Kollur: ಕಸ್ತೂರಿ ಭಯಕ್ಕೆ ಬಹಿಷ್ಕಾರದ ಮೊರೆಹೋದ ಜನ

ಕಸ್ತೂರಿ ರಂಗನ್‌ ವರದಿ ಜಾರಿಯಾದರೆ ನೆಲೆ ಕಳೆದುಕೊಳ್ಳುವ ಆತಂಕ; ಸರಕಾರಕ್ಕೆ ಒತ್ತಡ ಹೇರುವ ಯತ್ನ; 35 ಗ್ರಾಮಗಳಲ್ಲಿ ಪರಿಷತ್‌ ಚುನಾವಣೆ ಬಹಿಷ್ಕಾರದ ಕೂಗು; ಮನವೊಲಿಕೆಯೇ ಅಧಿಕಾರಿಗಳಿಗೆ ಸವಾಲು

Team Udayavani, Oct 20, 2024, 5:47 PM IST

11

ಕೊಲ್ಲೂರು: ಕಸ್ತೂರಿ ರಂಗನ್‌ ವರದಿಯನ್ನು ಅನುಷ್ಠಾನ ಮಾಡುವುದಿಲ್ಲ ಎಂದು ರಾಜ್ಯ ಸರಕಾರವು ಕೇಂದ್ರದ ಮುಂದೆ ಸ್ಪಷ್ಟಪಡಿಸಿದ್ದರೂ ವರದಿಯ ಆಧಾರದಲ್ಲಿ ನೆಲೆ ಕಳೆದುಕೊಳ್ಳುವ ಭೀತಿಯಲ್ಲಿರುವ ಜನರ ಆತಂಕ ಇನ್ನೂ ತಗ್ಗಿಲ್ಲ. ಅಧಿಕಾರಿಗಳ ಕೆಲವೊಂದು ಕ್ರಮಗಳಿಂದ ಭಯ ಇನ್ನಷ್ಟು ಹೆಚ್ಚುತ್ತಿದೆ. ಹೀಗಾಗಿ ಜನರು ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ ಹಾಕುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಅವರನ್ನು ಮನವೊಲಿಸುವ ಜವಾಬ್ದಾರಿ ಹೊತ್ತ ಅಧಿಕಾರಿಗಳಿಗೆ ಇದೊಂದು ದೊಡ್ಡ ಸವಾಲಾಗಿದೆ.

ರಾಜ್ಯ ಸರಕಾರ ವರದಿ ಜಾರಿ ಇಲ್ಲ ಎಂದರೂ ಈಗಾಗಲೇ ಹಂತ ಹಂತವಾಗಿ ಕೆಲವೊಂದು ನಿರ್ಬಂಧಗಳು ಅನುಷ್ಠಾನಕ್ಕೆ ಬರುತ್ತಿ ರುವುದು ಜನರ ಗಮನಕ್ಕೆ ಬರುತ್ತಿದೆ. ವನ್ಯಜೀವಿ ವಿಭಾಗ ಕೆಲವೊಂದು ಚಟುವಟಿಕೆಗಳಿಗೆ ನಿರಪೇಕ್ಷಣ ಪತ್ರಗಳಿಗೆ ಪಟ್ಟು ಹಿಡಿಯುತ್ತಿರುವುದು ಆತಂಕ ಮೂಡಿಸಿದೆ. ಹೀಗಾಗಿ ಜನರು ವಿಧಾನ ಪರಿಷತ್‌ ಚುನಾವಣೆಯನ್ನು ಮುಂದಿಟ್ಟು ಉನ್ನತ ಅಧಿಕಾರಿಗಳು, ಸರಕಾರ, ಚುನಾಯಿತ ಪ್ರತಿನಿಧಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ.

