Chikkamagaluru: ಬಾವನನ್ನು ಇಟ್ಟಿಗೆಯಿಂದ ಹೊಡೆದು ಕೊ*ಲೆ ಮಾಡಿದ ಭಾಮೈದ
Team Udayavani, Oct 22, 2024, 8:59 PM IST
ಚಿಕ್ಕಮಗಳೂರು: ಮನೆ ಮಾರಾಟ ಮಾಡಿದ್ದರೂ ಮನೆ ಖಾಲಿ ಮಾಡಿಲ್ಲವೆಂಬ ಕಾರಣಕ್ಕೆ ಬಾವನನ್ನು ಭಾಮೈದ ಇಟ್ಟಿಗೆಯಿಂದ ಹಲ್ಲೆ ನಡೆಸಿ ಕೊ*ಲೆ ಮಾಡಿರುವ ಘಟನೆ ಸೋಮವಾರ (ಅ.22) ನಗರದ ತಮಿಳು ಕಾಲೋನಿ ಬಡಾವಣೆಯಲ್ಲಿ ನಡೆದಿದೆ.
ಗೋಪಾಲ ಎಂಬಾತ ಕಳೆದ ಮೂರು ವರ್ಷಗಳ ಹಿಂದೆ 25 ಸಾವಿರ ರೂ.ಗೆ ತನ್ನ ಭಾವ ಮಂಜು ಅವರಿಗೆ ಮನೆ ಮಾರಾಟ ಮಾಡಿದ್ದನು. ಮನೆ ಮಾರಾಟ ಮಾಡಿದ್ದರು. ಮೂರು ವರ್ಷಗಳಿಂದ ಅದೇ ಮನೆಯಲ್ಲಿ ವಾಸವಾಗಿದ್ದನು. ಮನೆ ಕಾಲಿ ಮಾಡುವ ವಿಚಾರಕ್ಕೆ ಗೋಪಾಲ ಹಾಗೂ ಮಂಜು ನಡುವೆ ಈ ಹಿಂದೆ ಅನೇಕ ಬಾರೀ ಗಲಾಟೆ ನಡೆದಿತ್ತು.
ಸೋಮವಾರ ಗಲಾಟೆ ತಾರಕ್ಕಕೇರಿ ಗೋಪಾಲನೂ ಮಂಜು ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಮಂಜು ತಲೆಗೆ ತೀವ್ರ ಪೆಟ್ಟಾಗಿದ್ದು ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಮೃತಪಟ್ಟಿದ್ದಾನೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋಪಾಲ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru:ದತ್ತಮಾಲಾ ಅಭಿಯಾನ: ಜಿಲ್ಲಾಡಳಿತ ಷರತ್ತು
Chikkamagaluru: ಭಾರೀ ಮಳೆ; ರಸ್ತೆ ಕಾಣದೆ ಕಾರುಗಳು ಮುಖಾಮುಖಿ ಡಿಕ್ಕಿ
Chikkamagaluru; ಭಾರೀ ಮಳೆ ಸಾಧ್ಯತೆ: ಸಾರ್ವಜನಿಕರು, ಪ್ರವಾಸಿಗರಿಗೆ ಎಚ್ಚರಿಕೆ
Chikkamagaluru: ಕಾಫಿನಾಡಿನಲ್ಲಿ ಮಳೆಯ ಅಬ್ಬರ… ಸಾವಿರಾರು ಎಕರೆ ಬೆಳೆ ಜಲಾವೃತ
Kottigehara: ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಬೆಳೆ ನಷ್ಟ, ಕಂಗಾಲಾದ ರೈತರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.