Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ


Team Udayavani, Oct 21, 2024, 6:15 AM IST

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

ರಾಜ್ಯದ ಪಡಿತರದಾರರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪಡಿತರ ವಿತರಣೆಗಾಗಿ ಕೆಲವು ತಿಂಗಳ ಹಿಂದೆಯಷ್ಟೇ ಹೊಸ ತಂತ್ರಾಂಶವನ್ನು ಅಳವಡಿಸಿಕೊಂಡಿತ್ತು. ಈ ಮೂಲಕ ತಾಂತ್ರಿಕ ಸಮಸ್ಯೆಗಳು ನಿವಾರಣೆಯಾಗಿ ಪಡಿತರದಾರರಿಗೆ ಕ್ಲಪ್ತ ಸಮಯದಲ್ಲಿ ಸಮರ್ಪಕವಾಗಿ ಪಡಿತರ ವಿತರಣೆಯಾಗಲಿವೆ ಎಂಬ ನಿರೀಕ್ಷೆ ಈಗ ಮತ್ತೆ ಹುಸಿಯಾಗಿದೆ. ಕಳೆದೆರಡು ವಾರಗಳಿಂದೀಚೆಗೆ ಇಲಾಖೆ ಅಳವಡಿಸಿಕೊಂಡಿರುವ ಹೊಸ ವ್ಯವಸ್ಥೆಯಲ್ಲೂ ತಾಂತ್ರಿಕ ಸಮಸ್ಯೆ ಕಂಡುಬಂದಿದ್ದು ಮತ್ತದೇ “ಸರ್ವರ್‌ ಡೌನ್‌’ ರಾಗ ಪುನರಾವರ್ತನೆಗೊಳ್ಳತೊಡಗಿದೆ.

ಪಡಿತರ ಸೋರಿಕೆ ಮತ್ತು ಬೋಗಸ್‌ ಪಡಿತರ ಚೀಟಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಪಡಿತರ ಚೀಟಿಗೆ ಆಧಾರ್‌ ಸಂಖ್ಯೆಯನ್ನು ಕಡ್ಡಾಯವಾಗಿ ಸಂಯೋಜಿಸಿ, ಬೆರಳಚ್ಚು ದೃಢೀಕರಣ ವ್ಯವಸ್ಥೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕೆಲವು ವರ್ಷಗಳ ಹಿಂದೆ ರಾಜ್ಯದಲ್ಲಿ ಜಾರಿಗೆ ತಂದಿತ್ತು. ಇಕೆವೈಸಿ ಪ್ರಕ್ರಿಯೆ ಮತ್ತು ಪಡಿತರವನ್ನು ಪಡೆಯಲು ಕಾರ್ಡ್‌ದಾರರು ಬೆರಳಚ್ಚು ನೀಡುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಸರಕಾರದ ವಿವಿಧ ಇಲಾಖೆಗಳಲ್ಲಿ ಬಳಸಲಾಗುತ್ತಿದ್ದ ರಾಷ್ಟ್ರೀಯ ಮಾಹಿತಿ ಕೇಂದ್ರದ ತಂತ್ರಾಂಶವನ್ನೇ ಅವಲಂಬಿಸಿದ್ದರಿಂದಾಗಿ ಸರ್ವರ್‌ ಸಮಸ್ಯೆ ವಿಪರೀತವಾಗಿತ್ತು. ಮಿತಿಮೀರಿದ ಒತ್ತಡದಿಂದಾಗಿ “ಸರ್ವರ್‌ ಡೌನ್‌’ ಪ್ರತಿನಿತ್ಯದ ಸಮಸ್ಯೆಯಾಗಿ ಪಡಿತರ ಚೀಟಿದಾರರು ಸರಕಾರಕ್ಕೆ ಹಿಡಿಶಾಪ ಹಾಕುವಂತಾಗಿತ್ತು.

ಅಲ್ಲದೆ ಈ ಗೊಂದಲ, ಅವ್ಯವಸ್ಥೆಯ ಪರಿಣಾಮ ಪಡಿತರದಾರರು ಮತ್ತು ನ್ಯಾಯಬೆಲೆ ಅಂಗಡಿಯ ಸಿಬಂದಿ ನಡುವೆ ಸಂಘರ್ಷವೇರ್ಪಡುವ ಸನ್ನಿವೇಶಗಳೂ ಸೃಷ್ಟಿಯಾಗಿದ್ದವು. ಈ ಎಲ್ಲ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾದ ಇಲಾಖೆ ಕರ್ನಾಟಕ ರಾಜ್ಯ ಅಂಕಿ ಅಂಶಗಳ ಕೇಂದ್ರದ ಸಹಯೋಗದಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸಿ, ಪಡಿತರ ವಿತರಣೆಗೆ ವ್ಯವಸ್ಥೆ ಮಾಡಿತ್ತು. ಆರಂಭದ ದಿನಗಳಲ್ಲಿ ಎಲ್ಲ ಸಮಸ್ಯೆಗಳೂ ಸುಸೂತ್ರವಾಗಿ ಬಗೆಹರಿದಂತೆ ಕಂಡುಬಂದರೂ ಹಾಲಿ ತಿಂಗಳಲ್ಲಿ ಮತ್ತೆ “ಸರ್ವರ್‌ ಡೌನ್‌’ ಸಮಸ್ಯೆ ಕಾಣಿಸಿಕೊಳ್ಳುವ ಮೂಲಕ “ಹೋದೆಯಾ ಪಿಶಾಚಿ ಎಂದರೆ ಬಂದರೆ ಗವಾಕ್ಷೀಲಿ’ ಎಂಬಂತಾಗಿದೆ. ತಿಂಗಳು ಮುಗಿಯಲು ಇನ್ನೇನು 10 ದಿನಗಳಷ್ಟೇ ಬಾಕಿ ಉಳಿದಿದ್ದು ಎಲ್ಲ ಪಡಿತರಚೀಟಿದಾರರಿಗೆ ಪಡಿತರ ಲಭಿಸುವುದು ಕಷ್ಟಸಾಧ್ಯವಾಗಿದೆ.

