Women, Child Safety: ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿಲ್ಲ ನಿರ್ಭಯ ಬೈಕ್‌

ಮಹಿಳೆಯರ ಸುರಕ್ಷೆಗಾಗಿ 2020ರ ಡಿಸೆಂಬರ್‌ನಲ್ಲಿ ಆರಂಭವಾಗಿದ್ದ ಯೋಜನೆ

Team Udayavani, Oct 20, 2024, 7:35 AM IST

nirbhaya-bike

ಸುಳ್ಯ: ಮಹಿಳೆ ಮತ್ತು ಮಕ್ಕಳ ಸುರಕ್ಷೆ ಉದ್ದೇಶದಿಂದ ತರಲಾಗಿದ್ದ ನಿರ್ಭಯ ಪೊಲೀಸ್‌ ಬೈಕ್‌ಗಳು ಗ್ರಾಮೀಣ ಭಾಗದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಜತೆಗೆ ಬಳಕೆಯಾಗುತ್ತಿರುವ ಕೆಲವು ನೈಜ ಉದ್ದೇಶಕ್ಕೆ ಬಳಕೆಯಾಗುತ್ತಿಲ್ಲ ಎಂಬ ಆರೋಪವಿದೆ.

2020ರ ಡಿಸೆಂಬರ್‌ನಲ್ಲಿ ನಿರ್ಭಯ ಪೊಲೀಸ್‌ ಬೈಕನ್ನು ರಾಜ್ಯದಲ್ಲಿ ಆರಂಭಿಸಲಾಗಿತ್ತು. ಮಾನವ ಕಳ್ಳ ಸಾಗಣೆ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಮಾಡುವ, ಕಾನೂನು ಸುವ್ಯವಸ್ಥೆ ಕರ್ತವ್ಯ ನಿರ್ವಹಿಸಲು, ಅಪಘಾತ ಸಂದರ್ಭದಲ್ಲಿ ಸ್ಥಳಕ್ಕೆ ಕ್ಷಿಪ್ರಗತಿಯಲ್ಲಿ ತಲುಪಲು ಮುಂತಾದ ಹಲವು ಉದ್ದೇಶಗಳಿಗಾಗಿ ಬೈಕನ್ನು ನೀಡಲಾಗಿತ್ತು. ಯೋಜನೆ ಹಲವೆಡೆ ಉತ್ತಮವಾಗಿದ್ದರೆ, ಗ್ರಾಮೀಣ ಭಾಗದಲ್ಲಿ ಹಳಿ ತಪ್ಪಿದೆ ಎನ್ನಲಾಗುತ್ತಿದೆ.

36 ನಿರ್ಭಯ ಬೈಕ್‌
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಒಟ್ಟು 36 ನಿರ್ಭಯ ಬೈಕ್‌ಗಳಿವೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವ್ಯಾಪ್ತಿಯ 14 ಠಾಣೆಗಳಿಗೆ ನಿರ್ಭಯ ಬೈಕ್‌ಗಳನ್ನು ನೀಡಲಾಗಿದೆ. ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುಂಜಾಲಕಟ್ಟೆ, ವೇಣೂರು, ಬೆಳ್ತಂಗಡಿ ನಗರ, ಉಪ್ಪಿನಂಗಡಿ, ಕಡಬ, ಸುಬ್ರಹ್ಮಣ್ಯ, ಬೆಳ್ಳಾರೆ, ಸುಳ್ಯ, ಪುತ್ತೂರು ಗ್ರಾಮಾಂತರ, ಪುತ್ತೂರು ನಗರ, ಧರ್ಮಸ್ಥಳ ಪೊಲೀಸ್‌ ಠಾಣೆಗಳಿಗೆ ಒಂದೊಂದು ಬೈಕ್‌ ಒದಗಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಗೆ 22 ಬೈಕ್‌ಗಳನ್ನು ನೀಡಲಾಗಿದೆ. ಉಡುಪಿ ನಗರ ಠಾಣೆ, ಮಲ್ಪೆ, ಮಣಿಪಾಲ, ಮಹಿಳಾ ಠಾಣೆ, ಬ್ರಹ್ಮಾವರ, ಹಿರಿಯಡಕ, ಕೋಟ, ಕುಂದಾಪುರ, ಕುಂದಾಪುರ ಗ್ರಾಮಾಂತರ, ಅಮಾಸೆಬೈಲು, ಶಂಕರನಾರಾಯಣ, ಬೈಂದೂರು, ಗಂಗೊಳ್ಳಿ, ಕೊಲ್ಲೂರು, ಕಾಪು, ಶಿರ್ವ, ಪಡುಬಿದ್ರಿ, ಕಾರ್ಕಳ ನಗರ, ಕಾರ್ಕಳ ಗ್ರಾಮಾಂತರ, ಅಜೆಕಾರು, ಹೆಬ್ರಿ ಠಾಣೆಗಳಿಗೆ ತಲಾ ಒಂದೊಂದು ಬೈಕ್‌ ಒದಗಿಸಲಾಗಿತ್ತು. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಗೂ ನಿರ್ಭಯ ಬೈಕ್‌ಗಳನ್ನು ಒದಗಿಸಲಾಗಿತ್ತು.

