Channapatna ಜೆಡಿಎಸ್‌ ಪಾಲು: ಅಭ್ಯರ್ಥಿ ಇಂದು ಅಂತಿಮ?ಸಿಪಿವೈ ಬಂಡಾಯ?

ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿವರೆಗೆ ಬಿಜೆಪಿ-ಜೆಡಿಎಸ್‌ ಸಭೆ... ಅಭ್ಯರ್ಥಿ ಯಾರೆಂಬುದೇ ಕುತೂಹಲ

Team Udayavani, Oct 20, 2024, 6:20 AM IST

HDK (3)

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಸಂಡೂರು ಮತ್ತು ಶಿಗ್ಗಾವಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಪರೋಕ್ಷ ಸಂದೇಶವನ್ನು ರವಾನೆ ಮಾಡಿದಂತಾಗಿದೆ. ಈ ಮಧ್ಯೆ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ-ಜೆಡಿಎಸ್‌ ಶನಿವಾರ ತಡರಾತ್ರಿವರೆಗೂ ಸಭೆ ನಡೆಸಿದ್ದು, ರವಿವಾರ ಅಭ್ಯರ್ಥಿಯ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಬಗ್ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯ ಘೋಷಣೆ ರವಿವಾರ ಅಂತಿಮವಾಗಲಿದೆ. ಆದರೆ ಜೆಡಿಎಸ್‌ ಚಿಹ್ನೆಯಡಿಯೇ ಸ್ಪರ್ಧೆ ನಡೆಯುತ್ತದೆ ಎಂದಿದ್ದಾರೆ. ಈ ಮೂಲಕ ಚನ್ನಪಟ್ಟಣದಲ್ಲಿ ಜೆಡಿಎಸ್‌ ಸ್ಪರ್ಧೆ ಖಚಿತವಾದಂತಾದರೂ ಅಭ್ಯರ್ಥಿ ಯಾರು ಎಂಬ ಕುತೂಹಲ ಮುಂದುವರಿದಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ತಡರಾತ್ರಿಯವರೆಗೂ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಭೆ ನಡೆಸಿದರು. ಚನ್ನಪಟ್ಟಣ ಟಿಕೆಟ್‌ ವಿಚಾರವಾಗಿಯೂ ಗಂಭೀರ ಚರ್ಚೆಗಳು ನಡೆದಿವೆ.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಸಭೆ ಯಾವುದೇ ನಿರ್ಣಯಕ್ಕೆ ಬಂದಿಲ್ಲ. ಈ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್‌ ಸಭೆಯಿಂದ ದೂರ ಉಳಿದಿದ್ದರು.

