Champions Trophy: ಪಾಕ್‌ ಗೆ ಬನ್ನಿ ಆದರೆ….; ಭಾರತಕ್ಕೆ ಹೊಸ ಆಫರ್‌ ನೀಡಿದ ಪಾಕಿಸ್ತಾನ


Team Udayavani, Oct 19, 2024, 3:56 PM IST

Champions Trophy: Pakistan has made a new offer to India

ಇಸ್ಲಮಾಬಾದ್/ಮುಂಬೈ: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ (Champions Trophy) ಕೂಟ ಆಯೋಜನೆಗೆ ಪಾಕಿಸ್ತಾನ ತಲೆಕೆಡಿಸಿ ಕೂತಿದೆ. ಚಾಂಪಿಯನ್ಸ್‌ ಟ್ರೋಫಿ ಕೂಟವು ಪಾಕಿಸ್ತಾನದಲ್ಲಿ ನಡೆಯುವುದೆಂದು ನಿಗದಿಯಾಗಿದೆ. ಆದರೆ ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸದ ಕಾರಣದಿಂದ ಕೂಟ ಆಯೋಜನೆಯನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ ಪಾಕಿಸ್ತಾನ. ಹಲವು ತಂತ್ರಗಳನ್ನು ಅನುಸರಿಸಿ ಭಾರತವನ್ನು ಕರೆಸಿಕೊಳ್ಳುವ ಪಾಕಿಸ್ತಾನದ ತಂತ್ರ ಫಲಿಸದ ಕಾರಣ ಇದೀಗ ಮತ್ತೊಂದು ತಂತ್ರದ ಮೊರೆ ಹೋಗಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಇದೀಗ ಹೊಸ ಯೋಜನೆಯೊಂದಿಗೆ ಬಿಸಿಸಿಐ ಯನ್ನು ಸಂಪರ್ಕಿಸಿದೆ. ಭದ್ರತಾ ಕಾರಣಗಳಿಂದಾಗಿ ಭಾರತ ತಂಡವು ಪಾಕಿಸ್ತಾನದಲ್ಲಿ ಉಳಿಯಲು ಸಿದ್ಧರಿಲ್ಲದಿದ್ದರೆ ಮುಂದಿನ ವರ್ಷ ಚಾಂಪಿಯನ್ಸ್ ಟ್ರೋಫಿಯ ಪಂದ್ಯಗಳ ನಡುವೆ ಭಾರತವು ನವದೆಹಲಿ ಅಥವಾ ಚಂಡೀಗಢಕ್ಕೆ ಮರಳಲು ಅವಕಾಶ ನೀಡುವ ವ್ಯವಸ್ಥೆಯನ್ನು ಪ್ರಸ್ತಾಪಿಸಿದೆ. ಅಂದರೆ ಪ್ರತಿ ಪಂದ್ಯದ ಬಳಿಕ ಮರಳಿ ಭಾರತಕ್ಕೆ ಬರಬಹುದು ಎಂದು ಹೇಳಿದೆ.

ಭಾರತ ತಂಡವು ನವದೆಹಲಿ ಅಥವಾ ಚಂಡೀಗಢ/ಮೊಹಾಲಿಯಲ್ಲಿ ತಮ್ಮ ಕ್ಯಾಂಪ್ ಮಾಡಬಹುದು. ತಮ್ಮ ಪಂದ್ಯಗಳಿಗೆ ಲಾಹೋರ್‌ ಗೆ ಪ್ರಯಾಣಿಸಲು ಚಾರ್ಟರ್ಡ್ ಫ್ಲೈಟ್‌ ಗಳನ್ನು ಬಳಸಬಹುದು ಎಂದು ಬಿಸಿಸಿಐಗೆ ಪಿಸಿಬಿ ಮೌಖಿಕವಾಗಿ ಸೂಚಿಸಿದೆ. ಆದರೆ, ಭಾರತೀಯ ಮಂಡಳಿಗೆ ಲಿಖಿತವಾಗಿ ಯಾವುದೇ ಸಲಹೆಗಳನ್ನು ನೀಡಿಲ್ಲ ಎಂದು ಪಿಸಿಬಿ ಮೂಲವೊಂದು ಶುಕ್ರವಾರ ಪಿಟಿಐಗೆ ದೃಢಪಡಿಸಿದೆ.

“ಆದರೆ ಹೌದು, ಭಾರತವು ಪಾಕಿಸ್ತಾನದಲ್ಲಿ ತನ್ನ ಪಂದ್ಯಗಳನ್ನು ಆಡುವುದನ್ನು ಖಚಿತಪಡಿಸಿಕೊಳ್ಳಲು ಈ ಆಯ್ಕೆಗಳನ್ನು ಅಧಿಕಾರಿಗಳ ನಡುವೆ ಮೌಖಿಕವಾಗಿ ಚರ್ಚಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಚಾಂಪಿಯನ್ಸ್ ಟ್ರೋಫಿ ಕೂಟವು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದ್ದು, ಲಾಹೋರ್, ರಾವಲ್ಪಿಂಡಿ ಮತ್ತು ಕರಾಚಿಯಲ್ಲಿ ಪಂದ್ಯಗಳನ್ನು ನಿಗದಿಪಡಿಸಲಾಗಿದೆ. ಭಾರತದ ಗಡಿಯ ಸಾಮೀಪ್ಯದ ಕಾರಣದಿಂದ ಲಾಹೋರ್‌ ನಲ್ಲಿ ಭಾರತದ ಪಂದ್ಯಗಳನ್ನು ಯೋಜಿಸಿದೆ. ಪಂದ್ಯಾವಳಿಯಲ್ಲಿ ಭಾರತದ ಮೂರು ಗುಂಪು-ಹಂತದ ಪಂದ್ಯಗಳನ್ನು ಫೆಬ್ರವರಿ 20 (ಬಾಂಗ್ಲಾದೇಶ ವಿರುದ್ಧ), ಫೆಬ್ರವರಿ 23 (ಪಾಕಿಸ್ತಾನ ವಿರುದ್ಧ), ಮತ್ತು ಮಾರ್ಚ್ 2 (ನ್ಯೂಜಿಲೆಂಡ್ ವಿರುದ್ಧ) ರಂದು ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

1-a-raut

Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Toxic To Coolie.. ಇಲ್ಲಿದೆ 2025ರ ಬಹು ನಿರೀಕ್ಷಿತ ಸೌತ್‌ ಇಂಡಿಯಾ ಸಿನಿಮಾಗಳ ಪಟ್ಟಿ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-op

IND vs NZ 1st Test; ಅಮೋಘ ಆಟವಾಡಿ 99 ಕ್ಕೆ ಔಟಾದ ರಿಷಭ್ ಪಂತ್!

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Kundapura: ಭಜನ ಮಂದಿರದ ಚಿನ್ನಾಭರಣ ಕಳವು

Kundapura: ಭಜನ ಮಂದಿರದ ಚಿನ್ನಾಭರಣ ಕಳವು

Fraud: ಉದ್ಯೋಗ ಭರವಸೆ ನೀಡಿ ವಂಚನೆ; ಶಿಕ್ಷಕಿ ವಿರುದ್ಧ ಇನ್ನೆರಡು ದೂರು

Fraud: ಉದ್ಯೋಗ ಭರವಸೆ ನೀಡಿ ವಂಚನೆ; ಶಿಕ್ಷಕಿ ವಿರುದ್ಧ ಇನ್ನೆರಡು ದೂರು

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

2

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.