Jammu & Kashmir ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು: ಸಿಎಂ ಒಮರ್ ಅಬ್ದುಲ್ಲಾ

ಜಮ್ಮು ಪ್ರಾಂತ್ಯಕ್ಕೆ ಅನ್ಯಾಯವಿಲ್ಲ... ನಮ್ಮ ಪಕ್ಷ ಮುಸ್ಲಿಮರ ಪಕ್ಷ ಎನ್ನುವವರಿಗೆ ತಿರುಗೇಟು

Team Udayavani, Oct 19, 2024, 5:44 PM IST

1-omar-nn

ಶ್ರೀನಗರ: ”ನಮ್ಮ ಸರಕಾರವು ವಿಧಾನಸಭಾ ಚುನಾವಣೆಯಲ್ಲಿ ಆಗಿರುವ ಮತದಾನದ ಮಾದರಿಯಲ್ಲಿ ಕಾರ್ಯನಿರ್ವಹಿಸುವುದಿಲ್ಲ.ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಎರಡೂ ವಿಭಾಗಗಳ ಜನರ ಮುಖದಲ್ಲಿ ಮತ್ತೆ ನಗು ಕಾಣಬೇಕು” ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶನಿವಾರ(ಅ19) ಹೇಳಿಕೆ ನೀಡಿದ್ದಾರೆ.

“ಚುನಾವಣೆ ಫಲಿತಾಂಶಗಳು ಹೊರಬಂದಾಗ, ಕೆಲವರು ಎನ್‌ಸಿ-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳಿಗೆ ಮತ ಹಾಕದ ಕಾರಣ ಜಮ್ಮುವಿಗೆ ಅನ್ಯಾಯವಾಗುತ್ತದೆ ಎಂದು ವದಂತಿಗಳನ್ನು ಹರಡಲು ಪ್ರಾರಂಭಿಸಿದರು. ಆದರೆ ಯಾರು ಮತ ನೀಡಿದರೂ ನೀಡದಿದ್ದರೂ ನಮ್ಮ ಸರಕಾರ ಎಲ್ಲರಿಗಾಗಿ ಇರುತ್ತದೆ ಎಂದು ಮೊದಲ ದಿನವೇ ಸ್ಪಷ್ಟಪಡಿಸಿದ್ದೇನೆ” ಎಂದರು.

ಎರಡೂ ಪ್ರದೇಶಗಳಿಗೆ ಪ್ರಾತಿನಿಧ್ಯ ನೀಡಲು ಮುಫ್ತಿ ಮೊಹಮ್ಮದ್ ಸಯೀದ್, ಗುಲಾಂ ನಬಿ ಆಜಾದ್ ಮತ್ತು ಅವರ ನೇತೃತ್ವದ ಹಿಂದಿನ ಸಮ್ಮಿಶ್ರ ಸರಕಾರಗಳಂತೆ ಉಪಮುಖ್ಯಮಂತ್ರಿಯನ್ನು ನೇಮಿಸಲು ನ್ಯಾಷನಲ್ ಕಾನ್ಫೆರೆನ್ಸ್ ಯಾವುದೇ ಒತ್ತಾಯಕ್ಕೆ ಒಳಗಾಗಿರಲಿಲ್ಲ. ನಾವು ನಿರ್ಧಾರ ತೆಗೆದುಕೊಂಡು ನಮ್ಮದೇ ಪಕ್ಷದಿಂದಲೇ ಉಪಮುಖ್ಯಮಂತ್ರಿಯಾಗಿ ಸುರೀಂದರ್ ಚೌಧರಿ ಅವರನ್ನು ನೇಮಿಸಿದ್ದೇವೆ. ಸಂಪುಟ ಸೇರುವ ಬಗ್ಗೆ ಕಾಂಗ್ರೆಸ್ ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ” ಎಂದು ಹೇಳಿದರು.

“ನ್ಯಾಷನಲ್ ಕಾನ್ಫೆರೆನ್ಸ್ ಮುಸ್ಲಿಮರ ಪಕ್ಷ ಮತ್ತು ಜಮ್ಮುವಿನ ನಾಯಕರನ್ನು ಸಹಿಸಲಾಗದ ಕಾಶ್ಮೀರ ಮೂಲದ ರಾಜವಂಶದ ಪಕ್ಷ ಎಂದು ಚುನಾವಣ ಪ್ರಚಾರದ ಸಮಯದಲ್ಲಿ ಹೇಳುತ್ತಿದ್ದವರಿಗೆ ಇದು ಉತ್ತರವಾಗಿದೆ. ಈಗ ನಮ್ಮಲ್ಲಿ ಉಪಮುಖ್ಯಮಂತ್ರಿ ಇದ್ದಾರೆ, ಅವರು ಹಿಂದೂ ಮತ್ತು ನನ್ನ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಟೀಕೆಗಳಿಗೆ ತಿರುಗೇಟು ನೀಡಿದರು.

ಬಿಜೆಪಿಯನ್ನು ಹೆಸರಿಸದೆ ಆಕ್ರೋಶ ಹೊರ ಹಾಕಿದ ಸಿಎಂ ”ಒಂದು ಪಕ್ಷಕ್ಕೆ ಲಾಭವಾಗುವ ರೀತಿಯಲ್ಲಿ ಡಿಲಿಮಿಟೇಶನ್ ಮತ್ತು ಮೀಸಲಾತಿ ಮಾಡಲಾಗಿದೆ ಆದರೆ ಸರಕಾರಿ ಯಂತ್ರಗಳ ಬಳಕೆ ಸೇರಿದಂತೆ ಎಲ್ಲಾ ತಂತ್ರಗಳು ನಿಮಗೆ ಚುನಾವಣೆ ಗೆಲ್ಲಲು ಎಂದಿಗೂ ಸಹಾಯ ಮಾಡುವುದಿಲ್ಲ” ಎಂದರು.

ಚುನಾವಣೆಯಲ್ಲಿ ಜಮ್ಮುವಿನಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 90 ಸ್ಥಾನಗಳಲ್ಲಿ ಬಿಜೆಪಿ 29 ಸ್ಥಾನಗಳನ್ನು ಗೆದ್ದು 25.64 ಶೇಕಡಾ ಮತಗಳನ್ನು ಗಳಿಸಿತ್ತು.

ಟಾಪ್ ನ್ಯೂಸ್

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

1-a-vasu

Vasundhra Oswal; ಭಾರತೀಯ ಬಿಲಿಯನೇರ್ ನ ಪುತ್ರಿ ಉಗಾಂಡಾದಲ್ಲಿ ವಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

pub

Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಎಂಎಸ್‌ಇಝಡ್‌: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ

ಎಂಎಸ್‌ಇಝಡ್‌: ಕಾಣೆಯಾಗಿದ್ದ ಭದ್ರತಾ ಸಿಬಂದಿ ಆತ್ಮಹತ್ಯೆ

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

ಮಂಗಳೂರಿನಲ್ಲಿ ರಕ್ಷಿಸಲ್ಪಟ್ಟಿದ್ದ ಮದ್ದೂರಿನ ಮಹಿಳೆ 15 ವರ್ಷ ಬಳಿಕ ಕುಟುಂಬ ಸೇರಿದರು! 

16

Ayanur Manjunath: ಕೇಂದ್ರ ಸಚಿವ ಸ್ಥಾನಕ್ಕೆ ಜೋಶಿ ರಾಜೀನಾಮೆ ನೀಡಲಿ: ಆಯನೂರು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.