Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ


Team Udayavani, Oct 19, 2024, 6:21 AM IST

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

ರಾಜ್ಯದೆಲ್ಲೆಡೆ ಹಿಂಗಾರು ಮಾರುತಗಳ ಅಬ್ಬರ ಜೋರಾಗಿಯೇ ಇದೆ. ಸದ್ಯ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನ ಕೃಷಿ ಬೆಳೆಗಳು ಕಟಾವು ಯಾ ಕೊಯ್ಲಿನ ಹಂತದಲ್ಲಿದ್ದು, ಮಳೆಯ ಪರಿಣಾಮ ಹೊಲಗಳಲ್ಲಿಯೇ ಉಳಿಯುವಂತಾಗಿದೆ. ಇಷ್ಟು ಮಾತ್ರವಲ್ಲದೆ ಬೆಳೆಗಳು ನೀರಿನಲ್ಲಿ ಮುಳು ಗಡೆಯಾಗಿದ್ದು, ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿವೆ. ಹಿಂಗಾರು ಮಳೆಯ ಈ ಆರ್ಭಟ ರೈತರ ಪಾಲಿಗಂತೂ ಸಂಕಷ್ಟದ ಸರಮಾಲೆಯನ್ನೇ ತಂದೊಡ್ಡಿದೆ.

ಸಾಮಾನ್ಯವಾಗಿ ಈಶಾನ್ಯ ಮಾರುತಗಳು ದಕ್ಷಿಣ ಒಳನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಸಿದರೆ, ಈ ಬಾರಿ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿಯೂ ಉತ್ತಮ ಮಳೆಯಾಗಿದೆ. ಸದ್ಯ ಕರಾವಳಿ, ಮಲೆನಾಡು ಮತ್ತು ಒಳನಾಡಿನಲ್ಲಿ ವಿವಿಧ ಕೃಷಿ ಬೆಳೆಗಳು ಕಟಾವಿನ ಹಂತದಲ್ಲಿದೆ. ಆದರೆ ಮಳೆಯಿಂದಾಗಿ ಆಹಾರ ಧಾನ್ಯಗಳು, ತರಕಾರಿ ಸಹಿತ ಬಹುತೇಕ ಕೃಷಿ ಬೆಳೆಗಳ ಕೊಯ್ಲು ವಿಳಂಬಗೊಳ್ಳುವಂತಾಗಿದೆ.

ಮಳೆಯಿಂದಾಗಿ ಭತ್ತ, ಮೆಕ್ಕೆಜೋಳ, ಶೇಂಗಾ, ಹತ್ತಿ ಸಹಿತ ವಿವಿಧ ಕೃಷಿ ಬೆಳೆಗಳು ಹೊಲಗದ್ದೆಗಳಲ್ಲಿಯೇ ನೆಲಕ್ಕೊರಗಿವೆ. ಮಳೆ ನಿಂತು ಬಿಸಿಲು ಬರದೇ ಹೋದಲ್ಲಿ ಈ ಎಲ್ಲ ಬೆಳೆಗಳು ಮಣ್ಣುಪಾಲಾಗಲಿರುವುದು ನಿಶ್ಚಿತ. ಇನ್ನು ಈಗಾಗಲೇ ಕಟಾವು ಮಾಡಲ್ಪಟ್ಟ ಆಹಾರ ಧಾನ್ಯಗಳು, ತರಕಾರಿಗಳ ಸಂರಕ್ಷಣೆ ಕೂಡ ರೈತರ ಪಾಲಿಗೆ ಸವಾಲಾಗಿ ಪರಿಣಮಿಸಿದೆ. ಈರುಳ್ಳಿ, ಬಟಾಟೆ ಮತ್ತಿತರ ಕೃಷಿ ಬೆಳೆಗಳನ್ನು ಒಣಗಿಸಲು ಸಾಧ್ಯವಾಗದೆ ಅವು ಕೊಳೆತು ನಾರತೊಡಗಿವೆ.

ತೋಟಗಾರಿಕಾ ಬೆಳೆಗಳಿಗೂ ಹಾನಿ ಸಂಭವಿಸಿದ್ದು ಕಾಫಿಯ ಎಳೆಯ ಕಾಯಿಗಳು ಉದುರುತ್ತಿದ್ದರೆ ಹಲವೆಡೆ ಕಬ್ಬು, ಬಾಳೆ ಕೂಡ ನೆಲಕಚ್ಚಿವೆ. ಇದೇ ವೇಳೆ ಮೇವನ್ನು ಒಣಗಿಸಲು ಕೂಡ ರೈತರು ತ್ರಾಸ ಪಡುತ್ತಿದ್ದಾರೆ.

ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೈತರನ್ನು ಚಿಂತಾಕ್ರಾಂತರನ್ನಾಗಿಸಿದೆ.