ಜೆಡಿಎಸ್‌ ಚಿಹ್ನೆ ಅಡಿಯೇ ಸ್ಪರ್ಧೆ
ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಮಾಧ್ಯಮದವರೊಂದಿಗೆ ಮಾತನಾಡಿ, 3 ಕ್ಷೇತ್ರಗಳ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ.ಎಲ್ಲ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿ ಗಳನ್ನು ಗೆಲ್ಲಿಸುವ ಬಗ್ಗೆ ನಾಯಕರು ಚರ್ಚೆ ಮಾಡಿದ್ದಾರೆ. 2 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯ ಘೋಷಣೆ ರವಿವಾರ ಅಂತಿಮವಾಗಲಿದೆ. ಯಾರೇ ಸ್ಪರ್ಧೆ ಮಾಡಿದರೂ ಜೆಡಿಎಸ್‌ ಚಿಹ್ನೆಯಡಿಯೇ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಸ್ಪರ್ಧೆಗೆ ಯೋಗೇಶ್ವರ್‌ ನಿರ್ಧಾರ
ಈ ಮಧ್ಯೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಸ್ಪರ್ಧೆಯಿಂದ ಹಿಂಜರಿಯದೆ ಇರಲು ತೀರ್ಮಾನಿಸಿದ್ದಾರೆ. 2 ಕ್ಷೇತ್ರದ ಟಿಕೆಟ್‌ ಘೋಷಣೆಯ ಬಳಿಕವೂ ತಾವೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಕೊನೆಯವರೆಗೂ ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ. ಒಂದೊಮ್ಮೆ ಜೆಡಿಎಸ್‌ ಸ್ಪರ್ಧೆ ಖಚಿತವಾದರೆ ಯೋಗೇಶ್ವರ್‌ ಬಂಡಾಯ ಸ್ಪರ್ಧೆ ಖಚಿತ ಎನ್ನಲಾಗುತ್ತಿದೆ. ಈ ಮಧ್ಯೆ ಬಿಜೆಪಿ-ಜೆಡಿಎಸ್‌ ನಾಯಕರ ಸಭೆಯಲ್ಲಿ ಯೋಗೇಶ್ವರ್‌ ಅವರನ್ನು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯೂ ಪ್ರಸ್ತಾವವಾಗಿದೆ. ಆದರೆ ಒಮ್ಮತ ಮೂಡಿಲ್ಲ. ಬಿಜೆಪಿ ನಾಯಕರು ಕೂಡ ಇದು ಜೆಡಿಎಸ್‌ ಕ್ಷೇತ್ರ ಎಂದು ಸಭೆಯಲ್ಲಿ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಂತಿಮವಾಗಿ ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿಯಾಗಿ ಪರಿಗಣಿಸಲ್ಪಟ್ಟರೂ ಅಚ್ಚರಿ ಇಲ್ಲ.

”ಯಾರು ಯಾರ ಮೇಲೂ ದಬ್ಬಾಳಿಕೆ ಮಾಡಲು ಆಗುವುದಿಲ್ಲ. ಪ್ರೀತಿ ವಿಶ್ವಾಸದಿಂದ ಚುನಾವಣೆ ನಡೆಸಬೇಕು. ವಿಶ್ವಾಸಕ್ಕೆ ಧಕ್ಕೆ ಆಗಬಾರದು. ಅದನ್ನು ಎರಡೂ ಪಕ್ಷದ ನಾಯಕರು ಮನವರಿಕೆ ಮಾಡಿಕೊಳ್ಳಬೇಕು. ಒಂದು ಕಡೆ ಪ್ರೀತಿ, ವಿಶ್ವಾಸ ಇದ್ದರೆ ಸಾಲದು. ಎರಡು ಕಡೆಯೂ ಪರಸ್ಪರ ಸ್ಪಂದನೆ ಇರಬೇಕು.”
– ಎಚ್‌.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ

ಟಾಪ್ ನ್ಯೂಸ್

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

Actress: ಮನೆಯಲ್ಲಿ ನಿಷೇಧಿತ ಮಾದಕ ವಸ್ತು ಬಳಕೆ; ಖ್ಯಾತ ಕಿರುತೆರೆ ನಟಿ ಬಂಧನ

INDvsNZ: A huge win for New Zealand in Bengaluru

INDvsNZ: ನಡೆಯದ ಮ್ಯಾಜಿಕ್;‌ 36 ವರ್ಷದ ಬಳಿಕ ಭಾರತದಲ್ಲಿ ಟೆಸ್ಟ್‌ ಗೆದ್ದ ಕಿವೀಸ್

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

By election: ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

15

Deepavali: ದೀಪಾವಳಿಗೆ ಹಸುರೇತರ ಪಟಾಕಿ ಪೂರ್ಣ ನಿಷೇಧ

HDK (4)

H.D. Kumaraswamy: 2028ರೊಳಗೆ ನಾನು ಸಿಎಂ ಆಗುತ್ತೇನೆ…

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

2

Dandeli: ಅಪರಿಚಿತ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ; ಸವಾರ ಗಂಭೀರ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

Shimoga: ಕೊಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

1(1)

Bantwala: 20 ನಿಮಿಷದ ದಾರಿಗೆ ಕೆಲವೊಮ್ಮೆ 2 ಗಂಟೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.