Bengaluru: ಸೊಸೈಟಿ ಮಹಾಮಂಡಲದಲ್ಲಿ 19.3 ಕೋಟಿ ಅಕ್ರಮ

ಕರ್ನಾಟಕ ರಾಜ್ಯ ಕೋ-ಆಪರೇಟಿವ್‌ ಸೊಸೈಟಿಯಲ್ಲಿ ವಂಚನೆ ; ಪತಿ ಮತ್ತಿತರರ ಹೆಸರಿಗೆ ಹಣ ವರ್ಗಾಯಿಸಿದ ಉಸ್ತುವಾರಿ ಸಿಇಒ

Team Udayavani, Oct 19, 2024, 11:59 AM IST

7-bng

ಬೆಂಗಳೂರು: ಕರ್ನಾಟಕ ರಾಜ್ಯ ಕೋ-ಆಪರೇಟಿವ್‌ ಸೊಸೈಟಿ ಮಹಾಮಂಡಲ ನಿಯಮಿತದ 19.34 ಕೋಟಿ ರೂ. ದುರುಪಯೋಗಪಡಿಸಿಕೊಂಡ ಆರೋಪದಡಿ ಸೊಸೈಟಿಯ ಉಸ್ತುವಾರಿ ಸಿಇಒ ಸೇರಿ 6 ಮಂದಿ ವಿರುದ್ಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ನಂದಿನಿ ಲೇಔಟ್‌ನಲ್ಲಿರುವ ಕರ್ನಾಟಕ ರಾಜ್ಯ ಕೋ-ಆಪರೇಟಿವ್‌ ಸೊಸೈಟಿ ಮಹಾಮಂಡಲ ನಿ. ಅಧ್ಯಕ್ಷ ವಿ.ರಾಜು ನೀಡಿದ ದೂರಿನ ಆಧಾರದ ಮೇಲೆ ಸೊಸೈಟಿಯ ಉಸ್ತುವಾರಿ ಸಿಇಒ ಪಿ.ಆಶಾಲತಾ, ಆಕೆಯ ಪತಿ ಸೋಮಶೇಖರ್‌, ವಿಜಯ್‌ ಕಿರಣ್‌, ಜೆ. ಮಂಜು ನಾಥ್‌, ಸುಜಯ್‌, ಬಿಡಿಸಿಸಿ ಹಾಗೂ ಅಪೆಕ್ಸ್‌ ಬ್ಯಾಂಕ್‌ ಮ್ಯಾನೇಜರ್‌ಗಳು, ಕೆಎಸ್‌ಸಿಸಿಎಸ್‌ಎಫ್ ಆಡಿಟರ್‌ಗಳ ವಿರುದ್ಧ ಎಫ್ಐಆರ್‌ ದಾಖಲಾಗಿದೆ.

ಸೊಸೈಟಿ ಮಹಾಮಂಡಲದಲ್ಲಿ 2015 ಜ.5ರಂದು ಎಫ್ಡಿಎ ಹಾಗೂ ಅಕೌಂಟೆಂಟ್‌ ಆಗಿ ಆರೋಪಿ ಆಶಾಲತಾ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗಿತ್ತು. 2018ರ ಮೇ 31ರಂದು ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಇವರನ್ನು ಉಸ್ತುವಾರಿ ಸಿಇಒ ಆಗಿ ನೇಮಕ ಮಾಡಲಾಗಿತ್ತು. ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದ ಎಲ್ಲ ವ್ಯವಹಾರಗಳು ಇವರ ವಶದಲ್ಲಿಯೇ ಇದ್ದು ಲೆಕ್ಕಪರಿಶೋಧಕರಿಗೆ ಲೆಕ್ಕ ಪತ್ರ ಒದಗಿಸುತ್ತಿದ್ದರು.

