Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC
Team Udayavani, Oct 22, 2024, 4:35 PM IST
ಉಡುಪಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ರಜತ ಕ್ರೀಡಾ ಸಂಭ್ರಮ – 2024 ಮಂಗಳವಾರ ನಡೆಯಿತು.
ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಮಾತನಾಡಿ, ಬೆಳಗ್ಗೆ ಎದ್ದು ಪತ್ರಿಕೆ ನೋಡುವಾಗ ಅದರ ಹಿನ್ನೆಲೆಯಲ್ಲಿ ಕೆಲಸ ಎಷ್ಟಿರುತ್ತೆ ಎಂದು ತಿಳಿಯುತ್ತದೆ. ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಪರ್ಧಾತ್ಮಕವಾಗಿ ನೀಡುವ ಒತ್ತಡ ಇದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡದ ನಡುವೆ ಇಂತಹ ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು. ಇದರಿಂದ ನೆಮ್ಮದಿ ಸಿಗಲು ಸಾಧ್ಯವಿದೆ. ದ.ಕ., ಉಡುಪಿ ಜಿಲ್ಲೆಯಲ್ಲಿ ಕ್ರಿಯಾಶೀಲ ಪತ್ರಕರ್ತರ ತಂಡವಿದೆ. ಅನೇಕ ಪತ್ರಿಕೆಗಳೂ ಇವೆ. ಬೇರೆ ಜಿಲ್ಲೆಗೆ ಹೋಲಿಸಿದರೆ ಇಲ್ಲಿಯ ತಂಡ ಕ್ರಿಯಾಶೀಲವಾಗಿದೆ. ನಿರ್ಭೀತವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ ಎಂದರು.
ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ ಮಾತನಾಡಿ, ಸಾಕಷ್ಟು ಪರಿಶ್ರಮದಿಂದ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ.
ಪತ್ರಿಕೋದ್ಯಮ ಪ್ರಭಾವಿ ಮಾಧ್ಯಮವಾಗಿದೆ. ಜನರು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪತ್ರಕರ್ತರು ದಿನದ 30 ನಿಮಿಷಗಳನ್ನು ಕ್ರೀಡಾಚಟುವಟಿಕೆಗಳಿಗೆ ಮೀಸಲಿಡಬೇಕು ಎಂದರು. ಜಿಲ್ಲಾ ಆ್ಯತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ನಗರಸಭೆಯ ಪೌರಾಯುಕ್ತ ರಾಯಪ್ಪ, ಮಾಹೆಯ ಕ್ರೀಡಾ ವಿಭಾಗದ ಕಾರ್ಯದರ್ಶಿ ವಿನೋದ್ ನಾಯಕ್, ಉದ್ಯಮಿ ಆನಂದ ಕುಂದರ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ನಿವೃತ್ತಿ ಹೊಂದಲಿರುವ ಪೌರಾಯುಕ್ತ ರಾಯಪ್ಪ ಅವರನ್ನು ಸಮ್ಮಾನಿಸಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಿದ್ದರು. ಪದಾಧಿಕಾರಿಗಳಾದ ಕಿರಣ್ ಮಂಜನಬೈಲು, ಅರುಣ್ ಕುಮಾರ್ ಶಿರೂರು, ರಾಜು ಖಾರ್ವಿ ಕೊಡೇರಿ, ಶರೀಫ್ ಉಪಸ್ಥಿತರಿದ್ದರು. ನಝೀರ್ ಪೊಲ್ಯ ಸ್ವಾಗತಿಸಿದರು. ಉಮೇಶ್ ಮಾರ್ಪಳ್ಳಿ ವಂದಿಸಿದರು. ರಾಜೇಶ್ ಕೆ.ಸಿ.ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!
Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!
Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ
KMC ಆಸ್ಪತ್ರೆಯಲ್ಲಿ ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್
Udupi: ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ
Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!
Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!
Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ
Mangaluru: ಪಟಾಕಿ ಮಾರಾಟಕ್ಕೆ 13 ಸ್ಥಳ ನಿಗದಿ; ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.