Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ
Team Udayavani, Oct 23, 2024, 12:44 AM IST
ಕೋಲಾರ: ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ 5 ತಿಂಗಳ ಹೆಣ್ಣು ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು, ಹೆಚ್ಚಿನ ಹಣ ಖರ್ಚಾಗುತ್ತದೆ ಎಂದು ಹೆದರಿ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋಗಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶ ಮೂಲದ ನೆಲ್ಲೂರಿನ ನಾಗರಾಜು-ರಂಗಮ್ಮ ದಂಪತಿ, ಪಟ್ಟಣದಲ್ಲಿ ಚಿಟ್ಟಬಾಬು ಅವರ ಬಳಿ ಸಿಮೆಂಟ್ ರಿಂಗ್ ತಯಾರಿಸುವ ಕೆಲಸ ಮಾಡುತ್ತಿದ್ದರು. ಮಗು ರಾಗಗೆ ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಜೂ. 29ರಂದು ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ತೋರಿಸಿದರೂ ಚೇತರಿಕೆ ಕಂಡಿರಲಿಲ್ಲ.
ವೈದ್ಯರ ಸಲಹೆ ಮೇರೆಗೆ ಮಗುವನ್ನು ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ಜೂ. 30ರಂದು ದಾಖಲಿಸಿದ್ದು, ಹೆಣ್ಣು ಮಗು ಎಂಬ ಅಸಹನೆ ಹಾಗೂ ಹೆಚ್ಚಿನ ಹಣ ಖರ್ಚಾಗುತ್ತದೆ ಎಂದು ಹೆದರಿ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ತಿಳಿಸಿದ್ದಾರೆ.
ಇಂದಿರಾಗಾಂಧಿ ಆಸ್ಪತ್ರೆ ಸಿಬ್ಬಂದಿ ಮಗುವಿನ ದಾಖಲೆ ಪರಿಶೀಲಿಸಿ, ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿಯ ವಿಶೇಷ ದತ್ತು ಸಂಸ್ಥೆಯನ್ನು ಸಂಪರ್ಕಿಸಿ ಮಗುವಿನ ಪೋಷಣೆಗಾಗಿ ಅಲ್ಲಿ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.