ಕಳೆದ ಅ.9ರಂದು ಸಹಕಾರ ಸಚಿವರು ನಡೆಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಆಶಾಲತಾ ಅವರು ಸೊಸೈಟಿಯ ಹಣವನ್ನು ಅಪೆಕ್ಸ್‌ ಸಹಕಾರ ಬ್ಯಾಂಕ್‌, ಬಿಡಿಸಿಸಿ ಬ್ಯಾಂಕ್‌ನಲ್ಲಿ ಠೇವಣಿ ಮಾಡಿರುವುದಾಗಿ ತಿಳಿಸಿದ್ದರು. ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್‌ ಎಂ.ಡಿ.ಯು ಬಿಡಿಸಿಸಿ ಬ್ಯಾಂಕ್‌ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಲ ನಿಯಮಿತದಿಂದ ಯಾವುದೇ ಠೇವಣಿಯನ್ನು ಮಾಡಿಲ್ಲ ಎಂದು ತಿಳಿಸಿದ್ದರು. ನಂತರ ಆಶಾಲತಾ ಠೇವಣಿಯನ್ನಿಟ್ಟಿರುತ್ತೇವೆ ಎಂದು ಇದಕ್ಕೆ ಸಂಬಂಧಿಸ ಪಾಸ್‌ಬುಕ್‌ಗಳು ಮನೆಯಲ್ಲಿರುತ್ತವೆ ಎಂದು ತಿಳಿಸಿದ್ದರು.ನಂತರ ನನ್ನ ಗಂಡ ಮನೆಯ ಬೀಗ ಹಾಕಿಕೊಂಡು ಹೋಗಿರುತ್ತಾರೆ ಹಾಗೂ ಸಿಬ್ಬಂದಿ ರಜೆಯಲ್ಲಿರುವುದರಿಂದ ಸೋಮವಾರ ಕಚೇರಿಯಲ್ಲಿ ಇತ್ಯರ್ಥ ಪಡಿಸುತ್ತಾರೆ ಎಂದು ತಿಳಿಸಿದ್ದರು.

ಇದಾದ ಬಳಿಕ ಬ್ಯಾಂಕ್‌ನಲ್ಲಿದ್ದ 111 ಪಿಕೆಟ್‌ ಡೆಪಾಸಿಟ್‌ ಖಾತೆಗಳ ಒಟ್ಟು 19.34 ಕೋಟಿ ರೂ. ನಕಲಿ ಠೇವಣಿ ಬಾಂಡ್‌ಗಳಿತ್ತು. ಕೆಲವು ನಿಶ್ಚಿತ ಠೇವಣಿಗಳನ್ನು ಆಶಾಲತಾ ಅವರೇ ಬರೆದಿದ್ದು ಬ್ಯಾಂಕ್‌ ದೃಢೀಕರಣ ಪತ್ರಗಳನ್ನು ಅವರೇ ಖುದ್ದಾಗಿ ತಂದಿದ್ದು ಲೆಕ್ಕ ಪರಿಶೋಧಕರಿಗೂ ನಕಲಿ ಪ್ರಮಾಣಪತ್ರ ನೀಡಿದ್ದಾರೆ. 2017ರಿಂದ ಬ್ಯಾಂಕಿನ ಸ್ಥಿರ ಠೇವಣಿಗಳ ಹಣವನ್ನು ತಮ್ಮ ಪತಿ ಸೋಮಶೇಖರ್‌, ವಿಜಯ್‌ ಕಿರಣ್, ಜೆ.ಮಂಜುನಾಥ್‌, ಸುಜಯ್‌ ಅವರಿಗೆ ವರ್ಗಾವಣೆ ಮಾಡಿದ್ದಾರೆ. ‌

