Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
Team Udayavani, Oct 23, 2024, 1:40 AM IST
ಮಡಂತ್ಯಾರು: ಗೇರುಕಟ್ಟೆ ಪೇಟೆಯ ಸಮೀಪದ ತೋಟದ ಕೆರೆಯಲ್ಲಿ ಕೊಳೆತ ಶವ ಅ.22ರಂದು ಸಂಜೆ ಪತ್ತೆಯಾಗಿದೆ.
ಗೇರುಕಟ್ಟೆ ಏರೋಡಿ ರಸ್ತೆ ಪಕ್ಕದ ಖಾಸಗಿ ವ್ಯಕ್ತಿಯೋರ್ವರಿಗೆ ಸೇರಿದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸುಮಾರು ಏಳು ದಿನಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದೆಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ. ಶವ ಕೊಳೆತು ಹೋಗಿದೆ.
ಮೃತಪಟ್ಟ ವ್ಯಕ್ತಿಯ ಬಗ್ಗೆ ಮಾಹಿತಿ ಲಭ್ಯವಿಲ್ಲ. ಆತ್ಮಹತ್ಯೆಯೋ, ಕೊಲೆಯೋ ಎಂದು ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.