಾಯಿಸಬಹುದಿತ್ತು” ಎಂದು ಬರೆದಿದ್ದಾರೆ.
ಸದ್ಯ ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಪಂದ್ಯ ಆರಂಭಕ್ಕೂ ಮುನ್ನ ಕೊಹ್ಲಿ ಅವರ ಫಾರ್ಮ್ ಬಗ್ಗೆ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ್ದ ಮುಖ್ಯ ಕೋಚ್ ಗೌತಮ್ ಗಂಭೀರ್” ಕೊಹ್ಲಿ ಅವರು ಹಿಂದಿನಂತೆಯೇ ರನ್ ಹಸಿವಿನಲ್ಲೇ ಇದ್ದಾರೆ. ಅವರನ್ನು ಒಂದು ಸರಣಿ ಮತ್ತು ಪಂದ್ಯದ ಆಟದಲ್ಲಿ ನಿರ್ಣಯ ಮಾಡಬಾರದು” ಎಂದು ಹೇಳಿದ್ದರು.
Have said this before will say it again. Virat has compounded his problems by wanting to be on the front foot to every ball. No matter the length. Today’s dismissal ball could have been comfortably tackled off the back foot. #INDvNZ
— Sanjay Manjrekar (@sanjaymanjrekar) October 17, 2024
ಭಾರತ 46 ರನ್ ಗಳ ಕನಿಷ್ಠ ಮೊತ್ತಕ್ಕೆ ಆಲೌಟಾಗಿತ್ತು. ಪ್ರತಿಯಾಗಿ ಉತ್ತಮ ಆಟವಾಡುತ್ತಿರುವ ನ್ಯೂಜಿಲ್ಯಾಂಡ್ 3 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿ 134 ರನ್ ಗಳ ಮುನ್ನಡೆ ಸಾಧಿಸಿದೆ. ಕಾನ್ವೇ 91 ರನ್ ಗಳಿಸಿ ಔಟಾದರು. ರಚಿನ್ ರವೀಂದ್ರ 22, ಡೇರಿ ಮಿಚೆಲ್ 14 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Delhi Capitals ಆಡಳಿತ ಬದಲಾವಣೆ: ಗಂಗೂಲಿ ಅಧಿಕಾರ ಕಡಿತ; ಪಂತ್ ಬಗ್ಗೆಯೂ ಹೊಸ ನಿರ್ಧಾರ
INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್
MUST WATCH
ಹೊಸ ಸೇರ್ಪಡೆ
By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು
Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ
Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.