2017ರಿಂದ 2023ರವರೆಗೆ ಮೂಲ ಸ್ಥಿರ ಠೇವಣಿ ವರ್ಗಾಯಿಸುವಾಗ ಅಧ್ಯಕ್ಷರ ನಕಲಿ ಸಹಿ ಹಾಕಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಇದಲ್ಲದೇ ಮೂಲ ಎಫ್.ಡಿ. ಬಾಂಡ್‌ಗಳನ್ನು ಸಲ್ಲಿಸು ವಾಗ ಕವರ್‌ ಲೆಟರ್‌ಗಳನ್ನು ಸಹಕಾರ ಪೆಢರೇಷನ್‌ ನಲ್ಲಿ ಇಡಬೇಕಾಗಿದ್ದು ಇದರಲ್ಲಿ ಅಧ್ಯಕ್ಷರು ಮತ್ತು ಸಿಇಒ ಇಬ್ಬರು ಸಹಿ ಮಾಡಬೇಕಾಗುತ್ತದೆ. ಆದರೆ ಸಿಇಒ ಒಬ್ಬರೇ ಸಹಿ ಮಾಡಿ ಎಫ್.ಡಿ. ಮೊತ್ತವನ್ನು ಆಶಾಲತಾ ಅವರ ಪತಿಯ ವೈಯಕ್ತಿಕ ಖಾತೆಗೆ ಹಾಗೂ ವಿಜಯ್‌ ಕಿರಣ್, ಸುಜಯ್, ಮಂಜುನಾಥ್‌ ಖಾತೆಗೆ ವರ್ಗಾಯಿಸಿದ್ದರು ಎಂದು ಎಫ್ಐಆರ್‌ನಲ್ಲಿ ಉಲ್ಲೇಖೀಸಲಾಗಿದೆ. ‌

ಸಿಇಒ ಆಶಾಲತಾ ಜೊತೆ ಬ್ಯಾಂಕಿನವರು ಶಾಮಿಲು

ವಾಸ್ತವವಾಗಿ ಆರ್‌ಟಿಜಿಎಸ್‌ ಫಾರಂನಲ್ಲಿ ಅಧ್ಯಕ್ಷರು, ಸಿಇಒ ಇಬ್ಬರ ಸಹಿ ಇರಬೇಕಾಗಿದ್ದು, ಬ್ಯಾಂಕಿನವರು ಆಶಾಲತಾ ಅವರೊಂದಿಗೆ ಶಾಮೀಲಾಗಿ ಅಧ್ಯಕ್ಷರ ಸಹಿಯನ್ನು ಪಡೆಯದೆ ಹಣವನ್ನು ವರ್ಗಾಯಿಸಿದ್ದಾರೆ. ಇಲ್ಲಿಯವರೆಗೆ ಬ್ಯಾಂಕಿನವರು ಅಧ್ಯಕ್ಷರಿಗೆ, ನಿರ್ದೇಶಕರಿಗೆ ಹಾಗೂ ಪದಾಧಿಕಾರಿಗಳಿಗೆ ಹಣದ ವ್ಯವಹಾರದ ಬಗ್ಗೆ ಯಾವುದೇ ಮಾಹಿತಿ ತಿಳಿಸದೆ ಇನ್‌ ಚಾರ್ಜ್‌ ಸಿಇಒ ಆಶಾಲತಾ ಜೊತೆ ಬ್ಯಾಂಕಿನವರು ಶಾಮಿಲಾಗಿದ್ದಾರೆ. ಈ ವಿಚಾರವು ಬ್ಯಾಂಕಿನಿಂದ ದೃಢೀಕರಣ ಪತ್ರ ಪಡೆದ ನಂತರ ಬ್ಯಾಂಕಿನಲ್ಲಿ ಶೂನ್ಯ ಎಫ್.ಡಿ.ಗಳಿರುತ್ತವೆಂದು ತಿಳಿದಿದೆ. ಆಶಾಲತಾ ನಕಲಿ ಠೇವಣಿ ಮಾಡುವ ಮೂಲಕ ಫೆಡರೇಷನ್‌ಗೆ ಮೋಸ ಮಾಡಿದ್ದಾರೆ. ಫೆಡರೇಷನ್‌ನ ಲೆಕ್ಕ ಪರಿಶೋಧಕರಿಗೂ ನಕಲಿ ದಾಖಲಾತಿ ನೀಡಿದ್ದಾರೆ. ಇವರು ನೀಡಿದ ಮೋಸದ ದಾಖಲೆಗಳನ್ನು ಲೆಕ್ಕ ಪರಿಶೋಧಕರು ಪರಿಶೀಲಿಸಿರುವುದಿಲ್ಲ, ಆದ್ದರಿಂದ ಫೆಡರೇಷನ್‌ನ 19.34 ಕೋಟಿ ರೂ. ದುರುಪಯೋಗಪಡಿಸಿ ಕೊಂಡಿರುವ ಆಶಾಲತಾ, ಇತರ ಆರೋಪಿಗಳು ಹಾಗೂ ಬಿಡಿಸಿಸಿ ಮತ್ತು ಅಪೆಕ್ಸ್‌ ಬ್ಯಾಂಕ್‌ನ ಮ್ಯಾನೇಜರ್‌ಗಳು ಮತ್ತು ಅಡಿಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖೀಸಲಾಗಿದೆ. ‌

