Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

ಇನ್ನೂ ಯಾವುದೇ ಪೂರ್ವ ತಯಾರಿ ಆಗಿಲ್ಲ ಫೆಬ್ರವರಿ, ಮಾರ್ಚ್‌ನಲ್ಲಿ ನಡೆಸಲು ಚರ್ಚೆ

Team Udayavani, Oct 18, 2024, 7:30 AM IST

Kambala

ಮಂಗಳೂರು: ಕಳೆದ ವರ್ಷ ಬೆಂಗಳೂರಿನಲ್ಲಿ ಅದ್ದೂರಿ ಯಾಗಿ ನಡೆದಿದ್ದ ಕಂಬಳವು ಈ ಬಾರಿ ಅ.26ಕ್ಕೆ ನಿಗದಿಯಾಗಿತ್ತು. ಆದರೆ ಈ ದಿನದಂದು ಕಂಬಳ ನಡೆಯುವುದಿಲ್ಲ. ಜತೆಗೆ ಈ ವರ್ಷ ನಡೆಯುವುದೇ ಅನುಮಾನ ಎನ್ನಲಾಗುತ್ತಿದೆ.

ಬೆಂಗಳೂರಿನಲ್ಲಿ ಕಂಬಳ ನಡೆಸುವುದು ಬಹಳ ಕಷ್ಟದ ಕೆಲಸ. ಪ್ಯಾಲೇಸ್‌ ಗ್ರೌಂಡ್‌ ಅನುಮತಿ ದೊರೆಯಬೇಕಾದರೆ 3 ತಿಂಗಳ ಮುನ್ನ ಪ್ರಕ್ರಿಯೆ ನಡೆಸಬೇಕು. ಮೈಸೂರು ಅರಮನೆ ಹಾಗೂ ಸರಕಾರದಿಂದ ಅನುಮತಿ ಪಡೆಯಬೇಕು. ಕರೆ ನಿರ್ಮಾಣ ಸಹಿತ ಮೂಲ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಕೋಣಗಳನ್ನು ಕರಾವಳಿಯಿಂದ ಬೆಂಗಳೂರಿಗೆ ಕೊಂಡೊಯ್ಯಬೇಕು; ಇಂತಹ ಹತ್ತು ಹಲವು ಸವಾಲು ಎದುರಿಸುವ ಜತೆಗೆ ಕೋಟ್ಯಂತರ ರೂ. ಖರ್ಚು ಕೂಡ ಆಗುತ್ತದೆ. ಕಳೆದ ವರ್ಷ ಮೊದಲ ಕಂಬಳ ಎಂಬ ನೆಲೆಯಲ್ಲಿ ಯಶಸ್ವಿಯಾಗಿ ಮೂಡಿಬಂತಾದರೂ, ಈ ಬಾರಿ ಮಾತ್ರ ಈ ಕುರಿತ ಉತ್ಸಾಹ ಎಲ್ಲೂ ಕಂಡುಬಾರದೆ ಒಂದೇ ವರ್ಷಕ್ಕೆ ಕಂಬಳದಾಟ ಮುಗಿಯಿತೇ ಎಂಬ ಪ್ರಶ್ನೆ ಮೂಡಿದೆ.

ಮಾರ್ಚ್‌ನಲ್ಲಿ ಸಾಧ್ಯವೇ?
ಸದ್ಯದ ಮಾಹಿತಿ ಪ್ರಕಾರ ಈ ಋತುವಿನ ಆರಂಭದಲ್ಲಿ ಬೆಂಗಳೂರು ಕಂಬಳ ನಡೆಯುವುದಿಲ್ಲ. ಆದರೆ ಕಂಬಳ ಸಮಿತಿ ಹಾಗೂ ಕೋಣಗಳ ಯಜಮಾನರು ಒಪ್ಪಿಗೆ ಸೂಚಿಸಿದರೆ ಮಾರ್ಚ್‌ನಲ್ಲಿ ಬೆಂಗಳೂರು ಕಂಬಳ ನಡೆಸಬಹುದೇ ಎಂಬ ಬಗ್ಗೆ ಚರ್ಚೆ ಈಗ ನಡೆಯುತ್ತಿದೆ. ಇದಕ್ಕಾಗಿ ಅರಮನೆ ಮೈದಾನದ ಅನುಮತಿಗೆ ಬೆಂಗಳೂರು ಸಮಿತಿ ಅರ್ಜಿ ಹಾಕಿದೆ. ಈ ಕುರಿತಂತೆ ಚರ್ಚೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಟಾಪರ್‌ ಕೋಣವಷ್ಟೇ ಭಾಗವಹಿಸಲಿ
ಕಂಬಳದ ತೀರ್ಪುಗಾರರ ಸಮಿತಿಯ ಸಂಚಾಲಕರಾದ ವಿಜಯ್‌ ಕುಮಾರ್‌ ಕಂಗಿನಮನೆ ಅವರು “ಉದಯವಾಣಿ’ ಜತೆಗೆ ಮಾತನಾಡಿ, “157 ಜತೆ ಕೋಣಗಳನ್ನು ಜಿಲ್ಲೆಯ ಹೊರಭಾಗಕ್ಕೆ ಕೊಂಡೊಯ್ಯುವುದು ಸುಲಭದ ಕೆಲಸವಲ್ಲ. ಇದರಲ್ಲಿ ಆಯ್ಕೆ ಮಾಡಿ 65 ಜತೆ ಕೋಣಗಳು ಮಾತ್ರ ಹೊರಜಿಲ್ಲೆಗೆ ಕೊಂಡೊಯ್ದರೆ ಹೆಚ್ಚು ಅನುಕೂಲ. ಹೀಗೆ ಮಾಡಿದರೆ ಬೇರೆ ಕಡೆಯೂ ಕಂಬಳ ನಡೆಸಬಹುದು. ಇಲ್ಲದಿದ್ದರೆ ಕಷ್ಟ’ ಎನ್ನುತ್ತಾರೆ.