ಕಾರ್ಯಾಚರಿಸುತ್ತಿಲ್ಲ ನಿರ್ಭಯ ಬೈಕ್‌?
ಶಾಲಾ-ಕಾಲೇಜು ಆರಂಭ ಹಾಗೂ ಮನೆಗೆ ಬಿಡುವ ಸಂದರ್ಭದಲ್ಲಿ ವಿದ್ಯಾಸಂಸ್ಥೆ ವ್ಯಾಪ್ತಿಯಲ್ಲಿ, ಬಸ್‌ ನಿಲ್ದಾಣಗಳಲ್ಲಿ ನಿರ್ಭಯ ಬೈಕ್‌ ಮೂಲಕ ಗಸ್ತು ಕೈಗೊಳ್ಳಬೇಕಿದೆ. ಇವುಗಳ ಬಗ್ಗೆ ಜನರಲ್ಲಿ ಮಾಹಿತಿಯೇ ಇಲ್ಲ. ಹಾಗಾಗಿ ಬಹುತೇಕ ಬೈಕ್‌ಗಳು ಠಾಣೆಯ ಶೆಡ್‌ಗಳಲ್ಲೇ ಇವೆ. ಹಾಗಾಗಿ ನೈಜ ಉದ್ದೇಶಕ್ಕೆ ಬೈಕ್‌ಗಳನ್ನು ಬಳಸುವಂತೆ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ.

“ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ದೂರುಗಳು ಬಂದಾಗ ಅಲ್ಲಿಗೆ ತೆರಳಲು, ಶಾಲಾ-ಕಾಲೇಜು ಸಮಯದಲ್ಲಿ ಗಸ್ತು ತಿರುಗಲು ನಿರ್ಭಯ ಬೈಕ್‌ಗಳನ್ನು ಬಳಸಬಹುದು. ನಗರ ಭಾಗದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ ಶಾಲಾ-ಕಾಲೇಜುಗಳು ದೂರದಲ್ಲಿರುವುದರಿಂದ ಒಂದು ಠಾಣೆಯ ಒಂದು ಬೈಕ್‌ನಲ್ಲಿ ಗಸ್ತು ಕಷ್ಟವಾಗಬಹುದು. ಆ ಬಗ್ಗೆ ಯೋಚಿಸಿ ನಿರ್ಭಯ ಬೈಕ್‌ ಪರಿಣಾಮಕಾರಿ ಬಳಕೆಗೆ ಆದೇಶಿಸಲಾಗುವುದು.”
– ಯತೀಶ್‌ ಎನ್‌., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ದ. ಕ. ಜಿಲ್ಲೆ

“ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಗೆ 22 ನಿರ್ಭಯ ಬೈಕ್‌ಗಳನ್ನು ನೀಡಲಾಗಿದೆ. ಮಹಿಳೆ, ಮಕ್ಕಳ ರಕ್ಷಣೆ ಜತೆಗೆ ಕಾನೂನು ಸುವ್ಯವಸ್ಥೆ ಸಂದರ್ಭ ಕರ್ತವ್ಯ ನಿರ್ವಹಿಸಲಾಗುತ್ತಿದೆ. ಇನ್ನಷ್ಟು ಪರಿಣಾಮಕಾರಿ ಜಾರಿಗೆ ನಿರ್ದೇಶನ ನೀಡಲಾಗುವುದು.”
– ಡಾ| ಅರುಣ್‌ ಕೆ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಉಡುಪಿ ಜಿಲ್ಲೆ

ಟಾಪ್ ನ್ಯೂಸ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

1-a-shiv

Gauri Lankesh ಪ್ರಕರಣದ ಆರೋಪಿಗೆ ಪಕ್ಷದ ಹುದ್ದೆ: ತಡೆ ಹಿಡಿದ ಶಿಂಧೆ ಶಿವಸೇನೆ

hdk-office

JDS;ನಾವೇನು ಸನ್ಯಾಸತ್ವ ಸ್ವೀಕರಿಸಿದ್ದೇವೆಯೇ? ಡಿಕೆಶಿಗೆ ಟಾಂಗ್ ಕೊಟ್ಟ ಎಚ್ ಡಿಕೆ

12

ಅಪಾರ ಮೂರ್ತಿಯೇ… ಎಷ್ಟೆಲ್ಲ ಬರೆದ್ರೂ ಇಷ್ಟೂ ಖಾಲಿಯಾಗಿಲ್ಲ

11

ದೀಪದ ಮಕ್ಕಳು: ಹಣತೆಯ ಹಿಂದೆ ಅರಳುವ ಹೂಗಳು

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

11

Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

10(1)

Kundapura :ಕಂಚುಗೋಡು ತೀರವಾಸಿಗಳ ಗೋಳು ಕೇಳ್ಳೋರಿಲ್ಲ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Kaup Marigudi: ನವದುರ್ಗಾ ಲೇಖನ‌ಯಜ್ಞ ಪ್ರಯುಕ್ತ ನವದಿನಗಳ ಭಜನಾ ಸಂಕೀರ್ತನೆಗೆ ಚಾಲನೆ

Servey-Road

Highway Problem: ಕುಂದಾಪುರ -ತಲಪಾಡಿ ಹೆದ್ದಾರಿಯಲ್ಲಿ ನೀರು ನಿಲ್ಲುವ 40 ಸ್ಥಳಗಳ ಗುರುತು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

12

Udupi: ದೀಪಾವಳಿ ಪಟಾಕಿ; ನಿರ್ಬಂಧಗಳದೇ ಸದ್ದು!

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

BBK11: ರಂಜಿತ್‌ ನನ್ನ ಸಹೋದರನಂತೆ.. ಮತ್ತೆ ಬಿಗ್‌ಬಾಸ್‌ ಹೋಗೋ ಬಗ್ಗೆ ಮೌನ ಜಗದೀಶ್

11

Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

accident

Dharwad; ಲಾರಿ-ಆಟೋ ಢಿಕ್ಕಿ: ಮೂವರು ದಾರುಣ ಸಾ*ವು

10(1)

Kundapura :ಕಂಚುಗೋಡು ತೀರವಾಸಿಗಳ ಗೋಳು ಕೇಳ್ಳೋರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.