ಫ‌ಲ ನೀಡುತ್ತಿಲ್ಲ ಸಂಧಾನ ಯತ್ನಗಳು
ಗ್ರಾಮ ಪಂಚಾಯತ್‌ಗಳ ಚುನಾವಣ ಬಹಿಷ್ಕಾರ ತಂತ್ರ ರಾಜ್ಯಮಟ್ಟದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅಧಿಕಾರಿಗಳು ಪಂಚಾಯತ್‌ಗೆ ಭೇಟಿ ನೀಡಿ ಸದಸ್ಯರ ಮನವೊಲಿಸುವ ಪ್ರಯತ್ನ ಮಾಡಿದರೂ ಅದು ಫಲಪ್ರದವಾಗುತ್ತಿಲ್ಲ.

ಹಾಗಂತ ಈ ಬಹಿಷ್ಕಾರ ವಿಧಾನ ಪರಿಷತ್‌ ಚುನಾವಣೆ ಮೇಲೆ ಅಂತಹ ಗಂಭೀರ ಪರಿಣಾಮ ಬೀರಿದಂತೆ ಕಾಣುವುದಿಲ್ಲ. ಆದರೆ ಇದು ಇಲ್ಲಿಗೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳದೆ ಇದ್ದರೆ ಶೀಘ್ರವೇ ಎದುರಾಗಲಿರುವ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆಯಲ್ಲಿ ಗ್ರಾಮಸ್ಥರೇ ತಟಸ್ಥ ಧೋರಣೆ ತಾಳುವ ಸಂದರ್ಭವೂ ಬರಬಹುದು. ಅದರ ಮುನ್ಸೂಚನೆ ಕೂಡ ಈಗ ಕಂಡು ಬರುತ್ತಿದೆ.

ಜನರ ಆತಂಕ, ಆಕ್ರೋಶವೇನು?

  • ಕೇರಳ ಮಾದರಿಯಲ್ಲಿ ಇನ್ನೂ ಭೌತಿಕ ಸರ್ವೇ ನಡೆಸಿ ವರದಿ ಮಾಡಬೇಕು, ಈಗಾಗಲೇ ಜನವಸತಿ ಇರುವ ಪ್ರದೇಶವನ್ನು ಹೊರಗಿಡಬೇಕು ಎನ್ನುವುದು ಜನರ ಆಗ್ರಹ.
  • ಈಗಾಗಲೇ ಪ್ರತೀ ಗ್ರಾಮದಲ್ಲಿಯೂ ಕೂಡ ಸಾವಿರಾರು ನಿವೇಶನ ರಹಿತರ ಅರ್ಜಿಗಳು ಧೂಳು ಹಿಡಿಯುತ್ತಿವೆ. ಈಗ ಇನ್ನಷ್ಟು ಮಂದಿಯ ನೆಲೆ ತಪ್ಪಿಸಿದರೆ ಹೇಗೆ ಎನ್ನುವುದು ಜನರ ಪ್ರಶ್ನೆ.
  • ಕಳೆದ ಒಂದು ತಿಂಗಳಿಂದ 35 ಗ್ರಾಮಗಳಲ್ಲಿ ಆತಂಕ ಮನೆ ಮಾಡಿದರೂ ಕೂಡ ಸಂಬಂಧಪಟ್ಟ ಮೇಲಧಿಕಾರಿಗಳು ಜನರಿಗೆ ಧೈರ್ಯ ಹೇಳುವ ಮನಸ್ಸು ಮಾಡಲಿಲ್ಲ.

ಭೂಮಿಯ ಮೌಲ್ಯ ಕುಸಿತ
ಕಸ್ತೂರಿ ರಂಗನ್‌ ವರದಿ ಜಾರಿಯಾದರೆ ಜನರು ತಮ್ಮ ಜಾಗವನ್ನು ಬಿಡಬೇಕಾಗುತ್ತದೆ ಎಂಬ ವದಂತಿಗಳಿಂದಾಗಿ, 35 ಗ್ರಾಮಗಳಲ್ಲಿ ಭೂಮಿಯ ಬೆಲೆ ಪಾತಾಳಕ್ಕೆ ಕುಸಿದಿದೆ. ತುರ್ತು ಆವಶ್ಯಕತೆಗೆ ಭೂಮಿ ಮಾರಾಟ ಮಾಡಲೇಬೇಕಾದ ಅನಿವಾರ್ಯತೆ ಇದ್ದರೂ ಖರೀದಿಗೆ ಯಾರೂ ಬರುತ್ತಿಲ್ಲ.

