BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸುವಂತೆ ಕಾರ್ಯಕರ್ತರ ಸಭೆಯಲ್ಲಿ ಒತ್ತಡ ನಾಮಪತ್ರ ಸಲ್ಲಿಕೆಗೆ ಇನ್ನೂ 3 ದಿನ ಇದೆ: ಕುಮಾರಸ್ವಾಮಿ

Team Udayavani, Oct 23, 2024, 6:20 AM IST

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರು ಎನ್ನುವುದು ಗುಟ್ಟಾಗಿಯೇ ಉಳಿದಿದ್ದು, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಸಮ್ಮುಖದಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲೂ ಈ ಗುಟ್ಟು ರಟ್ಟಾಗಲಿಲ್ಲ. ಮಳೆಯಿಂದಾಗಿ ಸಭೆ ಅರ್ಧಕ್ಕೆ ಮೊಟಕುಗೊಂಡಿದ್ದು ಎನ್‌ಡಿಎ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿಯಿತು.

ಈಗಾಗಲೇ ಶಿಗ್ಗಾವಿ, ಸಂಡೂರು ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಇದರಿಂದ ಜೆಡಿಎಸ್‌ ಮೇಲೆ ಒತ್ತಡವೂ ಹೆಚ್ಚಿದ್ದು ದಿನೇದಿನೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗುತ್ತಲೇ ಇದೆ. ಅದರಲ್ಲೂ ಪ್ರಬಲ ಆಕಾಂಕ್ಷಿಯಾಗಿರುವ ಸಿ.ಪಿ. ಯೋಗೇಶ್ವರ್‌ ಕೂಡ ಹಕ್ಕು ಪ್ರತಿಪಾದಿಸುತ್ತಿದ್ದು ಒಂದು ಹೆಜ್ಜೆ ಮುಂದೆ ಹೋಗಿ ಮೇಲ್ಮನೆಯ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿರುವುದರಿಂದ ಜೆಡಿಎಸ್‌ ಮೇಲಿನ ಭಾರ ಹೆಚ್ಚಾದಂತಾಗಿದೆ.

ಮುಂದಿನ ದಾರಿ ಕಾಣದೆ ಸೋಮವಾರ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ನಿವಾಸದಲ್ಲಿ ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಸಭೆ ನಡೆಸಿದ್ದರು. ಈ ವೇಳೆ ಯೋಗೇಶ್ವರ್‌ ವಿರುದ್ಧ ಅಸಮಾಧಾನ ವ್ಯಕ್ತವಾಗಿತ್ತು. ಈ ಸಭೆಯಲ್ಲಿ ನಿರ್ಧಾರವಾದಂತೆ ಮಂಗಳವಾರ ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಕಾರ್ಯಕರ್ತರ ಸಭೆಯನ್ನೂ ಕರೆಯಲಾಗಿತ್ತು.

ಚನ್ನಪಟ್ಟಣವೂ ಉಳಿಯಬೇಕು, ಮೈತ್ರಿಯೂ ಅಳಿಯಬಾರದು
ಬಹುತೇಕ ಮುಖಂಡರು, ಕಾರ್ಯಕರ್ತರು ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹಾಕಿದರೆ, ಇನ್ನು ಕೆಲವರು ಕುಮಾರಸ್ವಾಮಿ ಅವರ ವಿವೇಚನೆಗೇ ಬಿಡುವುದಾಗಿ ಹೇಳಿದರು. ಬಿಜೆಪಿ ವರಿಷ್ಠರು ಯೋಗೇಶ್ವರ್‌ ಅವರನ್ನು ಕಟ್ಟಿ ಹಾಕಬೇಕು. ಚನ್ನಪಟ್ಟಣ ಕ್ಷೇತ್ರವೂ ಉಳಿಯಬೇಕು, ಮೈತ್ರಿಯೂ ಅಳಿಯಬಾರದು. ಪಕ್ಷ ಏನೇ ನಿರ್ಧಾರ ಕೈಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ಕೆಲಸ ಮಾಡುತ್ತೇವೆ ಎಂದು ಪಕ್ಷದ ಮೇಲೆ ಭಾರ ಹಾಕಿದರು. ನಿಖೀಲ್‌ ಕುಮಾರಸ್ವಾಮಿ ಭಾಷಣ ಆರಂಭಿಸಿದ ಕೆಲವು ಹೊತ್ತಿನ ಅನಂತರ ನೀವು ಸ್ಪರ್ಧಿಸಬೇಕು, ನೀವು ಸ್ಪರ್ಧಿಸುವುದನ್ನು ಘೋಷಿಸಬೇಕು, ಕುಮಾರಣ್ಣ… ನಿಖೀಲಣ್ಣನನ್ನೇ ನಿಲ್ಲಿಸಿ ಎಂದು ವೇದಿಕೆ ಮುಂಭಾಗಕ್ಕೆ ಬಂದು ಪ್ರಹಸನ ನಡೆಸಿದರು. ನಿಖಿಲ್‌ ಗೆ ಮಾತನಾಡಲು ಬಿಡಿ ಎಂದ ಕುಮಾರಸ್ವಾಮಿ ಮಾತಿಗೆ ಕೆಲ ಕಾರ್ಯಕರ್ತರು ಸುಮ್ಮನಾದರು. ಮತ್ತೆ ಕೆಲವರು ಒತ್ತಡ ಹಾಕಿದ್ದರಿಂದ ನಿಖೀಲ್‌ ಭಾಷಣ ಅರ್ಧಕ್ಕೆ ನಿಲ್ಲಿಸಿ, ಕುಮಾರಸ್ವಾಮಿ ಅವರನ್ನು ಮಾತನಾಡಲು ಅನುವು ಮಾಡಿಕೊಟ್ಟರು.

