![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 19, 2024, 5:33 PM IST
ನಿರ್ದೇಶಕ ಸಿಂಪಲ್ ಸುನಿ “ದೇವರು ರುಜು ಮಾಡಿದನು’ ಚಿತ್ರ ಮಾಡಲು ಮುಂದಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈ ಚಿತ್ರದ ಮುಹೂರ್ತ ಇದೇ ಭಾನುವಾರ ನಡೆಯುತ್ತಿದೆ. ಈ ಚಿತ್ರದ ಮೂಲಕ ನವನಟ ವೀರಾಜ್ ಹೀರೋ ಆಗುತ್ತಿದ್ದಾರೆ. ಈಗ ಈ ಚಿತ್ರಕ್ಕೆ ಇಬ್ಬರು ನವನಟಿಯರು ನಾಯಕಿಯರಾಗಿ ಎಂಟ್ರಿಕೊಡುತ್ತಿದ್ದಾರೆ.ಕೀರ್ತಿ ಕೃಷ್ಣ ಹಾಗೂ ದಿವಿತಾ ರೈ ಎಂಬ ನವ ನಾಯಕಿಯರನ್ನು ತಮ್ಮ ಚಿತ್ರಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ ಸುನಿ.
ಕೀರ್ತಿ ಕೃಷ್ಣ ನಟ ಶರಣ್ ಅವರ ತಂಗಿ ಮಗಳು. ಶರಣ್ ಇಡೀ ಕುಟುಂಬ ಸಿನಿಮಾ ರಂಗದಲ್ಲಿದೆ. ಈಗ ಅವರ ತಂಗಿ ಮಗಳು ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಬಲಗಾಲಿಟ್ಟಿದ್ದಾರೆ. ದೇವರು ರುಜು ಮಾಡಿದವನು ಚಿತ್ರದಲ್ಲಿ ವೀರಾಜ್ ಗೆ ಜೋಡಿಯಾಗಿ ಕೀರ್ತಿ ಕೃಷ್ಣ ಬಣ್ಣ ಹಚ್ಚುತ್ತಿದ್ದಾರೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರ ಸ್ಟುಡಿಯೋದಲ್ಲಿ ನಟನಾ ಕೋರ್ಸ್ ಕಲಿತಿರುವ ಕೀರ್ತಿ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸಂಗೀತವೇ ತನ್ನ ಪ್ರಪಂಚ ಎಂದು ಜೀವಿಸುವ ಕೀರ್ತಿ ಕೃಷ್ಣ ಸುಶ್ರಾವ್ಯ ಎಂಬ ಪಾತ್ರದಲ್ಲಿ ವೀಣಾ ವಾದಕಿಯಾಗಿ ಅಭಿನಯಿಸುತ್ತಿದ್ದಾರೆ.
ಇದರ ಜೊತೆಗೆ ದೇವರು ರುಜು ಮಾಡಿದನು ಸಿನಿಮಾದಲ್ಲಿ ಕೀರ್ತಿ ಕೃಷ್ಣ ಮಾತ್ರವಲ್ಲದೇ ದಿವಿತಾ ರೈ ಕೂಡ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. ಮೂಲತಃ ಮಂಗಳೂರಿನವರಾಗಿರುವ ದಿವಿತಾ, ಮಿಸ್ ಇಂಡಿಯಾ ಯೂನಿವರ್ಸ-2022 ಕಿರೀಟ ಮುಡಿಗೇರಿಸಿಕೊಂಡಾಕೆ. ಹಿಂದಿಯಲ್ಲಿ ಒಂದು ಚಿತ್ರ ಬಿಡುಗಡೆಗೆ ಎದುರು ನೋಡುತ್ತಿರುವ ಕಡಲತಡಿಯ ಈ ಸುಂದರಿ ದೇವರು ರುಜು ಮಾಡಿದನು ಸಿನಿಮಾ ಮೂಲಕ ನಾಯಕಿಯಾಗಿ ನಟಿಸುತ್ತಿದ್ದಾಳೆ. ಕೊಂಕಣಿ ಸಮುದಾಯಕ್ಕೆ ಸೇರಿದ ಕನ್ನಡ ಹುಡುಗಿಯಾಗಿ, ಹಾಡುಗಾರ್ತಿಯಾಗಿ ದಿವಿತಾ ರೈ ಪಾತ್ರ ಮಾಡುತ್ತಿದ್ದಾರೆ.
ಗ್ರೀನ್ ಹೌಸ್ ಮೂವೀಸ್ ಅಡಿಯಲ್ಲಿ ದೇವರು ರುಜು ಮಾಡಿದನು ಸಿನಿಮಾವನ್ನು ಗೋವಿಂದ್ ರಾಜ್ ಸಿಟಿ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾಗೆ ಜೆಜೆ, ಜೇಡ್ ಸ್ಯಾಂಡಿ ಹಾಗೂ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.