Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

ಊರಿಗೆ ನೀರುಣಿಸುತ್ತಿದ್ದ ಕೆರೆ ಈಗ ರೋಗ ಉತ್ಪತ್ತಿ ತಾಣ; ಹೂಳೆತ್ತಿ ಅಭಿವೃದ್ಧಿಗೆ ಆಗ್ರಹ

Team Udayavani, Oct 18, 2024, 3:52 PM IST

10

ಕಟಪಾಡಿ: ಇಡೀ ಊರಿಗೆ ನೀರುಣಿಸುತ್ತಿದ್ದ ಕುರ್ಕಾಲು ಮದಗ ಸಮರ್ಪಕ ನಿರ್ವಹಣೆ ಇಲ್ಲದೆ ರೋಗ ಉತ್ಪತ್ತಿಯ ತಾಣವಾಗಿ ಊರಿಗೆ ಹಾಲಾಹಲ ಉಣಿಸುವ ಹಾದಿಯಲ್ಲಿದೆ!

ಕಾಪು ತಾಲೂಕಿನ ಕುರ್ಕಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಈ ಮದಗ ಸುಮಾರು ಅರ್ಧ ಎಕರೆಗೂ ಪ್ರದೇಶವನ್ನು ಆವರಿಸಿದೆ. ಇದೀಗ ಹೂಳು ತುಂಬಿ, ಗಿಡಗಂಟಿಗಳು, ಹುಲ್ಲುಗಳು ಬೆಳೆದು ನಿಂತಿದೆ. ಮಾತ್ರವಲ್ಲದೇ ಸ್ಥಳೀಯ ಕೆಲವು ಪ್ರಾಣಿಗಳ ಸಾಕಾಣಿಕೆ ಕೇಂದ್ರಗಳ ಹಸಿ ತ್ಯಾಜ್ಯಗಳು ಈ ಮದಗವನ್ನು ಸೇರುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಡೆಂಗ್ಯೂ, ಕಾಲರಾ ಮೊದಲಾದ ರೋಗಗಳು ಬಂದಾಗ ನೀರು ನಿಲ್ಲದಂತೆ ನೋಡಿಕೊಳ್ಳಿ ಎನ್ನುವ ಅಧಿಕಾರಿಗಳು ಕೆಲವು ಕಾಲೊನಿಗಳಿಗೆ ತೆರಳಿ ಪಾತ್ರೆ ಪಗಡೆಗಳನ್ನು ನೀರು ನಿಲ್ಲದಂತೆ ಕವುಚಿ ಹಾಕಿ ಎಂಬ ಸೂಚನೆ ನೀಡುತ್ತಾರೆ. ಆದರೆ ಇಲ್ಲಿ ತ್ಯಾಜ್ಯವನ್ನು ರಾಜಾರೋಷವಾಗಿ ಮದಗಕ್ಕೆ ಹಾಕಲಾಗುತ್ತಿದೆ. ನೀರಿನ ಆಸರೆಯು ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಬೆಳೆಯುತ್ತಿರುವ ಜತೆಗೆ ಗಬ್ಬು ನಾರುತ್ತಿದ್ದರೂ ಸ್ಥಳೀಯಾಡಳಿತ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ. ಇಡೀ ಊರಿನ ಕೃಷಿಗೆ, ಕುಡಿಯುವ ನೀರಿನ ಅಂತರ್ಜಲ ಮಟ್ಟ ವೃದ್ಧಿಗೆ ಕಾರಣವಾಗಿದ್ದ ಕುರ್ಕಾಲು ಮದಗ ನಿರ್ವಹಣೆ ಇಲ್ಲದೆ ಶೋಚನೀಯ ಪರಿಸ್ಥಿತಿಯಲ್ಲಿದ್ದು, ಅದನ್ನು ತುರ್ತಾಗಿ ಸರಿಪಡಿಸಬೇಕೆಂಬ ಆಗ್ರಹವಿದೆ.

ರಾಸಾಯನಿಕ ಸಿಂಪಡಣೆ
ಈ ಬಗ್ಗೆ ಗ್ರಾಮಸ್ಥರಿಂದ ಗಮನಕ್ಕೆ ಬಂದಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದಂತೆ ಮುನ್ನಚ್ಚೆರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ರಾಸಾಯನಿಕ ಸಿಂಪಡಣೆಯನ್ನು ಮಾಡಲಾಗಿದೆ. ಸೂಕ್ತವಾಗಿ ಪರಿಶೀಲಿಸಿ ಸ್ಥಳೀಯವಾಗಿ ಹಸಿ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗುತ್ತದೆ.
-ಯೋಗಿತಾ, ಪಿಡಿಒ, ಕುರ್ಕಾಲು ಗ್ರಾ.ಪಂ.