ಸಿಇಒ ವಂಚಿಸಿದ್ದು ಹೇಗೆ?

 ಬ್ಯಾಂಕ್‌ನಲ್ಲಿದ್ದ 111 ಪಿಕೆಟ್‌ ಡೆಪಾಸಿಟ್‌ ಖಾತೆಗಳಲ್ಲಿ 19.34 ಕೋಟಿ ರೂ. ನಕಲಿ ಠೇವಣಿ ಬಾಂಡ್‌ ಪತ್ತೆ

 ಠೇವಣಿಗಳನ್ನು ಸಿಇಒ ಅವರೇ ಬರೆದಿದ್ದಲ್ಲದೇ ಲೆಕ್ಕ ಪರಿಶೋಧಕರಿಗೂ ನಕಲಿ ಪ್ರಮಾಣಪತ್ರ ಸಲ್ಲಿಕೆ

 ಸ್ಥಿರ ಠೇವಣಿ ಹಣ ತನ್ನ ಪತಿ ಸೋಮಶೇಖರ್‌, ವಿಜಯ್‌ ಕಿರಣ್, ಮಂಜುನಾಥ್‌, ಸುಜಯ್‌ ಎಂಬುವರಿಗೆ ವರ್ಗ

 2017ರಿಂದ 2023ರವರೆಗೆ ಮೂಲ ಸ್ಥಿರ ಠೇವಣಿ ವರ್ಗಾಯಿಸುವಾಗ ಅಧ್ಯಕ್ಷರ ನಕಲಿ ಸಹಿ ಹಾಕಿ ದಾಖಲೆಗಳ ಸೃಷ್ಟಿ

ಟಾಪ್ ನ್ಯೂಸ್

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

17-bng

Bengaluru: ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

16-bng

Bengaluru: ಹೂಡಿಕೆಯಲ್ಲಿ ಹಣ ದ್ವಿಗುಣ ಆಮಿಷ ತೋರಿಸಿ 35.35 ಲಕ್ಷ ರೂ. ವಂಚನೆ

15-bng

Bengaluru: ಸಾಕ್ಷಿದಾರರಿಗೆ ಜೈಲಿನಿಂದ ಬೆದರಿಕೆ: ಜೈಲು ಅಧೀಕ್ಷಕರ ವಿರುದ್ದ ತನಿಖೆ

9-bng

Bengaluru: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

Putin: ಉಕ್ರೈನ್‌ ವಿಚಾರದಲ್ಲಿ ಪ್ರಧಾನಿ ಮೋದಿ ನಿಲುವು ಹೊಗಳಿದ ರಷ್ಯಾ ಅಧ್ಯಕ್ಷ ಪುಟಿನ್

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.