ಬೆಂಗಳೂರು ಕಂಬಳ ಸಾಧ್ಯತೆ ಕಡಿಮೆ
ಬೆಂಗಳೂರು ಕಂಬಳಕ್ಕೆ ಸಮಿತಿ ದಿನಾಂಕ ನೀಡಿತ್ತು. ಆದರೆ ಕಂಬಳ ಆಯೋಜನೆಯ ಸಿದ್ಧತೆ ನಡೆದಿಲ್ಲ. ಹೀಗಾಗಿ ಈ ಬಾರಿ ಬೆಂಗಳೂರಿನಲ್ಲಿ ಕಂಬಳ ನಡೆಯುವ ಸಾಧ್ಯತೆ ಕಡಿಮೆ. ಫೆಬ್ರವರಿಯಲ್ಲಿ ಶಿವಮೊಗ್ಗ ಕಂಬಳ ನಡೆಯಲಿದ್ದು, ಈ ಕುರಿತ ತಯಾರಿ ನಡೆಸಲಾಗುತ್ತಿದೆ.
-ಬೆಳಪು ದೇವಿಪ್ರಸಾದ್‌ ಶೆಟ್ಟಿ, ಅಧ್ಯಕ್ಷರು, ಜಿಲ್ಲಾ ಕಂಬಳ ಸಮಿತಿ.

ಮಾರ್ಚ್‌ನಲ್ಲಿ ನಡೆಸುವ ಬಗ್ಗೆ ಚರ್ಚೆ
ಬೆಂಗಳೂರು ಕಂಬಳಕ್ಕೆ ಕಂಬಳ ಸಮಿತಿಯಿಂದ ದಿನಾಂಕ ಪ್ರಕಟವಾಗಿತ್ತು. ಆದರೆ ನಾವು ಅಂತಿಮ ತೀರ್ಮಾನ ಮಾಡಿರಲಿಲ್ಲ. ಯಾರಾದರೂ ಆಸಕ್ತರಿದ್ದರೆ ಮುಂದೆ ಬರಬಹುದು ಎಂದು ನಾವೂ ನಿರೀಕ್ಷೆಯಲ್ಲಿದ್ದೆವು. ಯಾರೂ ಮುಂದೆ ಬರಲಿಲ್ಲ. ಸದ್ಯಕ್ಕೆ ಕಂಬಳ ನಡೆಸಲು ಸಾಧ್ಯವಿಲ್ಲ. ಆದರೂ ಕಂಬಳ ಸಮಿತಿ ಹಾಗೂ ಕೋಣಗಳ ಯಜಮಾನರು ಅನುಮತಿ ನೀಡಿದರೆ ಫೆಬ್ರವರಿ/ಮಾರ್ಚ್‌ನಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ.
-ಅಶೋಕ್‌ ಕುಮಾರ್‌ ರೈ, ಶಾಸಕರು, ಅಧ್ಯಕ್ಷರು, ಬೆಂಗಳೂರು ಕಂಬಳ ಸಮಿತಿ

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Train

Train; ದೀಪಾವಳಿಗೆ ಬೆಂಗಳೂರು-ಮಂಗಳೂರು ವಿಶೇಷ ರೈಲು

1-bekku-a

Udayavani Special: ಇದು ಬೆಕ್ಕಿನ ಬಿಡಾರವಲ್ಲ; ಮಹಲು!

bk-Hari

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.