ಪ್ರಸ್ತಾವನೆ ಸಲ್ಲಿಕೆ
ಮದಗ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಗೆ ಈಗಾಗಲೇ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ವಾಕಿಂಗ್‌ ಟ್ರಾಫಿಕ್‌ ಸಹಿತ ಕೆರೆದಂಡೆ ನಿರ್ಮಾಣ, ಹೂಳೆತ್ತುವ ಜತೆಗೆ ಪರಿಸರದ ನೂರಾರು ಎಕರೆ ಭೂ ಪ್ರದೇಶದಲ್ಲಿ ಸ್ವತ್ಛ ಅಂತರ್ಜಲ ಮಟ್ಟ ಕಾಯ್ದುಕೊಳ್ಳಲು ಕೋರಿಕೊಳ್ಳಲಾಗಿದೆ.
– ಪ್ರಶಾಂತ್‌ ಆನಂದ ಪೂಜಾರಿ, ಅಧ್ಯಕ್ಷರು, ಕುರ್ಕಾಲು ಗ್ರಾ.ಪಂ.

ನೂರಾರು ಮನೆಗಳಿಗೆ ಸಮಸ್ಯೆ

  • ಅಂಗನವಾಡಿ ಕೇಂದ್ರ, ಆರೋಗ್ಯ ಕೇಂದ್ರ ಹಾಗೂ ಸುಮಾರು 100ಕ್ಕೂ ಅಧಿಕ ಮನೆಗಳು ಇರುವ ಜನವಸತಿ ಪ್ರದೇಶದಲ್ಲಿ ಈ ಸಮಸ್ಯೆಯು ಜನರನ್ನು ಹೈರಾಣಾಗಿಸಿದೆ.
  • ಈ ಮದಗಕ್ಕೆ ಕೆಲವೊಂದು ಕಡೆಯಿಂದ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಇದನ್ನು ತಡೆಯಬೇಕು.
  • ಸೋಕ್‌ ಪಿಟ್‌, ಎಸ್‌ಟಿಪಿ ಪ್ಲಾಂಟ್‌ ನಿರ್ಮಿಸಲೇಬೇಕೆಂಬ ಕಟ್ಟುನಿಟ್ಟಿನ ಸೂಚನೆ ನೀಡುವುದಲ್ಲದೆ ಸಂಬಂಧಿತ ಇಲಾಖೆಗಳು ಇದರ ಬೆನ್ನುಹತ್ತಬೇಕು.
  • ಸಣ್ಣ ನೀರಾವರಿ ಇಲಾಖೆ ಎಚ್ಚೆತ್ತು ಮದಗದ ಸುತ್ತಲಿನ ಒತ್ತುವರಿಯನ್ನೂ ತೆರವುಗೊಳಿಸಿ, ನೀರನ್ನು ಮಲಿನಗೊಳಿಸುವವರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಏನು ಮಾಡಬಹುದು?

  • ಈ ಮದಗಕ್ಕೆ ತ್ಯಾಜ್ಯ ಸುರಿಯುವುದನ್ನು ನಿಲ್ಲಿಸಬೇಕು, ಒತ್ತುವರಿಯನ್ನು ತೆರವುಗೊಳಿಸಬೇಕು.
  • ಮದಗವನ್ನು ಹೂಳೆತ್ತಿ, ಸ್ವತ್ಛಗೊಳಿಸಿ ಅದರಲ್ಲಿರುವ ಎಲ್ಲ ಕಸ ಕಡ್ಡಿಗಳನ್ನು ತೆಗೆಯಬೇಕು.
  • ಮದಗದ ಸುತ್ತ ಸಾಕಷ್ಟು ಜಾಗವಿದ್ದು ಅದರಲ್ಲಿ ವಾಕಿಂಗ್‌ ಟ್ರ್ಯಾಕ್‌, ಉದ್ಯಾನ ನಿರ್ಮಿಸಿದರೆ ಊರಿಗೆ ಶೋಭೆ.
  • ಇದು ಊರಿನ ಅಂತರ್ಜಲದ ಮೂಲವಾಗಿ ಗಮನ ಸೆಳೆಯಲಿದೆ.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.