Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ
Team Udayavani, Oct 19, 2024, 6:09 PM IST
ಬಳ್ಳಾರಿ: ಚನ್ನಪಟ್ಟಣದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ರಕ್ಷಣೆ ಮಾಡಬೇಕು ಎನ್ನುತ್ತಲೇ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ಸಂಡೂರಿನಲ್ಲಿ ಶನಿವಾರ (ಅ.19) ಮಾತನಾಡಿದ ಅವರು ಪರೋಕ್ಷವಾಗಿ ಚನ್ನಪಟ್ಟಣ ಟಿಕೆಟ್ ಜೆಡಿಎಸ್ ಗೆ ಎಂದರು.
ಚನ್ನಪಟ್ಟಣದಲ್ಲಿ ನಮ್ಮ ಕಾರ್ಯ ಕರ್ತರ ರಕ್ಷಣೆ ಮಾಡಬೇಕಿದೆ. ನಾನು ಎಲ್ಲೂ ಆಕಾಂಕ್ಷಿ ಎಂದು ಹೇಳಿಲ್ಲ. 1994 ರಿಂದ ದೇವೇಗೌಡರಿಂದ ಕುಮಾರಸ್ವಾಮಿವರೆಗೂ ಚನ್ನಪಟ್ಟಣದಲ್ಲಿ ಗೆಲುವು ಸಾಧಿಸಿದ್ದೇವೆ. ನಾನು ಸ್ಪರ್ಧೆ ಮಾಡುತ್ತೇನೆಂದರೂ ಒಂದು ರೀತಿ, ಸ್ಪರ್ಧೆ ಮಾಡಲ್ಲ ಎಂದರೂ ಒಂದು ರೀತಿಯಲ್ಲಿ ಚರ್ಚೆಯಾಗುತ್ತದೆ. ಹೀಗಾಗಿ ಅಭ್ಯರ್ಥಿ ಆಯ್ಕೆ ಬಗ್ಗೆ ಎನ್ಡಿಎ ನಾಯಕರು ತೀರ್ಮಾನ ಮಾಡುತ್ತಾರೆ ಎಂದರು.
ಈಗಾಗಲೇ ಕುಮಾರಣ್ಣ ಕಾರ್ಯಕರ್ತರೊಂದಿಗೆ ಸಭೆ ಮಾಡಿದ್ದಾರೆ. ಅತ್ತ ಸಿ.ಪಿ.ಯೋಗೇಶ್ವರ್ ಕೂಡಾ ಸಭೆ ಮಾಡಿದ್ದಾರೆ. ನಾನೂ ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದ್ದೇನೆ. ಎರಡು ಮೂರು ತಿಂಗಳಿಂದ ನಾನೂ ಕಾರ್ಯಕರ್ತರ ಜೊತೆ ಸೇರಿ ಚನ್ನಪಟ್ಟಣದಲ್ಲಿ ಕೆಲಸ ಮಾಡಿದ್ದೇನೆ. ಚುನಾವಣೆ ಕೆಲಸ ಕೂಡ ಚನ್ನಪಟ್ಟಣದಲ್ಲಿ ನಿರಂತರವಾಗಿ ನಡೆಯುತ್ತಿದೆ ಎಂದು ನಿಖಿಲ್ ಹೇಳಿದರು.
ಕುಮಾರಸ್ವಾಮಿ ಮತ್ತೊಮ್ಮೆ ಸಿಎಂ ಆಗುತ್ತೇನೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಸಿಎಂ ವಿಚಾರ ಸದ್ಯಕ್ಕೆ ಅಪ್ರಸ್ತುತ. ಸದ್ಯ ಇರುವ ಸರ್ಕಾರ ಮೂರುವರೆ ವರ್ಷ ಇರುತ್ತದೆಯೋ ಇಲ್ಲವೋ ನೋಡೋಣ ಎಂದ ನಿಖಿಲ್, ಯತ್ನಾಳ್ ಹೇಳಿಕೆ ಕೇಳಿದ್ದೇನೆ. ಯಾವುದೇ ರೀತಿಯಲ್ಲಿ ತಪ್ಪಾಗಿ ಮಾತನಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗೌರ್ನರ್ ಅಸ್ತು
ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು!
Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು
BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ
Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.