Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್ ದಾಳಿ
Team Udayavani, Oct 23, 2024, 3:17 AM IST
ಕುಂಬಳೆ: ಸಿಪಿಸಿಆರ್ಐ, ಎಸ್ಬಿಐ, ಕೇಂದ್ರೀಯ ವಿದ್ಯಾಲಯ, ಕರ್ನಾಟಕದ ಅಬಕಾರಿ ಇಲಾಖೆ ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಭರವಸೆ ನೀಡಿ ಕೋಟ್ಯಂತರ ರೂ. ವಂಚಿಸಿದ ಮಾಜಿ ಡಿವೈಎಫ್ಐ ನೇತಾರೆ, ಬಾಡೂರು ಶಾಲೆಯ ಅಧ್ಯಾಪಕಿ ಸಚಿತಾ ರೈ ಮನೆಗೆ ಕುಂಬಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಆದರೆ ಮನೆಯಿಂದ ಹೆಚ್ಚಿನ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಮೊದಲೇ ಮನೆಯಿಂದ ದಾಖಲೆಗಳನ್ನು ಸಾಗಿಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ. ಸಚಿತಾ ಕೋಯಿಕ್ಕೋಡ್ನಲ್ಲಿ ಪತಿಯ ಜತೆ ಇದ್ದರೆಂದೂ, ಈಗ ಎಲ್ಲಿದ್ದಾಳೆ ಎಂಬುದು ತಿಳಿದಿಲ್ಲ ಎಂದು ಸಂಬಂಧಿಕರು ಪೊಲೀಸರಲ್ಲಿ ತಿಳಿಸಿದ್ದಾರೆ.
ಇದೇ ವೇಳೆ ಸಚಿತಾ ರೈ ನಿರೀಕ್ಷಣ ಜಾಮೀನಿಗಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ಅಕೌಂಟ್ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಲಿದ್ದಾರೆ. ಸುಮಾರು 5 ಕೋಟಿ ರೂಪಾಯಿ ವಂಚನೆ ನಡೆಸಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Channapatna By-Election: ಯೋಗೇಶ್ವರ್ ಎನ್ಡಿಎ ಅಭ್ಯರ್ಥಿ?
Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
Hockey: ಜರ್ಮನಿ ವಿರುದ್ಧ “ಪ್ಯಾರಿಸ್ ಪ್ರತಿಕಾರ’ಕ್ಕೆ ಸಿದ್ಧತೆ
IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.