Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ದೊಣ್ಣೆಯಿಂದ ಹೊಡೆದು ಹತ್ಯೆ ; ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಾಗಿದ್ದ ಪತಿ, ಪತ್ನಿ, ಪ್ರಿಯಕರ ;ಮಲಗಿದ್ದಾಗ ಕೊಲೆಗೈದು ನಾದಿನಿಗೆ ಕರೆ ಮಾಡಿದ್ದ ಹಂತಕ

Team Udayavani, Oct 18, 2024, 11:35 AM IST

4-bng-crime

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಬಿಐ ಲೇಔಟ್‌ ನಿವಾಸಿಗಳಾದ ಕೋಲುಸು ಲಕ್ಷ್ಮೀ (33) ಹಾಗೂ ಗಣೇಶ್‌ ಕುಮಾರ್‌ (20) ಕೊಲೆಯಾದವರು. ಕೃತ್ಯ ಎಸಗಿದ ಬಳಿಕ ಲಕ್ಷ್ಮೀಯ ಪತಿ ಕೋಲುಸು ಗೊಲ್ಲಾ(41) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆಂಧ್ರಪ್ರದೇಶದ ಶ್ರೀಕಾಕುಳಂ ಮೂಲದ ಮೂವರು, ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದು, ನಾಲ್ಕೈದು ವರ್ಷಗಳಿಂದ ನಗರದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು.

ಕೋಣನಕುಂಟೆಯ ಆರ್‌ಬಿಐನ ಸೋಮೇಶ್ವರ ಲೇಔಟ್‌ನಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಮೂವರು, ಅದೇ ಕಟ್ಟಡದ ನೆಲಮಹಡಿಯ ಒಂದೇ ಕೋಣೆಯಲ್ಲಿ ಮೂವರು ವಾಸವಾಗಿದ್ದರು. ಈ ಮಧ್ಯೆ ಕೋಲುಸು ಲಕ್ಷ್ಮೀ, ಸಹೋದ್ಯೋಗಿ ಗಣೇಶ್‌ ಕುಮಾರ್‌ ಜತೆ ಆತ್ಮೀಯವಾಗಿದ್ದಳು. ಅದರಿಂದ ಪತಿ ಕೋಲುಸು ಗೊಲ್ಲಾ ಪತ್ನಿಯ ನಡವಳಿಕೆ ಬಗ್ಗೆ ಅನುಮಾನ ಬಂದಿದ್ದು, ಇದೇ ವಿಚಾರಕ್ಕೆ ದಂಪತಿ ನಡುವೆ ಪದೇ ಪದೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದರು.

ಕೊಂದು ನಾದಿನಿಗೆ ಕರೆ ಮಾಡಿದ್ದ ಹಂತಕ: ಈ ನಡುವೆ ಪತ್ನಿಯ ನಡವಳಿಕೆ ಬಗ್ಗೆ ಇಸ್ರೋ ಲೇಔಟ್‌ ನಲ್ಲಿ ಕಟ್ಟಡ ಕಾರ್ಮಿಕರಾಗಿರುವ ನಾದಿನಿಗೆ ಕರೆ ಮಾಡಿದ ಕೋಲುಸು ಗೊಲ್ಲಾ, “ನಿನ್ನ ಸಹೋದರಿ ಬೇರೊಬ್ಬನ ಜತೆ ಆತ್ಮೀಯವಾಗಿದ್ದಾಳೆ.

ಇದು ಹೀಗೆ ಮುಂದುವರಿದರೆ, ಆಕೆಯನ್ನು ಕೊಂದು, ನಾನು ಸಾಯುತ್ತೇನೆ’ ಎಂದು ಹೇಳುತ್ತಿದ್ದ. ಆದರೆ, ಆಕೆ ಆತನ ಬೆದರಿಕೆ ಮಾತನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬುಧವಾರ ರಾತ್ರಿ ಕೂಡ ನಾದಿನಿಗೆ ಕರೆ ಮಾಡಿ, ಪತ್ನಿ ಲಕ್ಷ್ಮೀ ಹಾಗೂ ಆಕೆಯ ಪ್ರಿಯಕರ ಗಣೇಶ್‌ ಕುಮಾರ್‌ನನ್ನು ಕೊಂದು, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದಿದ್ದಾನೆ.

