Bengaluru: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್‌ ಜಪ್ತಿ

ವಿದೇಶದಿಂದ ಬೆಂಗಳೂರಿಗೆ ಮಾದಕ ವಸ್ತು ತರಿಸಿದ್ದ ಆರೋಪಿಗಳು ; ಕಸ್ಟಮ್ಸ್‌, ಸಿಸಿಬಿ ಜಂಟಿ ಕಾರ್ಯಾಚರಣೆ

Team Udayavani, Oct 19, 2024, 12:16 PM IST

9-bng

ಬೆಂಗಳೂರು: ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಿದೇಶಗಳಿಂದ ಭಾರ ತೀಯ ಅಂಚೆ ಮೂಲಕ ತರಿಸಿಕೊಂಡಿದ್ದ 21.17 ಕೋಟಿ ರೂ. ಮೌಲ್ಯದ ವಿವಿಧ ಮಾದರಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಂಡಿಯನ್‌ ಪೋಸ್ಟ್‌ ಮುಖಾಂತರ ವಿವಿಧ ದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಪೊಲೀಸರು ನಿಗಾವಹಿಸಿದ್ದರು. ಬೆಂಗಳೂರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು, ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿ, ಕೆಲವು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು.

ಸೆಪ್ಟೆಂಬರ್‌ನಲ್ಲಿ ನಗರದ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಇಂತಹುದೇ 2 ಪ್ರಕರಣಗಳು ಹಾಗೂ ಸಿಸಿಬಿ ಠಾಣೆಯಲ್ಲಿ 1 ಪ್ರಕರಣ ದಾಖಲಿಸಿದ್ದು, ಈ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿತ್ತು.

606 ಪಾರ್ಸಲ್‌ಗ‌ಳಲ್ಲಿ ಡ್ರಗ್ಸ್‌ ಪತ್ತೆ: ಇದರ ಮುಂದುವರಿದ ಭಾಗವಾಗಿ, ಚಾಮ ರಾಜ ಪೇಟೆಯ ಫಾರಿನ್‌ ಪೋಸ್ಟ್‌ ಆಫೀಸ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಯು.ಎಸ್‌, ಯು. ಕೆ., ಬೆಲ್ಜಿಯಂ, ಥಾಯ್ಲೆಂಡ್‌, ನೇದರ್‌ ಲ್ಯಾಂಡ್‌ ಇತರೆ ದೇಶಗಳಿಂದ ಬೆಂಗಳೂರಿಗೆ ತರಿಸಿಕೊಂಡಿದ್ದ ಸುಮಾರು 3,500 ಅನುಮಾನಾಸ್ಪದ ಪಾರ್ಸೆಲ್‌ಗ‌ಳನ್ನು ಶ್ವಾನ ದಳದ ಸಹಾಯದಿಂದ ಪರಿಶೀಲನೆ ನಡೆಸಿದ್ದರು. ಆ ವೇಳೆ ಈ ಪಾರ್ಸಲ್‌ಗ‌ಳ ಪೈಕಿ 606 ಪಾರ್ಸ ಲ್‌ಗ‌ಳಲ್ಲಿ ಡ್ರಗ್ಸ್‌ ಇರುವುದು ಖಚಿತವಾಗಿತ್ತು.

ಸಿಸಿಬಿ ಪೊಲೀಸರು 606 ಪಾರ್ಸೆಲ್‌ ಗಳಲ್ಲಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ. ಆರೋಪಿಗಳು ಭಾರ ತೀಯ ಅಂಚೆ ಮೂಲಕ ಯು.ಎಸ್‌, ಯು.ಕೆ. ಬೆಲ್ಜಿಯಂ, ಥಾಯ್ಲೆಂಡ್‌ ಹಾಗೂ ಇತರೆ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಂಡು ಅವುಗಳನ್ನು ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಿ ಅಕ್ರಮ ಹಣದ ಸಂಪಾದನೆಯಲ್ಲಿ ತೊಡಗುತ್ತಿ ದ್ದರೆಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

ಶ್ವಾನಗಳ ನೆರವಿನಿಂದ ಡ್ರಗ್ಸ್‌ ಪತ್ತೆ

ವಿದೇಶದಿಂದ ಡ್ರಗ್ಸ್‌ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುವುದರ ಬಗ್ಗೆ ಸಿಸಿಬಿ ಪೊಲೀಸರು ನಿಗಾವಹಿಸಿದ್ದರು. ಯುಎಸ್‌, ಯು.ಕೆ., ಥಾಯ್ಲೆಂಡ್‌ನಿಂದ ಭಾರತೀಯ ಅಂಚೆ ಮೂಲಕ ಡ್ರಗ್ಸ್‌ ತರಿಸಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಚಾಮರಾಜಪೇಟೆಯ ಫಾರಿನ್‌ ಪೋಸ್ಟ್‌ ಆಫೀಸ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ದೇಶಗಳಿಂದ ಬೆಂಗಳೂರಿಗೆ ತರಿಸಿಕೊಂಡಿದ್ದ ಸುಮಾರು 3,500 ಅನುಮಾನಾಸ್ಪದ ಪಾರ್ಸೆಲ್‌ಗ‌ಳನ್ನು ಶ್ವಾನ ದಳದ ಸಹಾಯದಿಂದ ಪರಿಶೀಲನೆ ನಡೆಸಿದ್ದರು. ಈ ವೇಳೆ 606 ಪಾರ್ಸೆಲ್‌ಗ‌ಳಲ್ಲಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್‌ಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಟಾಪ್ ನ್ಯೂಸ್

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

17-bng

Bengaluru: ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

16-bng

Bengaluru: ಹೂಡಿಕೆಯಲ್ಲಿ ಹಣ ದ್ವಿಗುಣ ಆಮಿಷ ತೋರಿಸಿ 35.35 ಲಕ್ಷ ರೂ. ವಂಚನೆ

15-bng

Bengaluru: ಸಾಕ್ಷಿದಾರರಿಗೆ ಜೈಲಿನಿಂದ ಬೆದರಿಕೆ: ಜೈಲು ಅಧೀಕ್ಷಕರ ವಿರುದ್ದ ತನಿಖೆ

7-bng

Bengaluru: ಸೊಸೈಟಿ ಮಹಾಮಂಡಲದಲ್ಲಿ 19.3 ಕೋಟಿ ಅಕ್ರಮ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Champions Trophy: Pakistan has made a new offer to India

Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

Life Style: ಧಾವಂತ ಓಡಾಟ- ಒಂದಷ್ಟು ಘನಂಧಾರಿ ಆಲೋಚನೆಗಳು

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.