Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ
Team Udayavani, Oct 23, 2024, 1:45 AM IST
ಪುತ್ತೂರು: ಅಶೋಕ್ ಲೇಲ್ಯಾಂಡ್ ಕಂಪೆನಿಯ ಬಡಾ ದೋಸ್ತ್ ವಾಹನವನ್ನು ಖರೀದಿಸಿದ ಬಳಿಕ ಅದರಲ್ಲಿ ನಿರಂತರ ಸಮಸ್ಯೆಗಳು ಉಂಟಾದ ಕಾರಣ ದ.ಕ. ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದೂರದಾರರ ಪರವಾಗಿ ತೀರ್ಪು ನೀಡಿದೆ.
ಪುತ್ತೂರಿನ ಪದ್ಮನಾಭ ಪ್ರಭು ಅವರು 2021ರಲ್ಲಿ ಖರೀದಿಸಿದ ಈ ವಾಹನದಲ್ಲಿ ನಿರಂತರ ಸಮಸ್ಯೆ ಕಂಡು ಬಂದಿದ್ದವು. ಈ ಬಗ್ಗೆ ಅವರು 2022ರಲ್ಲಿ ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ತಜ್ಞರಿಂದ ವಾಹನದ ಪರಿಶೀಲನೆಗೂ ಅರ್ಜಿ ಸಲ್ಲಿಸಲಾಗಿತ್ತು.
ದೂರಿನಲ್ಲಿ ಅಶೋಕ ಲೈಲ್ಯಾಂಡ್ ಕಂಪೆನಿ ಹಾಗೂ ಮಂಗಳೂರು ಹಾಗೂ ಪುತ್ತೂರಿನ ಡೀಲರ್ಗಳನ್ನು ಪ್ರತಿವಾದಿಗಳೆಂದು ಹೆಸರಿಸಲಾಗಿತ್ತು. ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ ಸದ್ರಿ ವಾಹನದಲ್ಲಿ ತಯಾರಿಕ ದೋಷ ಇದೆ ಎಂಬ ದೂರುದಾರರ ವಾದವನ್ನು ಎತ್ತಿ ಹಿಡಿದಿದೆ.
ಪ್ರತಿವಾದಿಗಳಾದ ಅಶೋಕ್ ಲೇಲ್ಯಾಂಡ್ ಕಂಪೆನಿ ಮತ್ತು ಡೀಲರ್ಗಳು ದೂರುದಾರರಿಗೆ ವಾಹನದ ಮೊತ್ತ ರೂ. 7,50,321ರೂ. ಅನ್ನು ಮೊತ್ತವನ್ನು ಶೇ. 6 ಬಡ್ಡಿದರದಲ್ಲಿ ಮರಳಿಸುವಂತೆ ಆದೇಶ ನೀಡಿದೆ.
ಜತೆಗೆ ದೂರುದಾರರಿಗೆ ಆಗಿರುವ ಮಾನಸಿಕ ವೇದನೆಗೆ 25 ಸಾ. ರೂ. ಹಾಗೂ ವ್ಯಾಜ್ಯ ವೆಚ್ಚವಾಗಿ 10 ಸಾ. ರೂ. ನೀಡುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ. ದೂರುದಾರರ ಪರವಾಗಿ ಪುತ್ತೂರಿನ ಹರೀಶ್ ಕುಮಾರ್ ಬಳಕ್ಕ, ದೀಪಕ್ ಬೋಳುವಾರು, ಭುವನೇಶ್ವರಿ ಎಂ., ರಕ್ಷಿತಾ ಬಂಗೇರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrestling: ಪ್ರತಿಭಟನೆಗೆ ಉತ್ತೇಜಿಸಿದ್ದೇ ಬಬಿತಾ: ಸಾಕ್ಷಿ ಮಲಿಕ್ ಆರೋಪ
Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್ಟಾಪ್
Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ
Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ
Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.