BSY: ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

ಕಾವೇರಿ, ಮೇಕೆದಾಟು ವಿಚಾರದಲ್ಲಿ ಕರ್ನಾಟಕಕ್ಕೆ ಬೆಂಬಲ; ಕರ್ನಾಟಕದ ತಮಿಳರ ನಿರ್ಧಾರ

Team Udayavani, Oct 21, 2024, 12:03 PM IST

ಕನ್ನಡಿಗರು ಮತ್ತು ತಮಿಳರಲ್ಲಿ ಯಾವುದೇ ಭೇದವಿಲ್ಲ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಕನ್ನಡಿಗರು ಮತ್ತು ತಮಿಳರು ದ್ರಾವಿಡ ಕುಲಕ್ಕೆ ಸೇರಿದವರು. ನಮ್ಮಲ್ಲಿ ಯಾವುದೇ ಭೇದ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪ ಹೇಳಿದರು.

ಮಾತೃಭಾಷೆ ಒಕ್ಕೂಟ ಸಂಘದ ಅಧ್ಯಕ್ಷ ಎಸ್‌.ಡಿ. ಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಭಾನುವಾರ ನಡೆದ ಕನ್ನಡಿಗರು ಹಾಗೂ ಕರ್ನಾಟಕ ತಮಿಳರ ಸಾಂಸ್ಕೃತಿಕ ಮತ್ತು ಒಗ್ಗಟ್ಟಿನ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

”ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮಿಳರು ಮತ್ತು ಕನ್ನಡಿಗರ ನಡುವೆ ಸಾಮರಸ್ಯ ಮೂಡಿಸಲು ಯತ್ನಿಸಿದ್ದೆ. ಹಲಸೂರಿನಲ್ಲಿ ನನೆಗುದಿಗೆ ಬಿದ್ದಿದ್ದ ತಿರುವಳ್ಳವರ್‌ ಪ್ರತಿಮೆ ಯೋಜನೆ ಮುಗಿಸಿ ಎರಡೂ ಭಾಷಿಕರ ನಡುವೆ ಭಾತೃತ್ವ ಸೃಷ್ಟಿಸಿದ್ದೆ. ಆಗಿನ ಮುಖ್ಯಮಂತ್ರಿ ಕರುಣಾನಿಧಿ ಜತೆ ಮಾತನಾಡಿ ಚೆನ್ನೈನಲ್ಲಿ ಸರ್ವಜ್ಞರ ಪ್ರತಿಮೆ ನಿರ್ಮಿಸಲು ಕೋರಿದ್ದೆ” ಎಂದು ಅವರು ಹೇಳಿದರು.

”ನಾನು ಸಿಎಂ ಆಗಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಪ್ರತಿ ಬಾರಿಯೂ ಕರ್ನಾಟಕದಲ್ಲಿರುವ ತಮಿಳರ ಏಳಿಗೆಗೆ ಪ್ರಯತ್ನಿಸಿದ್ದೆ. ಕನ್ನಡ ಮತ್ತು ತಮಿಳು ಭಾಷಿಕರ ನಡುವೆ ಉತ್ತಮ ಬಾಂಧವ್ಯ ಸೃಷ್ಟಿಸಿದ್ದೆ. ಮುಂದೆಯೂ ಅದೇ ರೀತಿ ಇರಲು ಬಯಸುವೆ” ಎಂದು ಹೇಳಿದರು.

‘ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಮಾತನಾಡಿ, “ಕಾವೇರಿ ವಿಚಾರಕ್ಕೆ ಬಂದಾಗ ತಮಿಳರು ಮತ್ತು ಕನ್ನಡಿಗರ ನಡುವೆ ಅಂತರ ಸೃಷ್ಟಿಯಾಗಿರುವುದು ನಿಜ. ಉಳಿದಂತೆ ತಮಿಳುನಾಡು ಮತ್ತು ಕರ್ನಾಟಕ ನಡುವೆ ಉತ್ತಮ ಸಂಬಂಧ ಇರಬೇಕು ಎಂದು ಬಯಸುತ್ತೇನೆ” ಎಂದು ಹೇಳಿದರು.

