Muda scam: 3 ಬಾರಿ ನೋಟಿಸ್ ಕೊಟ್ಟರೂ ಉತ್ತರ ಬಾರದ್ದಕ್ಕೆ ಇ.ಡಿ.ದಾಳಿ
Team Udayavani, Oct 19, 2024, 12:26 AM IST
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ದಾಖಲೆಗಳನ್ನು ನೀಡುವಂತೆ 3 ಬಾರಿ ನೋಟಿಸ್ ನೀಡಿದರೂ ಯಾವುದೇ ಉತ್ತರ ಬಾರದ ಕಾರಣ ಜಾರಿನಿರ್ದೇಶನಾಲಯ ದಾಳಿ ನಡೆಸಿದೆ. ಇದರಲ್ಲಿ ತಪ್ಪೇನಿದೆ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಅಲ್ಲಿನ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ, ನಿವೇಶನ ವಾಪಸ್ ಮಾಡಲಾಗಿದೆ. ಈ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಸಂಚು ಮಾಡಿದೆ. ಇತ್ತ ಲೋಕಾಯುಕ್ತ ತನಿಖೆ ಆರಂಭವಾದರೂ ಅವರ ತನಿಖೆ ಮೇಲೆ ನಮಗೆ ಅನುಮಾನ ಇದೆ. ಲೋಕಾಯುಕ್ತದವರು ಯಾರನ್ನೂ ಕರೆದು ವಿಚಾರಣೆ ಮಾಡಲೇ ಇಲ್ಲ. ಈ ಪ್ರಕರಣವನ್ನು ಸಿಬಿಐಗೆ ಕೊಡಲಿ ಎಂದರು. ಮುಡಾ ಪ್ರಕರಣ ಮುಚ್ಚಿ ಹಾಕುವಲ್ಲಿ ಲೋಕಾಯುಕ್ತ ಪೊಲೀಸರೂ ಶಾಮೀಲಾಗಿದ್ದಾರೆ.
ಇಡಿ ದಾಳಿಯಾಗಿದೆ, ಈ ಕೂಡಲೇ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಇ.ಡಿ. ತನಿಖೆಗೆ ಬೈರತಿ ಸುರೇಶ್ ತಂದ ಕಡತಗಳನ್ನು ಒಪ್ಪಿಸಬೇಕು. ಸಿದ್ದರಾಮಯ್ಯ, ಬೈರತಿ ಸುರೇಶ್ ರಾಜೀನಾಮೆ ಕೊಡಬೇಕು. ಇಲ್ಲದೇ ಹೋದರೆ ಇಡಿಯವರು ಸಿಎಂ ಅವರನ್ನು ಬಂಧಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCB Police: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್ ಜಪ್ತಿ!
Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?
ಕಲೆಕ್ಷನ್ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್ ತಿರುಗೇಟು
MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ
ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.