Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

ಪ್ರತಿ ಗಂಟೆಗೆ 100-110 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ, ಮುನ್ನೆಚ್ಚರಿಕೆಯಾಗಿ ಶಾಲೆಗಳಿಗೆ ರಜೆ, ಎನ್‌ಡಿಆರ್‌ಎಫ್‌ ತಂಡ ನಿಯೋಜನೆ

Team Udayavani, Oct 22, 2024, 7:47 PM IST

Odisha-Dana

ಹೊಸದಿಲ್ಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ‘ಡಾನಾ’ ಚಂಡಮಾರುತವು ಮುಂದಿನ 48 ಗಂಟೆಗಳಲ್ಲಿ ಅಂದರೆ ಗುರುವಾರ ರಾತ್ರಿ (ಅ.24) ಹಾಗೂ ಶುಕ್ರವಾರ (ಅ.25) ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ಸಾಗರ ದ್ವೀಪ ಪ್ರದೇಶಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

‘ಡಾನಾ’ ಚಂಡಮಾರುತ ಪ್ರಭಾವದಿಂದ ಬಿರುಗಾಳಿ ಸಹಿತ ದೇಶದ ಈ ವಿವಿಧ ರಾಜ್ಯಗಳಿಗೆ ಭರ್ಜರಿ ಮಳೆ ಆಗಲಿದೆ. ಪ್ರತಿ ಗಂಟೆಗೆ 100-110 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮುಂದಿನ ಎರಡು ದಿನದಲ್ಲಿ ಚಂಡಮಾರುತದ ವೇಗವೂ ಗಂಟೆಗೆ 120 ಕಿ.ಮೀ. ಹೆಚ್ಚಲಿದೆ. ಈ ಹವಾಮಾನ ವೈಪರೀತ್ಯ ತೀವ್ರಗೊಂಡು ಅ.24 25 ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸಲಿದೆ.

ಈ ಎರಡು ರಾಜ್ಯ ಸೇರಿ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಭಾರೀ ಮಳೆ ಆಗುತ್ತಿದೆ. ಇದೇ ಹವಾಮಾನ  ವೈಪರೀತ್ಯ ಮುಂದಿನ ಮೂರು ದಿನವೂ ಮುಂದುವರಿಯಲಿದೆ ಹಾಗಾಗಿ ಬಂಗಾಳ ಕೊಲ್ಲಿಗೆ ಬುಧವಾರವೇ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಮಾತನಾಡಿ ಚಂಡಮಾರುತದಿಂದಾಗಿ ಭಾರೀ ಗಾಳಿ ಮಳೆಯು  ಒಡಿಶಾಕ್ಕೆ ಹೆಚ್ಚು ಬಾಧೆಗೆ ಒಳಗಾಗಲಿದೆ ಎಂದು ಹೇಳಿದ್ದಾರೆ.

ಮಳೆ ಪ್ರವಾಹದಿಂದ ತೊಂದರೆ ಆಗಲಿರುವ ಸಂಭಾವ್ಯ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಎಲ್ಲ ನಿವಾಸಿಗಳ ಸ್ಥಳಾಂತರಿಸುವ’ಕಾರ್ಯ ಆರಂಭಿಸಬೇಕು ಎಂದು ಒಡಿಶಾ ಸರ್ಕಾರವು ಸೂಚಿಸಿದೆ. ಮುಂದಿನ ಮೂರು ದಿನಗಳಲ್ಲಿ ಡಾನಾ ಚಂಡಮಾರುತ ಮತ್ತಷ್ಟು ತೀವ್ರಗೊಳ್ಳಲಿದೆ. ಅಲ್ಲಿಯವರೆಗೆ ಈ ಮೇಲಿನ ಎರಡು ರಾಜ್ಯಗಳಿಗೆ ವಿಪರೀತ ಮಳೆ ಆರ್ಭಟ ಕಂಡು ಬರಲಿದೆ ಎಂಬ ಮುನ್ಸೂಚನೆ ಇದೆ.

