Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ


Team Udayavani, Oct 18, 2024, 2:21 PM IST

5

ಜೋಕಟ್ಟೆ: ಕೂಳೂರಿನಿಂದ ಕೈಗಾರಿಕೆ ವಲಯವಾಗಿ ಜೋಕಟ್ಟೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದೆ. ದ್ವಿಚಕ್ರ, ಕಾರು, ಟೆಂಪೋಗಳ ಚಕ್ರಗಳು ಹೊಂಡದೊಳಗೆ ಸಿಲುಕುತ್ತಿದ್ದು, ಮೇಲೇಳಲು ಏದುಸಿರು ಬಿಡುವಂತಾಗಿದೆ.

ಇಲ್ಲಿನ ವಿಶೇಷ ಆರ್ಥಿಕ ವಲಯಕ್ಕೆ ಸುಸಜ್ಜಿತ ಮೇಲ್ಸೇತುವೆಯಾದ ಬಳಿಕ ಹಳೆಯ ಸಂಪರ್ಕ ರಸ್ತೆಯನ್ನು ದುರಸ್ತಿ ಮಾಡುವವರಿಲ್ಲದೆ ಹಾಗೆಯೇ ಬಿಡಲಾಗಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ.

ಮಂಗಳೂರಿನಿಂದ ಜೋಕಟ್ಟೆ ಗ್ರಾಮಕ್ಕೆ ಹೋಗುವ ಮಂದಿಗೆ ಇದೇ ಹತ್ತಿರದ ದಾರಿಯಾಗಿದ್ದು, ಬೈಕಂಪಾಡಿ ಸುತ್ತುಬಳಸಿ ಹೋಗುವುದು ತಪ್ಪುತ್ತಿದೆ. ಇದೀಗ ಇಲ್ಲಿನ ರಸ್ತೆ ವಾಹನಗಳಿಗೆ ಕಂಟಕವಾಗಿ ಪರಿಣಮಿಸಿದೆ. ಬಿಡಿ ಭಾಗಗಳೂ ಉದುರಿಹೋಗುವಷ್ಟು ಹೊಂಡಗಳಿದ್ದು ದುರಸ್ತಿ ಮಾಡಲಾಗುತ್ತಿಲ್ಲ. ಕೈಗಾರಿಕಾ ವಲಯಕ್ಕೂ ಸಂಪರ್ಕದ ಮುಖ್ಯ ರಸ್ತೆಯಾಗಿ ಇದು ಬಳಕೆಯಾಗುತ್ತಿದೆ.

ನಿರ್ಲಕ್ಷಿತ ರಸ್ತೆ
ಆರಂಭದಲ್ಲಿ ವಿಶೇಷ ಆರ್ಥಿಕ ಪ್ರದೇಶಕ್ಕೆ ರಸ್ತೆ ಸಂಪರ್ಕ ಅಗತ್ಯವಿದ್ದಾಗ ಕುದುರೆ ಮುಖ ಕೈಗಾರಿಕ ಘಟಕದ ಬಳಿಯಿಂದ ಈ ರಸ್ತೆ ನಿರ್ಮಿಸಲಾಗಿತ್ತು. ಎಸ್‌ಇಝಡ್‌ಗೆ ಈಗ ಹೊಸ ಮೇಲ್ಸೇತುಯೇ ಹತ್ತಿರದ ದಾರಿಯಾಗಿದ್ದು ರೈಲ್ವೇ ಕ್ರಾಸಿಂಗ್‌ಗೆ ಕಾಯುವ ಪ್ರಶ್ನೆ ಉದ್ಭವಿಸುವುದಿಲ್ಲ. ಈ ರಸ್ತೆ ಇದೀಗ ಕೈಗಾರಿಕೆ ಪ್ರಾಂಗಣಕ್ಕೆ ತಲುಪಲು ಪ್ರಯೋಜನಕಾರಿಯಾಗಿದೆ. ಇದೀಗ ಈ ರಸ್ತೆಯ ದುರಸ್ತಿ ಕೆಐಎಡಿಬಿ ಆಥವಾ ಎಸ್‌ಇಝಡ್‌ ಮಾಡಬೇಕೆ ಎಂಬುದೇ ಪ್ರಶ್ನೆಯಾಗಿದೆ.

ಕಳಪೆ ತೋಡು ಸಮಸ್ಯೆ
ಇದೇ ರಸ್ತೆಯ ಬದಿಯಲ್ಲಿರುವ ತೋಡನ್ನು ಹೂಳೆತ್ತೆದೆ ಹಾಗೆಯೇ ಬಿಡಲಾಗಿದ್ದು, ಸಣ್ಣ ಮಳೆ ಬಂದರೂ ನೀರು ರಸ್ತೆ ಮೇಲೆ ನಿಲ್ಲುತ್ತದೆ. ಅಸಮರ್ಪಕ ನಿರ್ವಹಣೆಯಿಂದ ನೀರು ನಿಂತು ಘನ ವಾಹನಗಳ ಓಡಾಟ ಸಂದರ್ಭ ರಸ್ತೆ ಹದಗೆಡುತ್ತಿದೆ. ಆಟೋ ರಿಕ್ಷ ಚಾಲಕರು ಈ ರಸ್ತೆಯಲ್ಲಿ ಬರಲು ಹಿಂದೇಟು ಹಾಕುತ್ತಾರೆ. ಕೈಗಾರಿಕೆಗಳ ಘನ ವಾಹನಗಳು ಈ ರಸ್ತೆಯಲ್ಲಿ ನಿರಂತರ ಓಡಾಟ ನಡೆಸುತ್ತಿದ್ದು, ನಿರ್ವಹಣೆಗೆ ಸಂಬಂಧಿಸಿ ಯಾರೂ ಜವಾಬ್ದಾರಿ ಹೊತ್ತುಕೊಳ್ಳುತ್ತಿಲ್ಲ.

ಮನವಿಗೂ ಸ್ಪಂದಿಸಿಲ್ಲ
ಇಲ್ಲಿನ ರಸ್ತೆ ಒಟ್ಟು ಐದು ಕಡೆ ತೀವ್ರವಾಗಿ ಹದಗೆಟ್ಟಿದ್ದು ಸಣ್ಣ ವಾಹನಗಳು ಓಡಾಡಲು ಅಸಾಧ್ಯವಾ ಗಿದೆ. ಮಳೆ ನೀರು ನಿಂತರೆ ಹೊಂಡದ ಆಳ ತಿಳಿಯದೆ ದ್ವಿಚಕ್ರ ಸವಾರರು ಸಿಲುಕಿ ಕೊಳ್ಳುತ್ತಾರೆ. ವಾಹನದ ಬಿಡಿ ಭಾಗಗಳಿಗೆ ಹಾನಿಯಾಗುತ್ತಿದೆ. ಇಲ್ಲಿನ ಕೈಗಾರಿಕ ಸಂಘದ ಮನವಿಗೂ ಸ್ಪಂದನೆ ಸಿಗುತ್ತಿಲ್ಲ.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.