Malpe: ಮನೆ ಬಿಟ್ಟು ಬಂದಿರುವ ಅಪ್ರಾಪ್ತ ಬಾಲಕಿಯರ ರಕ್ಷಣೆ
Team Udayavani, Oct 19, 2024, 12:51 PM IST
ಮಲ್ಪೆ: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿರುವ ಘಟನೆ ಮಲ್ಪೆ ಬೀಚಿನಲ್ಲಿ ಆ.18ರ ಶುಕ್ರವಾರ ನಡೆದಿದೆ. ರಕ್ಷಿಸಲ್ಪಟ್ಟಿರುವ ಮಕ್ಕಳು ಹಾವೇರಿಯವರೆಂದು ತಿಳಿದುಬಂದಿದೆ.
ವಿದ್ಯಾಭ್ಯಾಸ ಮುಂದುವರಿಸುವ ಆಸಕ್ತಿ ಹೊಂದಿದ್ದೇವೆ, ಪೋಷಕರಿಲ್ಲದೆ ಅಸಹಾಯಕರಾದೆವು. ಕಲಿಯುವ ಉದ್ದೇಶಕ್ಕಾಗಿ ಹಣ ಕ್ರೋಢೀಕರಿಸಲು, ಹಾವೇರಿಯಿಂದ ಉಡುಪಿಗೆ ಭಿಕ್ಷೆಯಾಚಿಸಲು ಬಂದಿರುವುದಾಗಿ ಮಕ್ಕಳು ಹೇಳಿಕೊಂಡಿದ್ದಾರೆ.
ಬೀಚ್ ನಲ್ಲಿ ವಿಹರಿಸುತ್ತಿದ್ದ ಇಬ್ಬರು ಬಾಲಕಿಯರ ಚಲನವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬೀಚ್ ಗಸ್ತು ಸಿಬ್ಬಂದಿ ಸುರೇಶ್ ಅಂಚನ್ ಮತ್ತು ಸುಬ್ರಮಣ್ಯ ಅವರು ಬಾಲಕಿಯರು ಮನೆಬಿಟ್ಟು ಬಂದಿರುವುದು ಗೊತ್ತಾಗಿದೆ. ತಕ್ಷಣ ಅವರು ಅಪ್ರಾಪ್ತ ಬಾಲಕಿಯರ ರಕ್ಷಣೆಗೈಯಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಆ ಬಳಿಕ ಒಳಕಾಡುವರು ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕಕ್ಕೆ ವಸ್ತುಸ್ಥಿತಿಯನ್ನು ವಿವರಿಸಿದ್ದಾರೆ.
ನಂತರ ನಗರ ಮಹಿಳಾ ಪೋಲಿಸ್ ಠಾಣೆಯ ಪಿ.ಎಸ್.ಐ ಪ್ರೇಮನ್ ಗೌಡ ಪಾಟೀಲ್, ಪೇದೆ ಮಹದೇವ್ ಅವರೊಂದಿಗೆ ಒಳಕಾಡು ಅವರು ಬೀಚ್ ಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ತರುವಾಯ ಕಲ್ಯಾಣ ಸಮಿತಿಯ ಆದೇಶದಂತೆ ರಕ್ಷಿಸಲ್ಪಟ್ಟ ಅಪ್ರಾಪ್ತ ಮಕ್ಕಳನ್ನು ನಿಟ್ಟೂರಿನ ಬಾಲಕಿಯರ ಬಾಲಭವನದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ. ಈ ಸಂದರ್ಭ ಮಕ್ಕಳ ರಕ್ಷಣಾ ಘಟಕದ ಮಹೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ
Udupi: ಪೆಟ್ರೋಲ್ ಪಂಪ್ ಬಳಿಯೇ ಹೊತ್ತಿ ಉರಿದ ಸ್ಕೂಟರ್; ತಪ್ಪಿದ ಭಾರೀ ಅನಾಹುತ
Special Train: ದೀಪಾವಳಿ- ಕೊಂಕಣ ರೈಲ್ವೇಯಿಂದ ಬೆಂಗಳೂರು- ಕಾರವಾರ ವಿಶೇಷ ರೈಲು
By-election;ವಿಧಾನ ಪರಿಷತ್ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು
Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.