ಎನ್‌ಡಿಆರ್‌ಎಫ್‌ ತಂಡ ನಿಯೋಜನೆ: ಶಾಲೆಗಳಿಗೆ ರಜೆ ಘೋಷಣೆ
ಒಡಿಶಾ ಹಾಗೂ ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ 11 ಎನ್‌ಡಿಆರ್‌ಎಫ್‌ ತಂಡವನ್ನು ಒಡಿಶಾ ಹಾಗೂ 9 ತಂಡಗಳ ಪಶ್ಚಿಮ ಬಂಗಾಳಕ್ಕೆ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ ಸೇನೆ, ನೌಕದಳ, ಕರಾವಳಿ ಕಾವಲು ಪಡೆ ಹಡಗು, ಹೆಲಿಕಾಪ್ಟರ್‌ಗಳ ಸನ್ನದ್ಧವಾಗಿಡಲಾಗಿದೆ. ಹಾಗೆಯೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಒಡಿಶಾಕ್ಕೆ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ರಾಜ್ಯದ 14 ಜಿಲ್ಲೆಯ ಶಾಲೆ- ಕಾಲೇಜು, ಸಮೂಹ ಶಿಕ್ಷಣ ಇಲಾಖೆಯು ಬುಧವಾರದಿಂದ ಶುಕ್ರವಾರದವರೆಗೆ ರಜೆ ಘೋಷಿಸಲಾಗಿದೆ ಎಂದು ವಿಶೇಷ ವಿಪತ್ತು ನಿರ್ವಹಣಾ ಆಯುಕ್ತ ಡಿ.ಕೆ.ಸಿಂಗ್‌ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

Suly-Aane

Belthangady: ಮಲವಂತಿಗೆ: ಮತ್ತೆ ಕಾಡಾನೆ ಹಾವಳಿ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

CM Siddaramaiah: ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ

C. P. Yogeshwara: ಬಿಜೆಪಿ ಬಿಟ್ಟು ಬರಲಿ, ಮತ್ತೆ ನೋಡೋಣ: ಡಿಕೆಶಿ

C. P. Yogeshwara: ಬಿಜೆಪಿ ಬಿಟ್ಟು ಬರಲಿ, ಮತ್ತೆ ನೋಡೋಣ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

He is Karunanidhi’s grandson, not apologizing for Sanatana controversy: Udayanidhi

Santana row: ಸನಾತನ ವಿವಾದಕ್ಕೆ ತಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳಲ್ಲ: ಉದಯನಿಧಿ

Police have discovered a new branch of Lashkar in Kashmir

Jammu Kashmir: ಲಷ್ಕರ್‌ನ ಹೊಸ ಶಾಖೆ ಪತ್ತೆ ಹಚ್ಚಿದ ಪೊಲೀಸರು

Fake bomb threat call for 50 flights in one day!

Threat Call; ಒಂದೇ ದಿನ 50 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ!

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Fake bomb threats to CRPF schools across the country

Threats: ದೇಶಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

BY Election: ಕಾಂಗ್ರೆಸ್‌ಗೆ ಚನ್ನಪಟ್ಟಣ, ಶಿಗ್ಗಾವಿಯೇ ಕಗ್ಗಂಟು

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

KEA: 2ನೇ ಸುತ್ತಿನ ಅನಂತರವೂ 16 ಸಾವಿರ ಇಂಜಿನಿಯರಿಂಗ್‌ ಸೀಟು ಉಳಿಕೆ

Suly-Aane

Belthangady: ಮಲವಂತಿಗೆ: ಮತ್ತೆ ಕಾಡಾನೆ ಹಾವಳಿ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Siddaramaiah: ಸ್ವಂತ ಮನೆ ಇಲ್ಲದ ಸಿಎಂ ಇದ್ದರೆಂದರೆ ಅದು ನಾನೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.