Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್ ನೆರವು ಕೋರಿದ ಕಾಂಗ್ರೆಸ್, ಉದ್ಧವ್ ಪಕ್ಷ
ಮಹಾರಾಷ್ಟ್ರ , ಝಾರ್ಖಂಡ್ ಅಭ್ಯರ್ಥಿಗಳ ಆಯ್ಕೆಗೆ ಇಂದು ಕಾಂಗ್ರೆಸ್ ಸಭೆ
Team Udayavani, Oct 21, 2024, 7:35 AM IST
ಮುಂಬಯಿ: ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಬಗ್ಗೆ ಉಂಟಾಗಿರುವ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ.
ಈ ಬಗ್ಗೆ ಶನಿವಾರ 10 ಗಂಟೆಗಳಿಗೂ ಹೆಚ್ಚು ಕಾಲ ಎನ್ಸಿಪಿ ಶರದ್ ಬಣ, ಶಿವಸೇನೆ ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಾಯಕರ ನಡುವೆ ಮಾತುಕತೆ ನಡೆದಿದ್ದರೂ ಪ್ರಯೋಜನವಾಗಿರಲಿಲ್ಲ. ವಿದರ್ಭ, ನಾಸಿಕ್, ಮುಂಬಯಿ 12 ಕ್ಷೇತ್ರಗಳನ್ನು ಬಿಟ್ಟು ಕೊಡುವ ಬಗ್ಗೆ ಉದ್ಧವ್ ಠಾಕ್ರೆ ಶಿವಸೇನೆ ಪಟ್ಟು ಹಿಡಿದಿದೆ ಎನ್ನಲಾಗಿದೆ.
ಕಾಂಗ್ರೆಸ್, ಉದ್ಧವ್ ಬಣ ಶಿವಸೇನೆ ನಾಯಕರು ಮಾಜಿ ಸಚಿವ ಶರದ್ ಪವಾರ್ ಮೊರೆ ಹೋಗಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಭಾನುವಾರ ಒಂದು ಹಂತದ ಮಾತುಕತೆಯನ್ನೂ ನಡೆಸಲಾಗಿದೆ.
ಮಹಾ, ಝಾರ್ಖಂಡ್ ಅಭ್ಯರ್ಥಿಗಳ ಆಯ್ಕೆಗೆ ಇಂದು ಕಾಂಗ್ರೆಸ್ ಸಭೆ
ಹೊಸದಿಲ್ಲಿ: ಮುಂಬರುವ ಮಹಾರಾಷ್ಟ್ರ ಹಾಗೂ ಝಾರ್ಖಂಡ್ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್ನ ಕೇಂದ್ರ ಚುನಾವಣ ಸಮಿತಿ(ಸಿಇಸಿ) ಸೋಮವಾರ ಸಭೆ ನಡೆಸಲು ತೀರ್ಮಾನಿಸಿದೆ. ಈ ಮೊದಲು ಮಹಾರಾಷ್ಟ್ರ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ರವಿವಾರ ಸಂಜೆಯೇ ಸಭೆ ಮಾಡಲು ತೀರ್ಮಾನಿಸಲಾಗಿತ್ತು.
ಆದರೆ ಹಲವು ನಾಯಕರು ಕರ್ವಾಚೌತ್ ಹಬ್ಬದ ಹಿನ್ನೆಲೆಯಲ್ಲಿ ಆಗಮಿಸರಲಿಲ್ಲ. ಹೀಗಾಗಿ, 2 ರಾಜ್ಯಗಳ ಅಭ್ಯರ್ಥಿಗಳನ್ನು ಅಂತಿಮಗೊ ಳಿಸಲು ಸೋಮವಾರವೇ ಒಟ್ಟಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲು ಇನ್ನೂ ಚರ್ಚೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!
CM Marathon: ಎರಡು ಗಂಟೆಯಲ್ಲಿ 21 ಕಿ.ಮೀ. ದೂರ ಓಡಿದ ಕಾಶ್ಮೀರ ಸಿಎಂ ಒಮರ್!
Andhra Pradesh; 2 ಮಕ್ಕಳಿದ್ದವರಿಗೆ ಮಾತ್ರ ಚುನಾವಣ ಟಿಕೆಟ್!
MUST WATCH
ಹೊಸ ಸೇರ್ಪಡೆ
Puttur: ಐನ್ನೂರು ವಿದ್ಯಾರ್ಥಿಗಳಿದ್ದ ಕಾಲೇಜಿನಲ್ಲೀಗ ನಲ್ವತ್ತೇ ವಿದ್ಯಾರ್ಥಿಗಳು
Fraud: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್
Bantwal: ಹೇಗಿದ್ದ ಕಲ್ಲಡ್ಕ ಈಗ ಹೇಗಾಗಿ ಹೋಗಿದೆ!
By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್
Bengaluru: ತಂದೆ ಸಾಲದ ಹಣ ವಾಪಸ್ ಕೊಡದಕ್ಕೆ ಬಾಲಕಿ ಮೇಲೆ ರೇಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.