ಕಾರ್ಯಕರ್ತರ ಭಾವನೆಯೇ ನನ್ನ ತೀರ್ಮಾನ
ಭಾಷಣದುದ್ದಕ್ಕೂ ಬಿಜೆಪಿ ರಾಷ್ಟ್ರೀಯ ನಾಯಕರ ನಡೆಯನ್ನು ಶ್ಲಾಘಿಸಿದ ಕುಮಾರಸ್ವಾಮಿ, ಈ ಚುನಾವಣೆ ನಮ್ಮ ಪಾಲಿಗೆ ಒಂದು ರೀತಿಯ ಅಗ್ನಿಪರೀಕ್ಷೆ. ಹಾಗೆಂದು ಹೆದರಿ ಕುಳಿತಿಲ್ಲ. ನೆಲದವರೆಗೂ ಬಗ್ಗಿದ್ದೇನೆ. ಇನ್ನು ಬಗ್ಗಲು ನನ್ನಿಂದ ಸಾಧ್ಯವಿಲ್ಲ ಎಂದು ಯೋಗೇಶ್ವರ್‌ಗೆ ಟಾಂಗ್‌ ನೀಡಿದರಲ್ಲದೆ, ಕಾರ್ಯಕರ್ತರ ಭಾವನೆಯೇ ನನ್ನ ಅಂತಿಮ ತೀರ್ಮಾನ. ಅದಕ್ಕೆ ವಿರುದ್ಧವಾಗಿ ನಿರ್ಧಾರ ಮಾಡುವುದಿಲ್ಲ ಎಂದರು. ಆದರೆ ಎಲ್ಲಿಯೂ ನಿಖೀಲ್‌ ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ನೇರವಾಗಿ ಏನನ್ನೂ ಹೇಳದ ಕುಮಾರಸ್ವಾಮಿ, ಬೇರಾವ ಅಭ್ಯರ್ಥಿ ಬಗ್ಗೆಯೂ ಚಕಾರ ಎತ್ತಲಿಲ್ಲ. ಕುಮಾರಸ್ವಾಮಿ ಭಾಷಣದ ನಡುವೆ ಮಳೆ ಆರಂಭವಾದ್ದರಿಂದ ಸಭೆಯೂ ಮೊಟಕಾಯಿತು.

ಮಾತೇ ಆಡದೆ ಕುಳಿತಿದ್ದ ಎಚ್‌ಡಿಡಿ
ಇಡೀ ಸಭೆಯುದ್ದಕ್ಕೂ ಎಲ್ಲರ ಮಾತು ಆಲಿಸುತ್ತ ಕುಳಿತಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಸಭೆಯಲ್ಲೂ ಮಾತನಾಡಲಿಲ್ಲ. ಸಭೆ ಮುಗಿದ ಅನಂತರವೂ ಮಾತನಾಡಲಿಲ್ಲ. ಯೋಗೇಶ್ವರ್‌ ಕಾಂಗ್ರೆಸ್‌ ಸೇರುತ್ತಾರೆ ಎಂದು ಆರೋಪಿಸಿದ ಕುಮಾರಸ್ವಾಮಿ, ಯೋಗೇಶ್ವರ್‌ ವಿಚಾರದಲ್ಲಿ ಬಿಜೆಪಿ ಯಾವ ನಿರ್ಣಯ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡುತ್ತೇವೆ. ನಾಮಪತ್ರ ಸಲ್ಲಿಕೆಗೆ ಇನ್ನೂ 3 ದಿನ ಅವಕಾಶ ಇದೆ ಎಂದರೇ ಹೊರತು, ಕೊನೆಗೂ ಎನ್‌ಡಿಎ ಅಭ್ಯರ್ಥಿ ಯಾರು ಎನ್ನುವ ಗುಟ್ಟು ರಟ್ಟಾಗಲೇ ಇಲ್ಲ.

ಟಾಪ್ ನ್ಯೂಸ್

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a–a-yogi

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

1

Sandalwood: ಸುಂದರ ರಾಕ್ಷಸಿ ಇವಳು!

Shindhe

Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ

1-a-bengg

Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.