”ನಾವೆಲ್ಲ ದಕ್ಷಿಣ ಭಾರತದವರು ಎಂಬುದು ಹೆಮ್ಮೆಯ ವಿಷಯ. ನಾವು ದ್ರಾವಿಡ ಕುಲಕ್ಕೆ ಸೇರಿದವರಾಗಿದ್ದು, ಜತೆಯಾಗಿಯೇ ಇರಬೇಕು. ಅಣ್ಣ- ತಮ್ಮಂದಿರಂತೆ ಬದುಕಬೇಕು. ಉತ್ತರ ಭಾರತೀಯರು ನಮ್ಮ ಮೇಲೆ ಹಿಂದಿ ಹೇರಿಕೆ ಮಾಡುವುದನ್ನು ಜತೆಯಾಗಿಯೇ ಎದುರಿಸಬೇಕು’” ಎಂದರು.

ತರೀಕೆರೆ ಶಾಸಕ ಶ್ರೀನಿವಾಸ್, ಕೊಡಗು ಶಾಸಕ ಮಂಥರ್‌ ಗೌಡ, ಮಡಿಕೇರಿ ಶಾಸಕ ಎ ಎಸ್ ಪೊನ್ನಣ್ಣ, ಶಿವಾಜಿನಗರ ಶಾಸಕ ರಿಜ್ವಾನ್‌ ಅರ್ಷದ್‌, ರಾಜ್ಯಸಭಾ ಮಾಜಿ ಸದಸ್ಯ ಎಲ್ ಹನುಮಂತಯ್ಯ ಮತ್ತಿತರರು ಇದ್ದರು.

ಕಾವೇರಿ, ಮೇಕೆದಾಟು ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಬೆಂಬಲ

ಕಾರ್ಯಕ್ರಮದಲ್ಲಿ ಒಟ್ಟು 35 ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಪ್ರಮುಖವಾಗಿ ಕರ್ನಾಟಕದ ಭಾಷೆ, ನೆಲ, ಜಲ, ಗಡಿ ಮತ್ತಿತರ ಕರ್ನಾಟಕದ ಹಕ್ಕುಗಳ ರಕ್ಷಿಸಿ ಕೊಳ್ಳುವುದಕ್ಕೆ ಕನ್ನಡಿಗರು ತೆಗೆದು ಕೊಳ್ಳುವ ಎಲ್ಲ ಪ್ರಯತ್ನಗಳಲ್ಲಿಯೂ ಕರ್ನಾಟಕದ ತಮಿಳರು ಕರ್ನಾಟಕ ಸರ್ಕಾರಕ್ಕೆ ಬೆಂಬಲ ನೀಡಲಿದ್ದಾರೆ. ಕಾವೇರಿ ನೀರಿನ ಹಂಚಿಕೆ, ಮಹದಾಯಿ ನೀರಿನ ಹಂಚಿಕೆ, ಮೇಕೆದಾಟು ಅಣೆಕಟ್ಟು ಹಾಗೂ ಬೆಳಗಾವಿ ಗಡಿ ಸಮಸ್ಯೆ ಮುಂತಾದ ರಾಜ್ಯದ ಸಮಸ್ಯೆಗಳಲ್ಲಿ ಕರ್ನಾಟದ ಹಕ್ಕುಗಳ ಪರವಾಗಿ ತಮಿಳರು ಬೆಂಬಲ ನೀಡಲಿದ್ದಾರೆ.

ಕವಿಗೋಷ್ಠಿ

ಕನ್ನಡ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್‌. ಜಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕನ್ನಡ ಕವಿಗೋಷ್ಠಿ ನಡೆದರೆ, ಬಾಬು ಶಶಿಧರನ್‌ ಅವರು ತಮಿಳು ಕವಿಗೋಷ್ಠಿ ನಡೆಸಿದರು. ಇದೇ ವೇಳೆ 20 ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.