Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ


Team Udayavani, Oct 22, 2024, 9:40 PM IST

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

ವಿಜಯಪುರ: ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್‌ ನಲ್ಲಿ ಸೆರೆಯಾಗಿದೆ. ಇದರ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳುಸುವಂತಿವೆ.

ಇಲ್ಲಿನ ನವಭಾಗ್ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅಕ್ಟೋಬರ್ 20ರ ಸಂಜೆ ಸಂಭವಿಸಿದ ಈ ಅವಘಡದಲ್ಲಿ ನಿಖಿತಾ ಅರವಿಂದ ಬಿರಾದಾರ (21) ಎಂಬ ಯುವತಿ ಮೃತಪಟ್ಟಿದ್ದರು. ನಿಖಿತಾ ಹಾಗೂ ಮತ್ತಿಬ್ಬರು ಗೆಳೆಯತಿಯರು ಸೇರಿ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತು ಆಟವಾಡುತ್ತಿದ್ದರು. ಇದೀಗ ಯುವತಿಯ ಪೋಷಕರ ಮೊಬೈಲ್‌ ನಲ್ಲಿ ಅಂದಿನ ಘಟನೆಯ ಕೊನೆ ಕ್ಷಣಗಳು ಸೆರೆಯಾಗಿರುವುದು ಬೆಳಕಿಗೆ ಬಂದಿದೆ.

ತೊಟ್ಟಿಲಿನಲ್ಲಿ ಕುಳಿತಿದ್ದಾಗ ನಿಖಿತಾ ಅವರಿಗೆ ಹಾಕಿದ್ದ ಸೇಫ್ಟಿ ಬೆಲ್ಟ್ ಸಡಿಲಗೊಂಡಿದೆ. ಆಗ ತೊಟ್ಟಿಲು ತಲೆ ಕೆಳಗೆ, ಮೇಲೆ ಮಾಡಿ ತೂಗುತ್ತಿರುವವಾಗಲೇ ಭಯದಿಂದ ಚೀರಾಟ ಮಾಡಿದ್ದಾರೆ. ಈ ವೇಳೆ, ನಿಖಿತಾ ತಾಯಿ ಗೀತಾ ಕೂಡ ರೇಂಜರ್ ಸ್ವಿಂಗ್ ಯಂತ್ರ ನಿಲ್ಲಿಸುವಂತೆ ಆಪರೇಟರ್ ಬಳಿ ಪದೇ ಪದೇ ಕೇಳಿಕೊಂಡಿದ್ದಾರೆ. ಆದರೂ, ಯಂತ್ರವನ್ನು ಆಪರೇಟರ್ ನಿಲ್ಲಿಸಿಲ್ಲ. ಇದರಿಂದ ನಿಖಿತಾ ಕೆಳಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಫಿಶ್ ಟನಲ್ ಎಕ್ಸ್ಪೋಗೆ ಬಂದಿದ್ದ ಜನರು ಸಹ ಓಡಿ ಬಂದಿರುವ ದೃಶ್ಯಗಳು ಮೊಬೈಲ್‌ನಲ್ಲಿ ದಾಖಲಾಗಿವೆ.

ಆದರೆ, ಕೆಳಗಡೆ ಬಿದ್ದ ರಭಸಕ್ಕೆ ನಿಖಿತಾ ಅವರ ತಲೆ ಮತ್ತು ಕಾಲುಗಳಿಗೆ ತೀವ್ರವಾಗಿ ಪೆಟ್ಟಾಗಿದೆ. ನಂತರದಲ್ಲಿ ಪೋಷಕರೇ ಆಟೋದಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅದೇ ದಿನ ಚಿಕಿತ್ಸೆ ಫಲಕಾರಿಯಾಗದೆ ನಿಖಿತಾ ಕೊನೆಯುಸಿರೆಳೆದಿದ್ದರು. ಕಳಪೆ ಸೇಫ್ಟಿ ಬೆಲ್ಟ್ ಕಾರಣದಿಂದಲೇ ಈ ದುರಂತ ನಡೆದಿದೆ ಎಂದು ಆರೋಪಿಸಲಾಗಿದೆ.

ಇಬ್ಬರು ಬಂಧನ: ಈ ಘಟನೆ ಸಂಬಂಧ ಫಿಶ್ ಟನಲ್ ಎಕ್ಸ್ಪೋ ಮ್ಯಾನೇಜನ್, ಆಪರೇಟರ್ಸ್ ಹಾಗೂ ಇತರರ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ, ಆಪರೇಟರ್ ಮತ್ತು ಕ್ಯಾಶಿಯರ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಜತೆಗೆ ಮ್ಯಾನೇಜರ್ ರಮೇಶ ಬಾಬು ಎಂಬಾತನನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಟಾಪ್ ನ್ಯೂಸ್

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

2-vijayapura

Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.