Code of Conduct ಅಡ್ಡಿ: ಜಾತಿಗಣತಿ, ಒಳಮೀಸಲಾತಿಗೆ ಸದ್ಯಕ್ಕೆ ತಡೆ
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ
Team Udayavani, Oct 21, 2024, 6:55 AM IST
ಬೆಂಗಳೂರು: ರಾಜ್ಯದ ಮೂರು ವಿಧಾನ ಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಯಾಗಿರುವ ಹಿನ್ನೆಲೆಯಲ್ಲಿ ಹಿಂದು ಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿ ಹಾಗೂ ಒಳಮೀಸಲಾತಿ ವಿಷಯಗಳನ್ನು ಸದ್ಯಕ್ಕೆ ಮುಂದೂಡಲು ಸರಕಾರ ಚಿಂತನೆ ನಡೆಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ಯಲ್ಲಿ “ಕಾವೇರಿ’ ನಿವಾಸ ದಲ್ಲಿ ನಡೆದ ಸಚಿವರ ಸಭೆಯಲ್ಲಿ ಜಾತಿಗಣತಿ ಮತ್ತು ಒಳ ಮೀಸಲಾತಿ ವಿಚಾರವೂ ಚರ್ಚೆಗೆ ಬಂದಿದ್ದು, ಪ್ರಸ್ತುತ ಉಪಚುನಾವಣೆ ಘೋಷಣೆ ಯಾಗಿ ರುವುದರಿಂದ ನೀತಿಸಂಹಿತೆ ಬಾಧಕ ವಾಗುತ್ತದೆಯೇ ಇಲ್ಲವೇ ಎಂಬ ಗೊಂದಲ ಏರ್ಪಟ್ಟಿದೆ.ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದೆ.
ಒಳ ಮೀಸ ಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಕೊಟ್ಟಿರುವುದು ಉಪ ಚುನಾ ವಣೆ ಘೋಷಣೆಗೆ ಮುನ್ನ ಆಗಿರುವುದರಿಂದ ನೀತಿಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ಕೆಲವು ಸಚಿವರು ಅಭಿಪ್ರಾಯ ಮಂಡಿಸಿದರೆ, ಮತದಾರರ ಮೇಲೆ ಪ್ರಭಾವ ಬೀರುತ್ತದೆ ಎನ್ನುವ ಅಂಶವನ್ನು ಚುನಾವಣ ಆಯೋಗ ಪರಿಗಣಿಸಬಹುದು. ಹೀಗಾಗಿ ಈ ಕುರಿತು ಚುನಾವಣ ಆಯೋಗದಿಂದ ಸ್ಪಷ್ಟನೆ ಕೇಳುವಂತೆ ಸಲಹೆಯನ್ನು ಇನ್ನು ಕೆಲವು ಸಚಿವರು ನೀಡಿದರು.
ಈಗಾಗಲೇ ಚುನಾವಣ ಆಯೋಗಕ್ಕೆ ಸ್ಪಷ್ಟನೆ ಕೇಳುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದ್ದು, ಸ್ಪಷ್ಟನೆ ಬಂದ ಅನಂತರ ಈ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ಚರ್ಚಿಸೋಣ ಎಂಬ ನಿಲುವಿಗೆ ಬರಲಾಯಿತು.
ಅ. 28ಕ್ಕೆ ಸಚಿವ ಸಂಪುಟ ಸಭೆ
ಈ ಹಿಂದೆ ಅ. 18ರ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸುವುದಾಗಿ ಹೇಳಿದ್ದ ಸಿಎಂ, ಸಭೆಯನ್ನೇ ನಡೆಸಲಿಲ್ಲ. ಅ. 24ರಂದು ಸಚಿವ ಸಂಪುಟ ಸಭೆ ಕರೆದಿದ್ದು, ಅಲ್ಲಿ ವಿಷಯ ಬರಲಿದೆ ಎನ್ನಲಾಗಿತ್ತು. ಆದರೆ ಈಗ ಅ. 24ರ ಸಂಪುಟ ಸಭೆಯೂ ಮುಂದೂಡಿಕೆಯಾಗಿದ್ದು, ಅ. 28ರ ಸೋಮವಾರ ನಡೆಸಲು ಸಿಎಂ ತೀರ್ಮಾನಿಸಿದ್ದಾರೆ. ಒಂದು ವೇಳೆ ನೀತಿ ಸಂಹಿತೆ ಬಾಧಕವಾಗುತ್ತದೆ ಎನ್ನುವುದಾದರೆ, ಫಲಿತಾಂಶದ ಅನಂತರವಷ್ಟೇ ಒಳಮೀಸಲಾತಿ ಹಾಗೂ ಜಾತಿಗಣತಿ ವರದಿ ಚರ್ಚೆಗೆ ಬರಲಿದೆ. ಅಲ್ಲಿಯವರೆಗೆ ಸರಕಾರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ
Server Problem: ಸಿಗದ ಅನ್ನಭಾಗ್ಯ! ವಿಳಂಬದ ಜತೆಗೆ ಮಂದಗತಿಯಲ್ಲಿದೆ ಪಡಿತರ ವಿತರಣೆ
MUST WATCH
ಹೊಸ ಸೇರ್ಪಡೆ
Bagheera Trailer: ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್ ಔಟ್
INDvsNZ 2ನೇ ಪಂದ್ಯಕ್ಕೆ ಪಂತ್ ಅನುಮಾನ;ಕೋಚ್-ಕ್ಯಾಪ್ಟನ್ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.