Gangolli: ಹಲ್ಲೆ, ಬೆದರಿಕೆ; 7 ಮಂದಿ ಸೆರೆ
Team Udayavani, Oct 19, 2024, 8:11 PM IST
ಗಂಗೊಳ್ಳಿ: ಹಡವು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತೆರಳುವ ಕ್ರಾಸ್ ಬಳಿ ಅ. 18ರ ರಾತ್ರಿ ಗುಂಪು ಕಟ್ಟಿಕೊಂಡು ಬಂದು ಮಾರಾಕಾಯುಧಗಳಿಂದ ಹಲ್ಲೆ ನಡೆಸಿ, ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ 7 ಮಂದಿ ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ನಾಡ ಗ್ರಾಮದ ಶ್ರೀಕಾಂತ್ ಅವರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತೆರಳುವ ಕ್ರಾಸ್ ಬಳಿ ಅರವಿಂದ, ಚಂದ್ರ ಪಡುಮನೆ, ಶಿವಕುಮಾರ್, ಮನು, ಸುದೇಶ ಅವರ ಜತೆ ಮಾತನಾಡುತ್ತಿದ್ದರು. ಆಗ ಅಲ್ಲಿಗೆ ಅಕ್ರಮ ಕೂಟ ಸೇರಿಕೊಂಡು ಬಂದ ಆರೋಪಿಗಳಾದ ಸಚಿನ್, ಶರತ್, ವಿಶ್ವನಾಥ, ರೋಶನ್ ಫೆರ್ನಾಂಡಿಸ್ ಹಾಗೂ ಇತರರು ಅಲ್ಲಿದ್ದವರ ಮೇಲೆ ಮಾರಾಕಾಯುಧಗಳಿಂದ ಹಲ್ಲೆ ಮಾಡಿದ್ದಾರಲ್ಲದೇ ಪಿಸ್ತೂಲ್ ತೋರಿಸಿ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಶ್ರೀಕಾಂತ್ ಅವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಯಲ್ಲಿ ಶಿವಕುಮಾರ್ ಹಾಗೂ ಮನು ಗಾಯಗೊಂಡಿದ್ದರು. ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದೂರುದಾರ ಶ್ರೀಕಾಂತ್, ಆರೋಪಿ ವಿಶ್ವನಾಥ ಮತ್ತು ಇತರರ ನಡುವೆ ಇದ್ದ ಹಳೆಯ ದ್ವೇಷ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.