ಹೊಸ ತಂತ್ರಾಂಶದಲ್ಲಿ ಸಮಸ್ಯೆ ತಲೆದೋರಿ ವಾರ ಎರಡು ಕಳೆದರೂ ಅದನ್ನು ಸರಿಪಡಿಸುವ ಗೋಜಿಗೆ ಹೋಗದ ಇಲಾಖೆಯ ಬೇಜವಾಬ್ದಾರಿತನಕ್ಕೆ ಪಡಿತರ ಚೀಟಿದಾರರು ಆಕ್ರೋಶ ವ್ಯಕ್ತಪಡಿಸಲಾರಂಭಿಸಿದ್ದಾರೆ. ಇನ್ನು ಪಡಿತರ ಚೀಟಿ ತಿದ್ದುಪಡಿ, ಇಕೆವೈಸಿ ಸಹಿತ ಹಲವಾರು ಕೆಲಸಕಾರ್ಯಗಳಿಗೆ ಈ ಸರ್ವರ್‌ ಡೌನ್‌ ಸಮಸ್ಯೆ ಪಡಿತರ ಚೀಟಿದಾರರಿಗೆ ಬಲುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸರಕಾರ ಮತ್ತು ಜನಪ್ರತಿನಿಧಿಗಳಂತೂ ರಾಜಕೀಯ ತಿಕ್ಕಾಟವಷ್ಟೇ ನಮ್ಮ ಕರ್ತವ್ಯ ಎಂದು ಭಾವಿಸಿದಂತಿದ್ದರೆ, ಅಧಿಕಾರಿ ವರ್ಗ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳುತ್ತಿಲ್ಲ.

ಹೊಸ ತಂತ್ರಾಂಶದಲ್ಲಿ ಕೊಂಚ ಸಮಸ್ಯೆಯಾಗಿದ್ದು ಮುಂದಿನ ಒಂದೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿದು ಪಡಿತರದಾರರಿಗೆ ಈ ಹಿಂದಿನಂತೆ ಸಮರ್ಪಕವಾಗಿ ಪಡಿತರ ವಿತರಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಸ್ಪಷ್ಟನೆಯನ್ನೇನೋ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದಾಗ ಒಂದು ವೇಳೆ ಸದ್ಯ ಸಮಸ್ಯೆ ನಿವಾರಣೆಯಾದರೂ ಈ ತಿಂಗಳ ಪಡಿತರವನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸುವುದು ಇಲಾಖೆಗೆ ಕಷ್ಟವಾಗಲಿದೆ.

ಮುಂದಿನ ವಾರ ದೀಪಾವಳಿ ಹಬ್ಬ ಆರಂಭವಾಗಲಿದ್ದು, ಜನಸಾಮಾನ್ಯರು ಅದರಲ್ಲೂ ಬಡವರು ಪಡಿತರವಿಲ್ಲದೆ ಹಬ್ಬ ಆಚರಿಸುವ ಅನಿವಾರ್ಯತೆಗೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಕೈಮೀರಿ ಹೋಗುವುದಕ್ಕೂ ಮುನ್ನ ಇಲಾಖೆ ಆದಷ್ಟು ಬೇಗ ತಂತ್ರಾಂಶದಲ್ಲಿನ ಲೋಪವನ್ನು ಸರಿಪಡಿಸಬೇಕು ಇಲ್ಲವೇ ಪಡಿತರ ವಿತರಣೆಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕು.

ಟಾಪ್ ನ್ಯೂಸ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

Bagheera Trailer:‌ ʼರಕ್ತ ಕುಡಿಯುವ ರಾಕ್ಷಸʼ, ಜನರ ರಕ್ಷಕ.. ʼಬಘೀರʼ ಟ್ರೇಲರ್‌ ಔಟ್

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Chikkamagaluru: ಮಲೆನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

BBK11: ಮನೆಮಂದಿಯ ಜಗಳ ನೋಡಿ ತಲೆ ಮೇಲೆ ಕೈಯಿಟ್ಟು ಕೂತ ಕ್ಯಾಪ್ಟನ್ ಹನುಮಂತು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.