Mangaluru: ಪಾಲಿಕೆ ಸಾಮಾನ್ಯ ಸಭೆಗೆ ಈ ಬಾರಿಯೂ ಅಡ್ಡಿ


Team Udayavani, Oct 21, 2024, 3:10 PM IST

9

ಮಹಾನಗರ: ವಿಧಾನಪರಿಷತ್‌ ಉಪ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣ ನೀತಿ ಸಂಹಿತೆ ಪೂರ್ಣಗೊಂಡರೂ ಮಂಗಳೂರು ಮಹಾನಗರ ಪಾಲಿಕೆಯ ಈ ತಿಂಗಳ ಸಾಮಾನ್ಯ ಸಭೆಯೂ ನಡೆಯುವುದಿಲ್ಲ.

ಮಂಗಳೂರು ಪಾಲಿಕೆಯ ನೂತನ ಮೇಯರ್‌ ಆಯ್ಕೆ ಕಳೆದ ತಿಂಗಳು ಸೆ. 19ರಂದು ನಡೆದಿದ್ದು, ಅದೇ ದಿನ ವಿಧಾನಪರಿಷತ್‌ ನೀತಿ ಸಂಹಿತೆ ದಿನಾಂಕ ಘೋಷಣೆಯಾಗಿ ಆ ದಿನದಿಂದಲೇ ನೀತಿ ಸಂಹಿತೆ ಜಾರಿಯಾಗಿತ್ತು. ಈ ಕಾರಣಕ್ಕೆ ಆ ತಿಂಗಳ ಪಾಲಿಕೆ ಸಭೆ ನಡೆದಿರಲಿಲ್ಲ. ಅಕ್ಟೋಬರ್‌ ತಿಂಗಳ ಅಂತ್ಯದಲ್ಲಿ ಪಾಲಿಕೆ ಸಭೆ ನಡೆಸಲು ಅವಕಾಶ ಇದ್ದರೂ, ಸ್ಥಾಯೀ ಸಮಿತಿ ಅಧ್ಯಕ್ಷರ ನೇಮಕ ಇನ್ನಷ್ಟೇ ಆಗಬೇಕು. ಸಮಿತಿಗಳಿಗೆ ಪ್ರತ್ಯೇಕವಾಗಿ ನೋಟೀಸ್‌ ನೀಡಿ ಸ್ಥಾಯೀ ಸಮಿತಿ ಅಧ್ಯಕ್ಷರ ನೇಮಕ ಮಾಡಬೇಕು. ಆದರೆ ನೀತಿ ಸಂಹಿತೆ ಕಾರಣದಿಂದ ಅಧ್ಯಕ್ಷರ ನೇಮಕಕ್ಕೆ ತಡೆ ಬಿದ್ದಿದೆ. ಅ. 28ರ ವರೆಗೆ ನೀತಿ ಸಂಹಿತೆ ಇರುವ ಕಾರಣ ಅಲ್ಲಿಯವರೆಗೆ ಸ್ಥಾಯೀ ಸಮಿತಿಗೂ ಅಧಿಕಾರವಿಲ್ಲ-ಅಧ್ಯಕ್ಷರೂ ಇಲ್ಲ. ನೀತಿ ಸಂಹಿತೆ ಅ. 28ಕ್ಕೆ ಪೂರ್ಣವಾದರೂ ಸ್ಥಾಯೀ ಸಮಿತಿ ಸದಸ್ಯರಿಗೆ ನೋಟೀಸ್‌ ನೀಡಿ 7 ದಿನಗಳ ಅವಧಿ ಬೇಕು. ಆ ಬಳಿಕವಷ್ಟೇ ಸ್ಥಾಯೀ ಸಮಿತಿಗೆ ಅಧ್ಯಕ್ಷರ ನೇಮಕ ವಾಗುತ್ತದೆ. ಅದಾದ ಅನಂತರವಷ್ಟೇ ಸಾಮಾನ್ಯ ಸಭೆ. ಹೀಗಾಗಿ ಮುಂದಿನ ಸಾಮಾನ್ಯ ಸಭೆ ನವೆಂಬರ್‌ ಮೊದಲ/ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ.

ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ವರ್ಷ 5 ಸಾಮಾನ್ಯ ಸಭೆಗೆ ಕಂಟಕ
ನಿಕಟಪೂರ್ವ ಮೇಯರ್‌ ಸುಧೀರ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ಫೆ. 29ರಂದು ಪಾಲಿಕೆ ಸಾಮಾನ್ಯ ಸಭೆ ನಡೆದಿದ್ದರೂ ಆಸ್ತಿ ತೆರಿಗೆ ಹೆಚ್ಚಳ ವಿಚಾರದಿಂದ ಅಂದಿನ ಸಾಮಾನ್ಯ ಸಭೆಯಲ್ಲಿ ಪ್ರತಿಭಟನೆ ನಡೆಸಿದ ಪರಿಣಾಮ ಆ ಸಾಮಾನ್ಯ ಸಭೆಯು ಅರ್ಧದಲ್ಲಿಯೇ ನಿಂತಿತ್ತು. ಬಳಿಕ ಮಾರ್ಚ್‌ನಲ್ಲಿ ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾಗಿ ಮಾರ್ಚ್‌, ಎಪ್ರಿಲ್‌ ಹಾಗೂ ಮೇ ತಿಂಗಳಿನ ಸಾಮಾನ್ಯ ಸಭೆಯೇ ನಡೆದಿರಲಿಲ್ಲ. ಇದೀಗ ಹೊಸ ಮೇಯರ್‌ ಅವರಿಗೆ ಸೆಪ್ಟಂಬರ್‌, ಅಕ್ಟೋಬರ್‌ ತಿಂಗಳುಗಳ ಸಾಮಾನ್ಯ ಸಭೆ ನಡೆಸುವಂತಿಲ್ಲ. ಈ ಮೂಲಕ ಈ ವರ್ಷದಲ್ಲಿ 5 ಸಾಮಾನ್ಯ ಸಭೆಗೆ ಕಂಟಕ ಎದುರಾಗಿದೆ. ಪಾಲಿಕೆಯ ಕಳೆದ ಬಾರಿಯ ಕಾಂಗ್ರೆಸ್‌ ಆಡಳಿತಾವಧಿ 2019ರ ಮಾ. 11ಕ್ಕೆ ಮುಕ್ತಾಯವಾಗಿತ್ತು. ಅದರ ಮುನ್ನ ಫೆಬ್ರವರಿಯಲ್ಲಿ ಮೇಯರ್‌ ಭಾಸ್ಕರ್‌ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆದಿತ್ತು. ಆ ಬಳಿಕ 2020ರ ಜೂನ್‌ವರೆಗೆ 16 ಪಾಲಿಕೆ ಸಾಮಾನ್ಯ ಸಭೆಯೇ ನಡೆದಿರಲಿಲ್ಲ.

ವಾರ್ಡ್‌ ಸಭೆಗೂ ಕುತ್ತು !
ಚುನಾವಣ ನೀತಿ ಸಂಹಿತೆಯು ಪಾಲಿಕೆ ಸಾಮಾನ್ಯ ಸಭೆೆಯ ಜತೆ ವಾರ್ಡ್‌ ಮಟ್ಟದಲ್ಲಿ ನಡೆಯುವ ವಾರ್ಡ್‌ ಸಭೆಗೂ ಅಡ್ಡಿಯಾಗಿದೆ. ನಗರದಲ್ಲಿ ಈ ಹಿಂದೆ ವಾರ್ಡ್‌ ಮಟ್ಟದಲ್ಲಿ ಸಮರ್ಪ ಕವಾಗಿ ವಾರ್ಡ್‌ ಸಮಿತಿ ಸಭೆ ನಡೆಯುತ್ತಿರಲಿಲ್ಲ. ಆದರೆ ನೀತಿ ಸಂಹಿತೆ ಕಾರಣಕ್ಕೆ ಸದ್ಯ ಸಭೆ ರದ್ದುಗೊಂಡಿದೆ.

ಟಾಪ್ ನ್ಯೂಸ್

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Kavoor: ಒಳಚರಂಡಿಯಿಂದ ಹೊರಚಿಮ್ಮುವ ಮಲಿನ ನೀರು; ಸಾಂಕ್ರಾಮಿಕ ರೋಗ ಭೀತಿ

10(2)

Mangaluru: ಸರಕಾರಿ ಶಾಲಾ ಶೌಚಾಲಯಗಳಿಗೆ ಹೊಸ ರೂಪ

8(1)

Pandeshwar ರೈಲು ಹಳಿ ದುರಸ್ತಿ; ವಾಹನ ಸವಾರರಿಗೆ ಸಂಕಷ್ಟ

5

Kinnigoli: ಪಕ್ಷಿಕೆರೆ-ಕೊಯಿಕುಡೆ ರಸ್ತೆಯುದ್ದಕ್ಕೂ ಹೊಂಡ ಗುಂಡಿ

3

Mangaluru: ಒಮ್ಮೆ ಪೌರ ಕಾರ್ಮಿಕರ ಜಾಗದಲ್ಲಿ ನಿಂತು ನೋಡಿ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.