Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ
Team Udayavani, Oct 18, 2024, 1:46 AM IST
ಬೈಂದೂರು: ರಾ.ಹೆ. 66ರ ಬೈಂದೂರು ಸಮೀಪದ ಒತ್ತಿನೆಣೆ ತಿರುವಿನಲ್ಲಿ ಬುಧವಾರ ರಾತ್ರಿ ಗುಡ್ಡದ ಮಣ್ಣು ಕುಸಿದಿದೆ.
ಬೈಂದೂರು ಭಾಗದಲ್ಲಿ ಹಲವು ದಿನಗಳಿಂದ ಅಲ್ಲಲ್ಲಿ ಮಳೆ ಸುರಿ ಯುತ್ತಿದ್ದು, ಬುಧವಾರ ರಾತ್ರಿ ಅಧಿಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡದ ಮೇಲ್ಭಾಗದಲ್ಲಿ ಮಣ್ಣು ಅಪಾಯಕಾರಿ ಸ್ಥಿತಿಯಲ್ಲಿದ್ದು, ಕೆಲವು ತಿಂಗಳ ಹಿಂದೆ ಅಗ್ನಿಶಾಮಕ ವಾಹನದ ಮೂಲಕ ನೀರು ಸಿಂಪಡಿಸಿ ಕುಸಿಯುವ ಭೀತಿ ಯಲ್ಲಿರುವ ಗುಡ್ಡದ ಮಣ್ಣನ್ನು ಸಮತಟ್ಟು ಮಾಡಲಾಗಿತ್ತು. ಈ ಹಿಂದೆಯೂ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಂಭವವಿದ್ದಾಗ ಮಣ್ಣು ತೆರವುಗೊಳಿಸಿ ಮುಂಜಾಗ್ರತೆ ವಹಿಸ ಲಾಗಿತ್ತು. ಕಳೆದೆರಡು ದಿನದಿಂದ ಮಳೆಯ ಪ್ರಮಾಣ ಅಧಿಕವಾದ ಕಾರಣ ಗುಡ್ಡದ ಮಣ್ಣು ಕುಸಿದಿದೆ.
ಒಂದೆರಡು ಟಿಪ್ಪರ್ನಷ್ಟು ಮಣ್ಣು ಚರಂಡಿಗೆ ಕುಸಿದಿದ್ದು, ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ. ಗುಡ್ಡದ ಮಣ್ಣು ಕುಸಿತದಿಂದ ಹೆದ್ದಾರಿ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಐಆರ್ಬಿ ಅಧಿಕಾರಿಗಳು ಮಣ್ಣು ತೆರವುಗೊಳಿಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಒತ್ತಿನೆಣೆ ತಿರುವಿನ ರಾಘವೇಂದ್ರ ಮಠದ ಬಳಿ ಕುಸಿತ ಸಂಭವಿಸುವ ಆತಂಕ ಇರುವ ಕಾರಣ ಹೆದ್ದಾರಿ ಇಲಾಖೆ ಮತ್ತು ಕಂಪೆನಿ ಪ್ಲಾಸ್ಟರಿಂಗ್ ಮೂಲಕ ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದೆ. ಉತ್ತರ ಕನ್ನಡದ ಶಿರೂರು ಗುಡ್ಡ ಕುಸಿತ ಬಳಿಕ ದಿಲ್ಲಿಯಿಂದ ಹಿರಿಯ ಭೂ ವಿಜ್ಞಾನಿಗಳು ಈ ಪ್ರದೇಶಗಳಿಗೆ ಭೇಟಿ ನೀಡಿದ್ದರು.
ದಿನದಿಂದ ದಿನಕ್ಕೆ ಕುಸಿತ ಪ್ರಮಾಣ ಹೆಚ್ಚುತ್ತಿರುವ ಸೋಮೇಶ್ವರ ಗುಡ್ಡ
ರಾ.ಹೆ.ಗುಡ್ಡದ ಮುಂಜಾಗ್ರತೆ ಒಂದೆಡೆಯಾದರೆ ಸೋಮೇಶ್ವರ ಗುಡ್ಡ ಮಳೆಯ ಅಬ್ಬರದಿಂದಾಗಿ ಮತ್ತಷ್ಟು ಕುಸಿಯುತ್ತಿದೆ.ಇಲ್ಲಿನ ಗುಡ್ಡ ಭಾಗದಲ್ಲಿ ಖಾಸಗಿ ವ್ಯಕ್ತಿಗಳು ರೆಸಾರ್ಟ್ ನಿರ್ಮಿಸಲು ಅನಧಿಕೃತವಾಗಿ ರಸ್ತೆ ನಿರ್ಮಿಸಿದ ಕಾರಣ ಮಳೆಗಾಲದಲ್ಲಿ ಗುಡ್ಡದ ಮಣ್ಣು ನೀರಿನಲ್ಲಿ ಕೊಚ್ಚಿಹೋಗಿ ಆತಂಕ ಉಂಟು ಮಾಡಿತ್ತು. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರು ಆಗಮಿಸಿ ಪರಿಶೀಲಿಸಿದರು ಕೂಡ ಇದುವರಗೆ ಯಾವುದೆ ಕ್ರಮ ಕೈಗೊಂಡಿಲ್ಲ. ಬುಧವಾರ ಮಳೆಗೆ ಗುಡ್ಡ ಇನ್ನಷ್ಟು ಕುಸಿದಿದ್ದು, ಗುಡ್ಡದ ಮೇಲ್ಭಾಗದಲ್ಲಿರುವ ಕ್ಷಿತಿಜ ನೇಸರ ಧಾಮ ಕೂಡ ಅಪಾಯದಲ್ಲಿದೆ.ಈ ಬಗ್ಗೆ ಸ್ಥಳೀಯರು ನಿರಂತರ ಧ್ವನಿಎತ್ತಿದರೂ ಇಲಾಖೆ ಗಂಭೀರವಾಗಿ ಪರಿಗಣಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್ಗಳ ಗಾಮಾ ವಿಕಿರಣ
Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ
Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ
Kota: ಅಚ್ಲಾಡಿ ಸಿದ್ಧಿವಿನಾಯಕ ದೇವಸ್ಥಾನ ತೀರ್ಥ ಪುಷ್ಕರಿಣಿ ಲೋಕಾರ್ಪಣೆ
Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ
MUST WATCH
ಹೊಸ ಸೇರ್ಪಡೆ
BY Election: ನಾಳೆ ವಿಜಯೇಂದ್ರ ದಿಲ್ಲಿಗೆ: ಟಿಕೆಟ್ ಚರ್ಚೆ
Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
National Security Guard: ವಿಐಪಿ ಭದ್ರತೆಯಿಂದ ಎನ್ಎಸ್ಜಿಗೆ ಮುಕ್ತಿ: ಸಮುಚಿತ ನಿರ್ಧಾರ
Jharkhand Election; ಹರಿಪ್ರಸಾದ್ ಎಐಸಿಸಿ ಸಮನ್ವಯಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.