ರೈತರು ಕಳೆದ ನಾಲ್ಕು ತಿಂಗಳುಗಳಿಂದ ಶ್ರಮ ವಹಿಸಿ, ಬೆಳೆದ ಬೆಳೆಗಳು ಇನ್ನೇನು ಕೈ ಸೇರಿತು ಎನ್ನುವಷ್ಟರಲ್ಲಿ ಹಿಂಗಾರಿನ ಆರ್ಭಟ ಎಲ್ಲವನ್ನೂ ಆಪೋಶನ ತೆಗೆದುಕೊಳ್ಳತೊಡಗಿರುವುದರಿಂದ ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.
ಕಳೆದೆರಡು ತಿಂಗಳುಗಳಿಂದ ರಾಜ್ಯದಲ್ಲಿ ಹಗರಣ, ಭ್ರಷ್ಟಾಚಾರ, ಅಕ್ರಮಗಳನ್ನು ಮುಂದಿಟ್ಟು ಆಡಳಿತ ಮತ್ತು ವಿಪಕ್ಷಗಳ ನಡುವೆ ರಾಜಕೀಯ ವಾಕ್ಸಮರ, ಪ್ರತಿಭಟನೆ ಬಿರುಸಿನಿಂದ ಸಾಗಿದ್ದು, ಆಡಳಿತ ಯಂತ್ರ ಬಹುತೇಕ ನಿಷ್ಕ್ರಿಯ ಸ್ಥಿತಿಯಲ್ಲಿದೆ. ರಾಜ್ಯದ ಲಕ್ಷಾಂತರ ರೈತರು ಸದ್ಯ ಸಂಕಷ್ಟದ ಸ್ಥಿತಿಯಲ್ಲಿದ್ದು ಸರಕಾರ, ಜನಪ್ರತಿನಿಧಿ ಗಳು ಮತ್ತು ಆಡಳಿತ ಯಂತ್ರ ರೈತರ ನೆರವಿಗೆ ಧಾವಿಸಬೇಕು. ರಾಜಕೀಯವೇನೇ ಇರಲಿ, ಸರಕಾರ ಮತ್ತು ಜನಪ್ರತಿನಿಧಿಗಳಿಗೆ ಸದ್ಯ ರೈತರ ಸಂಕಷ್ಟಕ್ಕೆ ಸ್ಪಂದಿಸುವುದೇ ಪ್ರಥಮ ಆದ್ಯತೆಯಾಗಬೇಕು.

ಮಳೆಯಿಂದಾಗಿ ಬೆಳೆ ಹಾನಿಗೀಡಾದ ಪ್ರದೇಶಗಳ ತುರ್ತು ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು. ಬೆಳೆ ವಿಮೆ ಸಕಾಲದಲ್ಲಿ ರೈತರ ಕೈಸೇರುವಂತೆ ಮಾಡಿ, ಮುಂದಿನ ಹಂಗಾಮಿನ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ತೋರುವಂತೆ ಮಾಡಬೇಕು. ಕೃಷಿ ಬೆಳೆಗಳನ್ನು ಸಂರಕ್ಷಿಸಲು ಅಗತ್ಯ ಗೋದಾಮು ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು.

ಇದೇ ವೇಳೆ ಕಾಳಸಂತೆಕೋರರು ಪರಿಸ್ಥಿತಿಯ ದುರ್ಲಾಭ ಪಡೆಯದಂತೆ ಕಟ್ಟೆಚ್ಚರ ವಹಿಸಬೇಕು. ದೀಪಾವಳಿ ಹಬ್ಬ ಸಮೀಪಿಸುತ್ತಿರುವುದರಿಂದ ಆಹಾರ ಧಾನ್ಯಗಳು ಮತ್ತು ತರಕಾರಿ ಬೇಡಿಕೆಗೆ ತಕ್ಕಷ್ಟು ಪ್ರಮಾಣದಲ್ಲಿ ಮಾರುಕಟ್ಟೆಗೆ ಪೂರೈಕೆಯಾಗುವುದನ್ನು ಖಾತರಿಪಡಿಸುವ ಮೂಲಕ ಬೆಲೆಗಳನ್ನು ನಿಯಂತ್ರಣ ದಲ್ಲಿರಿಸಿಕೊಳ್ಳುವ ಗುರುತರ ಹೊಣೆಗಾರಿಕೆ ಸರಕಾರದ್ದಾಗಿದೆ. ಇವೆಲ್ಲದರತ್ತ ಸರಕಾರ ಮತ್ತು ಆಡಳಿತ ಯಂತ್ರ ತುರ್ತು ಗಮನಹರಿಸಿದಲ್ಲಿ ರೈತರು ಮತ್ತು ಗ್ರಾಹಕರು ಸಂಕಷ್ಟದಿಂದ ಪಾರಾಗಲು ಸಾಧ್ಯ.

ಟಾಪ್ ನ್ಯೂಸ್

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

BAnga

Bangladesh Unrest: ಹಿಂದೂ ಸಮುದಾಯದ ರಕ್ಷಣೆ: ಬಾಂಗ್ಲಾ ಸರಕಾರ ಬದ್ಧತೆ ತೋರಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7-bng

Bengaluru: ಸೊಸೈಟಿ ಮಹಾಮಂಡಲದಲ್ಲಿ 19.3 ಕೋಟಿ ಅಕ್ರಮ

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Belagavi: ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ರೂ.‌ಹಣ ವಶಕ್ಕೆ

Belagavi: ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ರೂ.‌ಹಣ ವಶಕ್ಕೆ

Prakarana Tanikha Hantadallide Review

Prakarana Tanikha Hantadallide Review: ಕುತೂಹಲ ಘಟ್ಟದಲ್ಲಿ ಪ್ರಕರಣದ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.