D.K. Shivakumar: ಮಳೆ ಹಾನಿ ನಿರ್ವಹಣೆಗೆ ಪ್ರತ್ಯೇಕ ತಂಡ
Team Udayavani, Oct 23, 2024, 12:00 AM IST
ಬೆಂಗಳೂರು: ದುಬಾೖ ಸೇರಿದಂತೆ ಹಲವೆಡೆ ಮಳೆ ಆಗುತ್ತಿದೆ. ಬರಪೀಡಿತ ಪ್ರದೇಶದಲ್ಲಿಯೂ ಮಳೆ ಆಗುತ್ತಿದೆ. ಪ್ರಕೃತಿ ಮುಂದೆ ಯಾರೂ ಇಲ್ಲ. ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ ಮತ್ತು ಅದರಿಂದಾದ ಅವಾಂತರದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ನಗರದ ಮಳೆ ಕುರಿತು ಮಾಹಿತಿ ನೀಡಿರುವ ಅವರು, ಮಳೆಯಿಂದಾದ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆ ದಿ ರುವೆ, ಎಲ್ಲರಿಗೂ ಸೂಚನೆ ಕೂಡ ನೀಡಿದ್ದೇನೆ. ಐದು ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್ಡಿಆರ್ಎಫ್)ಗಳು ಕಾರ್ಯನಿರ್ವಹಿಸುತ್ತಿವೆ.
ಆದರೆ, ಪ್ರಕೃತಿ ಮುಂದೆ ಯಾರೂ ಇಲ್ಲ. ಮಳೆ ಹಾನಿ ನಿರ್ವಹಣೆಗಾಗಿ ಪ್ರತ್ಯೇಕ ತಂಡ ಮಾಡಿದ್ದೇವೆ. ಎಲ್ಲೆಲ್ಲಿ ಮಳೆ ಸಮಸ್ಯೆ ಇದೆ ವರದಿ ನೀಡಲು ಸೂಚಿಸಿದ್ದೇನೆ. ನಾವು ಇಡೀ ತಂಡದಿಂದ ಮಾಹಿತಿ ತರಿಸಿಕೊಂಡಿದ್ದೇನೆ. ಸೋಮವಾರ ರಾತ್ರಿ ಕೂಡ ಪರಿಶೀಲನೆ ಮಾಡಿದ್ದೆ. ಎಲ್ಲ ಕಡೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.