ಆದರೆ, ನಾದಿನಿ, ಭಾವ ಮದ್ಯದ ಅಮಲಿನಲ್ಲಿ ಮಾತಾಡಬೇಡ. ಬೆಳಗ್ಗೆ ಮಾತಾಡೋಣ ಎಂದು ಕರೆ ಸ್ಥಗಿತಗೊಳಿಸಿದ್ದಾಳೆ. ಆದರೆ, ಮುಂಜಾನೆ 2 ಗಂಟೆಯಿಂದ 4 ಗಂಟೆ ಅವಧಿಯಲ್ಲಿ ದೊಣ್ಣೆಯಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ತಲೆಗೆ ಹತ್ತಾರು ಬಾರಿ ಹೊಡೆದು ಕೊಂದ ಆರೋಪಿ, ನಸುಕಿನ 5 ಗಂಟೆ ಸುಮಾರಿಗೆ ನಾದಿನಿಗೆ ಕರೆ ಮಾಡಿ, ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕೊಂದಿದ್ದೇನೆ ಎಂದು ಹೇಳಿದ್ದಾನೆ.

ಆಗಲೂ ಆಕೆ ಕರೆ ಸ್ಥಗಿತಗೊಳಿಸಿದ್ದಾಳೆ. ಬಳಿಕ ಅದೇ ಕಟ್ಟಡದ 3ನೇ ಮಹಡಿಗೆ ಹೋಗಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಗಾರೆ ಕೆಲಸದ ಮೇಸ್ತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಪತಿಯೇ ಪತ್ನಿ ಮತ್ತು ಆಕೆಯ ಸ್ನೇಹಿತನನ್ನು ದೊಣ್ಣೆಯಿಂದ ಹೊಡೆದು ಕೊಲೆಗೈದು, ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆಯ ಆರ್‌ಬಿಐ ಲೇಔಟ್‌ ಸಮೀಪ ದಲ್ಲಿ ನಡೆದಿದೆ. ಈ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ●ಲೋಕೇಶ್‌ ಬಿ.ಜಗಲಸಾರ, ಡಿಸಿಪಿ, ದಕ್ಷಿಣ ವಿಭಾಗ

ಏನಿದು ಘಟನೆ?

 ನಿರ್ಮಾಣ ಹಂತದ ಕಟ್ಟಡದಲ್ಲಿ ಪತಿ, ಪತ್ನಿ, ಪ್ರಿಯಕರ ವಾಸ

 ಪ್ರಿಯಕರನೊಂದಿಗೆ ಪತ್ನಿಯ ಅನೈತಿಕ ಸಂಬಂಧದಿಂದ ಜಗಳ

 ಈ ಬಗ್ಗೆ ಪತ್ನಿಯ ಸಹೋದರಿಗೆ ಎಚ್ಚರಿಕೆ ನೀಡಿದ್ದ ಪತಿ

 ಆದರೂ ನಿರ್ಲಕ್ಷಿಸಿದ್ದಕ್ಕೆ ಕೊಲೆ ಮಾಡಲು ಪತಿ ಸಂಚು

 ನಸುಕಿನಲ್ಲಿ ಮಲಗಿದ್ದಾಗ ಪತ್ನಿ, ಪ್ರಿಯಕರನ ಹತ್ಯೆ

 ಬಳಿಕ ಅದೇ ಕಟ್ಟಡದಲ್ಲಿ ಪತಿ ನೇಣಿಗೆ ಶರಣು

 ಆರ್‌ಬಿಐ ಲೇಔಟ್‌ ನಲ್ಲಿ ಘಟನೆ

 ಮೇಸ್ತ್ರೀ ಸ್ಥಳಕ್ಕೆ ಬಂದಾಗ ಕೃತ್ಯ ಬಯಲು

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.