![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 22, 2024, 9:30 PM IST
ಧಾರವಾಡ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿ.ಪಿ.ಯೋಗೇಶ್ವರ್ ಅವರು ಪಕ್ಷಕ್ಕೆ ಬಂದರೆ ನಾನು ವೈಯಕ್ತಿಕವಾಗಿ ಸ್ವಾಗತಿಸುತ್ತೇನೆ. ನಮ್ಮ ಪಕ್ಷದ ಹೈಕಮಾಂಡ್ ಇದ್ದು, ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಮೇರೆಗೆ ನಮ್ಮ ಪಕ್ಷಕ್ಕೆ ಬಂದರೆ ದೊಡ್ಡ ಪ್ರಮಾಣದಲ್ಲಿ ನಾನು ಅವರಿಗೆ ಸ್ವಾಗತ ಮಾಡುತ್ತೇನೆ ಎಂದರು.
ಸಂಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಮಾತನಾಡಿದ ಲಾಡ್, ಕ್ಷೇತ್ರದ ಟಿಕೆಟ್ ವಿಚಾರ ಸದ್ಯಕ್ಕೆ ಬಗೆಹರಿದಿದ್ದು, ಆದರೆ ಯಾರಿಗೆ ಅಂತಿಮ ಆಗುತ್ತದೆ ಎಂಬುದನ್ನು ಕಾದು ನೋಡಬೇಕಷ್ಟೇ. ಸಂಸದ ತುಕಾರಾಂ ಪತ್ನಿಯ ಹೆಸರಿದೆ. ಆದರೆ ಇನ್ನೂ ಅಧಿಕೃತವಾಗಿ ಹೊರಗೆ ಬಂದಿಲ್ಲ. ನಮ್ಮ ತೀರ್ಮಾನ ನಾವು ಹೇಳಿದ್ದೇವೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನೋಡಬೇಕು ಎಂದರು.
ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಟಿಕೆಟ್ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಲ್ಲಿ ಲಿಂಗಾಯತ ಹಾಗೂ ಮುಸ್ಲಿಂ ಎಂಬುದಾಗಿ ಏನೂ ಇಲ್ಲ. ನಮ್ಮದು ಜಾತ್ಯಾತೀತ ಪಕ್ಷ. ಹೀಗಾಗಿ ನಾವೆಲ್ಲರನ್ನೂ ಒಂದೇ ರೀತಿ ನೋಡುತ್ತೇವೆ. ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಅಭ್ಯರ್ಥಿಯ ಗೆಲ್ಲಿಸುತ್ತೇವೆ. ನಮ್ಮ ಅನಿಸಿಕೆಗಳ ಬಹಿರಂಗವಾಗಿ ಹೇಳಲುಬಾರದು. ಎಲ್ಲ ವಿಚಾರಗಳನ್ನು ಪಕ್ಷದಲ್ಲಿ ಹೇಳಿಕೊಂಡಿದ್ದೇವೆ ಎಂದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.