Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ
Team Udayavani, Oct 21, 2024, 4:28 PM IST
ದಾಂಡೇಲಿ : ಹಳಿಯಾಳ ಮತ್ತು ದಾಂಡೇಲಿಯ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳು ಬಂಗೂರನಗರ ಪದವಿ ಕಾಲೇಜು, ಅಂಬೇವಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಅಂಬೇವಾಡಿಯಲ್ಲಿರುವ ಜಿಟಿ ಮತ್ತು ಟಿಸಿ, ಐಟಿಐ ಕಾಲೇಜುಗಳಿಗೆ ಹೋಗಲು ಬಸ್ಸಿಗಾಗಿ ನಗರದ ಚೌದರಿ ಗೇಟ್ ಹತ್ತಿರ ಕಾಯುತ್ತಿರುತ್ತಾರೆ.
ಸಕಾಲದಲ್ಲಿ ಸಾರಿಗೆ ಬಸ್ ಬಂದರೂ ಸಹ ಬಸ್ಸಿನಲ್ಲಿ ನಿಗದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಬಸ್ಸನ್ನೇರಲು ಹರಸಾಹಸ ಪಡಬೇಕು. ಒಂದು ವೇಳೆ ಬಸ್ಸನ್ನು ಹತ್ತಿದರೂ ಬಸ್ಸಿನ ಮೆಟ್ಟಿಲಲ್ಲೆ ಪ್ರಯಾಣಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಏನಾದರೂ ಹೆಚ್ಚು ಕಡಿಮೆಯಾದರೆ ಅಪಾಯ ತಪ್ಪಿದ್ದಲ್ಲ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ದಾಂಡೇಲಿ ಬಸ್ ನಿಲ್ದಾಣದಿಂದ ಕೆ.ಸಿ. ವೃತ್ತದ ಮೂಲಕ ಬರ್ಚಿ ರಸ್ತೆಯಿಂದ ಹೆಚ್ಚುವರಿಯಾಗಿ ಸಾರಿಗೆ ಬಸ್ ಒಂದನ್ನು ಬಿಡುವಂತೆ ನಗರದ ಸಾಮಾಜಿಕ ಹೋರಾಟಗಾರರಾದ ಮಾರುತಿ ಹಾದಿಮನಿ ಅವರು ನಗರದಲ್ಲಿ ಸೋಮವಾರ ಮಾಧ್ಯಮದ ಮೂಲಕ ಮನವಿಯನ್ನು ಮಾಡಿದ್ದಾರೆ.
ಇದನ್ನೂ ಓದಿ: Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada: ಮಂಗಳೂರು ಸೇರಿ ಇತರೆಡೆ ಮಳೆ, ಬೆಳ್ತಂಗಡಿಯಲ್ಲಿ ಗುಡುಗು ಸಹಿತ ವರ್ಷಧಾರೆ
Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ
Police Martyrs Day: ದೇಶದ ಅಖಂಡತೆಗೆ ಹುತಾತ್ಮರ ತ್ಯಾಗ ಸಹಾಯಕ: ನ್ಯಾಯಾಧೀಶ
Mangaluru: ಹುತಾತ್ಮ ಪೊಲೀಸರ ಸ್ಮರಣೆ ನಮ್ಮ ಕರ್ತವ್ಯ: ಕುಲಪತಿ ಪ್ರೊ. ಪಿ.ಎಲ್.ಧರ್ಮ
Council By Poll: ಉಡುಪಿ ಜಿಲ್ಲೆಯಲ್ಲಿ ಶೇ. 96.57 ಮತದಾನ; ಎಲ್ಲೂ ಶೇ.100 ಇಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.