ಆತಂಕ ತಪ್ಪಿದ್ದಲ್ಲ
ಕಸ್ತೂರಿ ರಂಗನ್‌ ವರದಿ ಅನುಷ್ಠಾನಗೊಂಡಲ್ಲಿ ಗ್ರಾಮೀಣ ಭಾಗದ ಜನರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಳ್ಳಲಿದೆ. ವರದಿಯ 6ನೇ ಅಧಿಸೂಚನೆ ಹೊರಡಿಸಲಾಗಿದೆ. ಅದು ಜಾರಿಯಾಗಬಹುದು. ಅಭಯಾರಣ್ಯ ಸೂಕ್ಷ್ಮ ಪರಿಸರ ವಲಯ ಹಾಗೂ ಈಗ ಅನುಷ್ಠಾನಗೊಳ್ಳಲಿರುವ ಸೂಕ್ಷ್ಮ ಪರಿಸರ ಪ್ರದೇಶದಿಂದಾಗಿ ಈ ಭಾಗದ 30ಕ್ಕೂ ಮಿಕ್ಕಿದ ಗ್ರಾಮಗಳ ಜನರು ತೊಂದರೆಗೀಡಾಗಲಿದ್ದಾರೆ.
– ಡಾ| ಅತುಲ್‌ ಕುಮಾರ್‌ ಶೆಟ್ಟಿ ಚಿತ್ತೂರು, ಕಸ್ತೂರಿ ರಂಗನ್‌ ಹಿತರಕ್ಷಣ ಸಮಿತಿ

ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Isha-Found

Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ

ODISHA-GIRL

Odisha: ಕುಟುಂಬಸ್ಥರ ಕಣ್ತಪ್ಪಿಸಲು ಟ್ರಂಕ್‌ನಲ್ಲಿ ಪ್ರಿಯಕರನ ಬಚ್ಚಿಟ್ಟ ಯುವತಿ!

Newz-Air

Policy: ವಿಮಾನ ನಿಲ್ದಾಣದಲ್ಲಿ ಅಪ್ಪುಗೆಗೆ ಸಮಯ ಮಿತಿ ಹೇರಿದ ನ್ಯೂಜಿಲೆಂಡ್‌ ಸರಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Kundapur; ವಿಪರೀತ ತಲೆನೋವು: ಮಹಿಳೆ ಸಾ*ವು

1-ajekaaa

Ajekar: ಸೇತುವೆಗೆ ಕಾರು ಢಿಕ್ಕಿ

1-aaa

Udupi: ಕಾರಿನಿಂದ ತಳ್ಳಲ್ಪಟ್ಟ ಮಹಿಳೆಯ ರಕ್ಷಣೆೆ

police

Kollur:ಯಾತ್ರಾರ್ಥಿಯ ಚಿನ್ನದ ಒಡವೆ ಕಳವು

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

Udupi: ಗೀತಾರ್ಥ ಚಿಂತನೆ 70: ಅರ್ಜುನನಲ್ಲಿ ಮೋಹದ ಕಾರಣದಿಂದ ಭಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RJD

Election: ಝಾರ್ಖಂಡ್‌ನ‌ಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್‌ಜೆಡಿ

Panaji

Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ

Raja-Acci

Accident: ರಾಜಸ್ಥಾನದಲ್ಲಿ ಟೆಂಪೋ-ಬಸ್‌ ಡಿಕ್ಕಿ: 12 ಮಂದಿ ದುರ್ಮರಣ

Chattsi-Blood

Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!

Bihar-tragey

Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.