New Threat: ನ.1ರಿಂದ 19ರವರೆಗೆ ಏರ್ ಇಂಡಿಯಾದಲ್ಲಿ ಪ್ರಯಾಣಿಸಬೇಡಿ: ಪನ್ನು ಬೆದರಿಕೆ
Team Udayavani, Oct 21, 2024, 12:02 PM IST
ನವದೆಹಲಿ: ನವೆಂಬರ್ 1 ರಿಂದ 19 ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಸೋಮವಾರ(ಅ.21) ಪ್ರಯಾಣಿಕರಿಗೆ ಬೆದರಿಕೆ ಹಾಕಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ಸಿಖ್ ಹತ್ಯಾಕಾಂಡದ 40 ನೇ ವಾರ್ಷಿಕೋತ್ಸವದಂದು ಏರ್ ಇಂಡಿಯಾ ವಿಮಾನದ ಮೇಲೆ ದಾಳಿ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಸಿಖ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನು ಕಳೆದ ವರ್ಷ ಕೂಡ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಇತ್ತೀಚಿನ ದಿನಗಳಲ್ಲಿ ಭಾರತೀಯ ವಿಮಾನಗಳು ನಿರಂತರವಾಗಿ ಬಾಂಬ್ ಬೆದರಿಕೆಗಳನ್ನು ಸ್ವೀಕರಿಸುತ್ತಿರುವ ಸಮಯದಲ್ಲಿ ಪನ್ನುನಿಂದ ಹೊಸ ಬೆದರಿಕೆ ಬಂದಿದೆ.
ಈ ಹಿಂದೆಯೂ ಬೆದರಿಕೆ ಹಾಕಿದ್ದ:
ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನುನವೆಂಬರ್ 19 ರಂದು ಮುಚ್ಚಲಾಗುವುದು ಎಂದು ಪನ್ನು ನವೆಂಬರ್ 2023 ರಲ್ಲಿ ಬೆದರಿಕೆ ವಿಡಿಯೋ ಹಾಕಿದ್ದ. ಪ್ರಕರಣಕ್ಕೆ ಸಂಬಂಧಿಸಿ ಈತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಹಲವು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿದೆ.
ಪಂಜಾಬ್ ಮುಖ್ಯಮಂತ್ರಿಯನ್ನು ಕೊಲ್ಲುವ ಬೆದರಿಕೆ:
ಈ ವರ್ಷದ ಆರಂಭದಲ್ಲಿ ಜನವರಿ 26 ರ ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರನ್ನು ಕೊಲ್ಲುವುದಾಗಿ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಬೆದರಿಕೆ ಹಾಕಿದ್ದ.
ದೇಶದ್ರೋಹ ಮತ್ತು ಪ್ರತ್ಯೇಕತಾವಾದದ ಆರೋಪದ ಮೇಲೆ ಪನ್ನುವನ್ನು ಭಯೋತ್ಪಾದಕ ಎಂದು ಜುಲೈ 2020ರಲ್ಲಿ ಗೃಹ ಸಚಿವಾಲಯ ಘೋಷಿಸಿತು. ಪನ್ನು ಪ್ರತ್ಯೇಕ ಸಿಖ್ ರಾಜ್ಯವನ್ನು ಪ್ರತಿಪಾದಿಸುವ ಸಿಖ್ ಫಾರ್ ಜಸ್ಟಿಸ್ (SFJ)ಅನ್ನು ಮುನ್ನಡೆಸುತ್ತಿದ್ದಾನೆ. ಇದಕ್ಕೂ ಒಂದು ವರ್ಷದ ಮೊದಲು, ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಭಾರತವು ಸಿಖ್ ಫಾರ್ ಜಸ್ಟಿಸ್(SFJ) ಅನ್ನು ಕಾನೂನುಬಾಹಿರ ಸಂಘಟನೆ ಎಂದು ನಿಷೇಧಿಸಿತ್ತು.
ಇದನ್ನೂ ಓದಿ: Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ
SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ
Baba Siddiqui Case: ಸಲ್ಮಾನ್ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್ ಬಲೆ!
Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್ ನೆರವು ಕೋರಿದ ಕಾಂಗ್ರೆಸ್, ಉದ್ಧವ್ ಪಕ್ಷ
Investigation: ಹಳಿಯ ಬೋಲ್ಟ್ ತೆಗೆದಿದ್ದಕ್ಕೆ ಮೈಸೂರು ರೈಲು ಅವಘಡ!
MUST WATCH
ಹೊಸ ಸೇರ್ಪಡೆ
IPL Mega Auction: ರಿಯಾದ್ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ
Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್ ಖೈದಿ ಸಂಖ್ಯೆ
Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ
ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!
Actress Oviya Helen: ನನ್ನ ಖಾಸಗಿ ವಿಡಿಯೋ ಲೀಕ್ ಮಾಡಿದ್ದು ಅವನೇ.. ನಟಿ ಓವಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.