Devaru Ruju Madidanu Movie ಸುನಿ ಸಿನಿಮಾದ ನಾಯಕಿಯರಿವರು..
Team Udayavani, Oct 19, 2024, 5:33 PM IST
ನಿರ್ದೇಶಕ ಸಿಂಪಲ್ ಸುನಿ “ದೇವರು ರುಜು ಮಾಡಿದನು’ ಚಿತ್ರ ಮಾಡಲು ಮುಂದಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದ ಮುಹೂರ್ತ ಇದೇ ಭಾನುವಾರ ನಡೆಯುತ್ತಿದೆ. ಈ ಚಿತ್ರದ ಮೂಲಕ ನವನಟ ವೀರಾಜ್ ಹೀರೋ ಆಗುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಇಬ್ಬರು ನವನಟಿಯರು ನಾಯಕಿಯರಾಗಿ ಎಂಟ್ರಿಕೊಡುತ್ತಿದ್ದಾರೆ.ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಎಂಬ ನವ ನಾಯಕಿಯರನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಸುನಿ.
ಕೀರ್ತಿ ಕೃಷ್ಣ ನಟ ಶರಣ್ ಅವರ ತಂಗಿ ಮಗಳು. ಶರಣ್ ಇಡೀ ಕುಟುಂಬ ಸಿನಿಮಾ ರಂಗದಲ್ಲಿದೆ. ಈಗ ಅವರ ತಂಗಿ ಮಗಳು ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಬಲಗಾಲಿಟ್ಟಿದ್ದಾರೆ. ದೇವರು ರುಜು ಮಾಡಿದವನು ಚಿತ್ರದಲ್ಲಿ ವೀರಾಜ್ ಗೆ ಜೋಡಿಯಾಗಿ ಕೀರ್ತಿ ಕೃಷ್ಣ ಬಣ್ಣ ಹಚ್ಚುತ್ತಿದ್ದಾರೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರ ಸ್ಟುಡಿಯೋದಲ್ಲಿ ನಟನಾ ಕೋರ್ಸ್ ಕಲಿತಿರುವ ಕೀರ್ತಿ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸಂಗೀತವೇ ತನ್ನ ಪ್ರಪಂಚ ಎಂದು ಜೀವಿಸುವ ಕೀರ್ತಿ ಕೃಷ್ಣ ಸುಶ್ರಾವ್ಯ ಎಂಬ ಪಾತ್ರದಲ್ಲಿ ವೀಣಾ ವಾದಕಿಯಾಗಿ ಅಭಿನಯಿಸುತ್ತಿದ್ದಾರೆ.
ಇದರ ಜೊತೆಗೆ ದೇವರು ರುಜು ಮಾಡಿದನು ಸಿನಿಮಾದಲ್ಲಿ ಕೀರ್ತಿ ಕೃಷ್ಣ ಮಾತ್ರವಲ್ಲದೇ ದಿವಿತಾ ರೈ ಕೂಡ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. ಮೂಲತಃ ಮಂಗಳೂರಿನವರಾಗಿರುವ ದಿವಿತಾ, ಮಿಸ್ ಇಂಡಿಯಾ ಯೂನಿವರ್ಸ-2022 ಕಿರೀಟ ಮುಡಿಗೇರಿಸಿಕೊಂಡಾಕೆ. ಹಿಂದಿಯಲ್ಲಿ ಒಂದು ಚಿತ್ರ ಬಿಡುಗಡೆಗೆ ಎದುರು ನೋಡುತ್ತಿರುವ ಕಡಲತಡಿಯ ಈ ಸುಂದರಿ ದೇವರು ರುಜು ಮಾಡಿದನು ಸಿನಿಮಾ ಮೂಲಕ ನಾಯಕಿಯಾಗಿ ನಟಿಸುತ್ತಿದ್ದಾಳೆ. ಕೊಂಕಣಿ ಸಮುದಾಯಕ್ಕೆ ಸೇರಿದ ಕನ್ನಡ ಹುಡುಗಿಯಾಗಿ, ಹಾಡುಗಾರ್ತಿಯಾಗಿ ದಿವಿತಾ ರೈ ಪಾತ್ರ ಮಾಡುತ್ತಿದ್ದಾರೆ.
ಗ್ರೀನ್ ಹೌಸ್ ಮೂವೀಸ್ ಅಡಿಯಲ್ಲಿ ದೇವರು ರುಜು ಮಾಡಿದನು ಸಿನಿಮಾವನ್ನು ಗೋವಿಂದ್ ರಾಜ್ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೆ ಜೆಜೆ, ಜೇಡ್ ಸ್ಯಾಂಡಿ ಹಾಗೂ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಎಂಎಸ್ಇಝಡ್: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ
Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗೌರ್ನರ್ ಅಸ್ತು
ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು!
Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು
BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.