Maharashtra; ಪ್ರತೀ ಕ್ಷೇತ್ರದಲ್ಲೂ 10 ಸಾವಿರ ಬೋಗಸ್ ಮತದಾರರು: MVA ಆರೋಪ

ಚುನಾವಣ ಆಯೋಗ ಮೋದಿಯವರ ಕಾಲಿನ ಕೆಳಗೆ ಕುಳಿತಿದೆ ... ದೊಡ್ಡ ರ್‍ಯಾಲಿಯನ್ನು ಮಾಡುತ್ತೇವೆ!!

Team Udayavani, Oct 19, 2024, 6:44 PM IST

1-a-raut

ಮುಂಬಯಿ: ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಯ ಕಾವೇರಿದ್ದು, ಆರೋಪ ಪ್ರತ್ಯಾರೋಪಗಳು ತೀವ್ರವಾಗಿದೆ. ವಿಪಕ್ಷ ಮೈತ್ರಿಕೂಟವಾದ ಮಹಾ ವಿಕಾಸ್ ಆಘಾಡಿ ಆಡಳಿತಾರೂಢ ಮಾಹಾಯುತಿ ಮೈತ್ರಿಕೂಟದ ವಿರುದ್ಧ ಗಂಭೀರ ಆರೋಪ ಮಾಡಿದೆ. ಪ್ರತೀ  ವಿಧಾನಸಭಾ ಕ್ಷೇತ್ರಗಳಲ್ಲಿ 10 ಸಾವಿರ ಬೋಗಸ್ ಮತದಾರನ್ನು ನೋಂದಣಿ ಮಾಡಲಾಗಿದೆ ಎಂದು ಚುನಾವಣ ಆಯೋಗಕ್ಕೆ ದೂರು ನೀಡಿದೆ.

ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮಾತನಾಡಿ “ಲಫಂಗಿ ಎಂದು ನಾವು ಕರೆಯುವ ಮಹಾಯುವತಿ(NDA) ಸಂವಿಧಾನವು ನೀಡಿರುವ ವಿಶೇಷ ಹಕ್ಕುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.  ನಿನ್ನೆ ಚುನಾವಣ ಆಯೋಗವನ್ನು ಎಂವಿಎ ನಾಯಕರು ಭೇಟಿ ಮಾಡಿದ್ದು, . ಆ್ಯಪ್ ತಯಾರಿಸಿ ಜನರ ಮತಗಳನ್ನು ಕಡಿಮೆ ಮಾಡಿ ಬೋಗಸ್ ಮತಗಳನ್ನು ಸೇರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಯೋಗಕ್ಕೆ ತಿಳಿಸಿದ್ದಾರೆ.ಪ್ರತಿ ಕ್ಷೇತ್ರದಲ್ಲಿ ಸುಮಾರು 10,000 ಬೋಗಸ್ ಮತಗಳು ಸೇರ್ಪಡೆಯಾಗುತ್ತಿವೆ.ಇದು ಮಹಾರಾಷ್ಟ್ರದ ಭವಿಷ್ಯದ ವಿಷಯವಾಗಿದೆ, ಈ ಷಡ್ಯಂತ್ರವನ್ನು ಮುನ್ನೆಲೆಗೆ ತರಲು ನಾವು ಕೆಲಸ ಮಾಡುತ್ತೇವೆ. ಅಗತ್ಯವಿದ್ದರೆ, ನಾವು ಚುನಾವಣ ಆಯೋಗದ ವಿರುದ್ಧ ದೊಡ್ಡ ರ್‍ಯಾಲಿಯನ್ನು ಸಹ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಎನ್‌ಸಿಪಿ-ಎಸ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್ ಮಾತನಾಡಿ “ಇದು ಗಂಭೀರ ವಿಷಯವಾಗಿದೆ. ಬಿಜೆಪಿ ಸಮೀಕ್ಷೆ ನಡೆಸಿ ಅವರ ಮತದಾರರಲ್ಲದವರನ್ನು ಗುರುತಿಸಲು ಹೇಳಿದೆ. ಅವರು ವಿಶೇಷ ಅರ್ಜಿಯನ್ನು ತಂದು ಹೆಸರುಗಳನ್ನು ಸಂಪೂರ್ಣವಾಗಿ ಅಳಿಸಿ ಹೊಸ ಹೆಸರುಗಳನ್ನು ಸೇರಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಪ್ರತಿಕ್ರಿಯಿಸಿ” ಸಂಜಯ್ ರಾವುತ್ ಹೇಳಿದಂತೆ ಮಹಾಯುತಿ ಸರಕಾರವು ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿ ಮೂಲ ವ್ಯಕ್ತಿಗಳ ಹೆಸರನ್ನು ತೆಗೆದು ಬೋಗಸ್ ಮತದಾರರನ್ನು ಸೇರಿಸುತ್ತಿದೆ. ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ. ಅದನ್ನು ನೋಡುತ್ತಿಲ್ಲ. ಚುನಾವಣೆಯಲ್ಲಿ ಯಾವುದೇ ರೀತಿಯ ಪಾರದರ್ಶಕತೆ ಇಲ್ಲವಾಗಿದೆ. ಚುನಾವಣ ಆಯೋಗ ಮೋದಿಯವರ ಕಾಲಿನ ಕೆಳಗೆ ಕುಳಿತಿರುವಂತೆ ತೋರುತ್ತಿದೆ” ಎಂದು ಕಿಡಿ ಕಾರಿದ್ದಾರೆ.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

pub

Pub ನಲ್ಲಿ ಅಶ್ಲೀ*ಲ ನೃತ್ಯ; 42 ಮಹಿಳೆಯರು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನ

JMM-Congress

Jharkhand Polls: ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್‌ 70 ಸ್ಥಾನಗಳಲ್ಲಿ ಮೈತ್ರಿ ಅಂತಿಮ

CHampai Soren

BJP; ಜಾರ್ಖಂಡ್ ಮೊದಲ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಚಂಪೈ ಸೊರೇನ್ ಗೆ ಟಿಕೆಟ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1–a-pro

ProKabaddi; ಆಕ್ರಮಣಕಾರಿ ಆಟ: ತಲೈವಾಸ್‌ಗೆ ಜಯ

1-a-hck

Sultan of Johor Cup ಹಾಕಿ: ಭಾರತ ಗೆಲುವಿನ ಆರಂಭ

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

22

Aranthodu: ಲಾರಿ -ರಿಕ್ಷಾ ಢಿಕ್ಕಿ: ದಂಪತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.