ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ


Team Udayavani, Oct 18, 2024, 4:42 PM IST

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಉದಯವಾಣಿ ಸಮಾಚಾರ
ಹಾನಗಲ್ಲ: ಸಾಂಸ್ಕೃತಿಕ ಪರಿಸರಕ್ಕೆ ವ್ಯಕ್ತಿತ್ವದ ಅನಾವರಣ ಮಾಡುವಂತಹ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶವಾಗಿರುವುದಲ್ಲದೇ ಅನುಕರಣೀಯರು ಎಂದು ತಹಶೀಲ್ದಾರ್‌ ಎಸ್‌. ರೇಣುಕಮ್ಮ ತಿಳಿಸಿದರು.

ಗುರುವಾರ ಇಲ್ಲಿನ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ
ಮಾತನಾಡಿದ ಅವರು, ಮಹಾಪುರುಷರ ದಿನಾಚರಣೆಗಳು ಅವರ ವಕ್ತಿತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ, ಅವರ ಆದರ್ಶಗಳನ್ನು ಜ್ಞಾಪಿಸಿಕೊಂಡು ಆಚರಿಸುವ ಕಾರ್ಯಕ್ಕೆ ಪ್ರೇರಣೆಗಾಗಿ ಇವೆ. ಸರಕಾರ ಮಹಾಪುರುಷರ ಜಯಂತಿ ಆಚರಿಸುವ ಮೂಲಕ ಸಾಮಾಜಿಕ ರೀತಿ ನೀತಿಗಳನ್ನು ಮಹಾಪುರುಷರ ನಡೆಯಲ್ಲಿ ಪರಿಚಯಿಸುವ ಕಾರ್ಯ ಕೈಗೊಂಡಿದೆ. ಇದು ಆದರ್ಶ ಹಾಗೂ ಮಾರ್ಗದರ್ಶಿ ಕಾರ್ಯ ಎಂದರು.

ವಾಲ್ಮೀಕಿ ಸಮಾಜದ ಮುಖಂಡ ಫಕ್ಕೀರಪ್ಪ ಓಲೆಕಾರ, ಸಾಹಿತಿ ಪ್ರೊ| ಮಾರುತಿ ಶಿಡ್ಲಾಪುರ ಮಾತನಾಡಿದರು. ಪರಸಪ್ಪ ಮುನಿಯಣ್ಣನವರ, ಹೊನ್ನಪ್ಪ ಅಕ್ಕಿವಳ್ಳಿ, ಸುಭಾಸ ತಳವಾರ, ಸತೀಶ ಅಂಕೋಲ, ಪ್ರಕಾಶ ನಂದಿಕೊಪ್ಪ, ಶಿವಕುಮಾರ ತಳವಾರ, ಮುಂಜುನಾಥ ಗುರಣ್ಣನವರ, ಬಸವರಾಜ ಓಲೇಕಾರ, ವಸಂತ ವೆಂಕಟಾಪುರ, ರೇಖಾ ಕರಿಭೀಮಣ್ಣನವರ, ಶಿವಕುಮಾರ ಭದ್ರಾವತಿ, ರಮೇಶ ಕರಿಭೀಮಣ್ಣನವರ, ಶ್ರೀಕಾಂತ ಬೈಚವಳ್ಳಿ, ಹೊನ್ನಪ್ಪ ದೊಡ್ಡಮನಿ, ರವಿಕುಮಾರ ಕೊರವರ, ತಾಪಂ ಇಒ ಪರಶುರಾಮ ಪೂಜಾರ, ಗಂಗಾ ಹಿರೇಮಠ, ಅರವಿಂದ ಸುಗಂ , ಡಾ| ಗಿರೀಶ ರಡ್ಡೇರ, ವೈ.ಕೆ. ಜಗದೀಶ, ಬಿ.ಎನ್‌. ಸಂಗೂರ, ರವಿ ಅರ್ಕಸಾಲಿ ಮೊದಲಾದವರು ಇದ್ದರು.

ಕಾರಣ ಕೇಳಿ ನೋಟೀಸ್‌: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಹಾಜರಾಗದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ನೀಡಿ ಕ್ರಮ ಜರುಗಿಸಬೇಕು ಎಂದು ವಾಲ್ಮೀಕಿ ಸಮಾಜ ಮುಖಂಡರು ತಹಶೀಲ್ದಾರ್‌ರನ್ನು ಒತ್ತಾಯಿಸಿದರು. ಕೂಡಲೇ ಗೈರು ಹಾಜರಾದ ಅಧಿ ಕಾರಿಗಳಿಗೆ ನೋಟಿಸ್‌ ನೀಡಲು ಸ್ಥಳದಲ್ಲೇ ತಾಲೂಕು ತಹಶೀಲ್ದಾರ್‌ ಎಸ್‌. ರೇಣುಕಮ್ಮ ಸೂಚಿಸಿದರು.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.